Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...