Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...