Homeಅಂತರಾಷ್ಟ್ರೀಯನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

ನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

- Advertisement -
- Advertisement -

ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿಗಳ ಬಲವನ್ನು 50% ರಷ್ಟು ಕಡಿಮೆಗೊಳಿಸುವುದಾಗಿ ಭಾರತ ಮಂಗಳವಾರ ಹೇಳಿದೆ. ಅಲ್ಲದೆ ಉಭಯ ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದಗಳ ಮಧ್ಯೆ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಅರ್ಧದಷ್ಟು ಅಧಿಕಾರಿಗಳನ್ನು ಕೂಡ ವಾಪಸ್‌ ಕರೆಸಿಕೊಳ್ಳಲಿದೆ.

ವಿದೇಶಾಂಗ ಸಚಿವಾಲಯವು ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ ಅಫೈರ್‌ಗಳಾದ ಸೈಯದ್ ಹೈದರ್ ಷಾ ಅವರನ್ನು ಕರೆದು ತನ್ನ ಕಾರ್ಯಾಚರಣೆಯ ಅಧಿಕಾರಿಗಳ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೇಹುಗಾರಿಕೆ ಆರೋಪದ ಮೇಲೆ ಇಬ್ಬರು ಪಾಕಿಸ್ತಾನ ಹೈಕಮಿಷನ್ ನೌಕರರನ್ನು ಕೇಂದ್ರ ಹೊರಹಾಕಿತು. ಅಬಿದ್ ಹುಸೇನ್ ಮತ್ತು ಮೊಹಮ್ಮದ್ ತಾಹಿರ್ ನಡವಳಿಕೆಯ ಆರೋಪವನ್ನು “ರಾಜತಾಂತ್ರಿಕ ಕಾರ್ಯಾಚರಣೆಯ ಸದಸ್ಯರಾಗಿ ಅವರ ಸ್ಥಾನಮಾನಕ್ಕೆ ಹೊಂದಿಕೆಯಾಗುವುದಿಲ್ಲ” ಎಂದು ಹೇಳಿತ್ತು ಹಾಗೂ 24 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಕೇಳಲಾಗಿತ್ತು.

“ಅವರ ಅಧಿಕಾರಿಗಳು ಹೈಕಮಿಷನ್ ನಲ್ಲಿ ತಮ್ಮ ಸವಲತ್ತು ಸ್ಥಾನಮಾನಕ್ಕೆ ಅನುಗುಣವಾಗಿರದ ಕ್ರಮಗಳಲ್ಲಿ ಪಾಲ್ಗೊಂಡಿದ್ದರೆ, ಪಾಕಿಸ್ತಾನವು ಸಮಾನಾಂತರವಾಗಿ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನ್ನ ಅಧಿಕಾರಿಗಳನ್ನು ತಮ್ಮ ನ್ಯಾಯಸಮ್ಮತ ರಾಜತಾಂತ್ರಿಕ ಕಾರ್ಯಗಳನ್ನು ನಿರ್ವಹಿಸದಂತೆ ಬೆದರಿಸುವ ನಿರಂತರ ಅಭಿಯಾನದಲ್ಲಿ ತೊಡಗಿದೆ”ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಉಚ್ಚಾಟನೆಯ ಹದಿನೈದು ದಿನಗಳ ನಂತರ, ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಪ್ರಜೆಗಳು ಹಲವಾರು ಗಂಟೆಗಳ ಕಾಲ ನಾಪತ್ತೆಯಾಗಿದ್ದರು. ಆದರೆ ಭಾರತವು ತೀವ್ರ ಪ್ರತಿಭಟನೆ ನಡೆಸಿದ ನಂತರ ಅವರನ್ನು ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು.

ಗನ್‌ಪಾಯಿಂಟ್‌ ಇಟ್ಟು ಅಪಹರಣ ಮಾಡಿದ ಪಾಕಿಸ್ತಾನವು ಭಾರತೀಯ ಅಧಿಕಾರಿಗಳನ್ನು ಬೆದರಿಸಲು ಎಷ್ಟರ ಮಟ್ಟಿಗೆ ಪ್ರಯತ್ನಿಸಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ಜೂನ್ 22, 2020 ರಂದು ಭಾರತಕ್ಕೆ ಮರಳಿದ ಈ ಅಧಿಕಾರಿಗಳು ಪಾಕಿಸ್ತಾನದ ಏಜೆನ್ಸಿಗಳ ಕೈಯಲ್ಲಿ ಅನುಭವಿಸಿದ ಅನಾಗರಿಕ ನಡೆಯ ಗ್ರಾಫಿಕ್ ವಿವರಗಳನ್ನು ಒದಗಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಪಾಕಿಸ್ತಾನದ ನಡವಳಿಕೆಯು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಸಮಾವೇಶ 1961 ಮತ್ತು 1992 ರ ನೀತಿ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಭಾರತ ಪುನರುಚ್ಚರಿಸಿದೆ. ಇದು ಪ್ರತಿಕೂಲ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕರ ಸುರಕ್ಷತೆಯನ್ನು ಖಾತ್ರಿಗೊಳಿಸುತ್ತದೆ.


ಓದಿ: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?: ಫ್ಯಾಕ್ಟ್‌ಚೆಕ್‌


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...