Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...