Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...