Homeಅಂತರಾಷ್ಟ್ರೀಯನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

ನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

- Advertisement -
- Advertisement -

ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿಗಳ ಬಲವನ್ನು 50% ರಷ್ಟು ಕಡಿಮೆಗೊಳಿಸುವುದಾಗಿ ಭಾರತ ಮಂಗಳವಾರ ಹೇಳಿದೆ. ಅಲ್ಲದೆ ಉಭಯ ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದಗಳ ಮಧ್ಯೆ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಅರ್ಧದಷ್ಟು ಅಧಿಕಾರಿಗಳನ್ನು ಕೂಡ ವಾಪಸ್‌ ಕರೆಸಿಕೊಳ್ಳಲಿದೆ.

ವಿದೇಶಾಂಗ ಸಚಿವಾಲಯವು ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ ಅಫೈರ್‌ಗಳಾದ ಸೈಯದ್ ಹೈದರ್ ಷಾ ಅವರನ್ನು ಕರೆದು ತನ್ನ ಕಾರ್ಯಾಚರಣೆಯ ಅಧಿಕಾರಿಗಳ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೇಹುಗಾರಿಕೆ ಆರೋಪದ ಮೇಲೆ ಇಬ್ಬರು ಪಾಕಿಸ್ತಾನ ಹೈಕಮಿಷನ್ ನೌಕರರನ್ನು ಕೇಂದ್ರ ಹೊರಹಾಕಿತು. ಅಬಿದ್ ಹುಸೇನ್ ಮತ್ತು ಮೊಹಮ್ಮದ್ ತಾಹಿರ್ ನಡವಳಿಕೆಯ ಆರೋಪವನ್ನು “ರಾಜತಾಂತ್ರಿಕ ಕಾರ್ಯಾಚರಣೆಯ ಸದಸ್ಯರಾಗಿ ಅವರ ಸ್ಥಾನಮಾನಕ್ಕೆ ಹೊಂದಿಕೆಯಾಗುವುದಿಲ್ಲ” ಎಂದು ಹೇಳಿತ್ತು ಹಾಗೂ 24 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಕೇಳಲಾಗಿತ್ತು.

“ಅವರ ಅಧಿಕಾರಿಗಳು ಹೈಕಮಿಷನ್ ನಲ್ಲಿ ತಮ್ಮ ಸವಲತ್ತು ಸ್ಥಾನಮಾನಕ್ಕೆ ಅನುಗುಣವಾಗಿರದ ಕ್ರಮಗಳಲ್ಲಿ ಪಾಲ್ಗೊಂಡಿದ್ದರೆ, ಪಾಕಿಸ್ತಾನವು ಸಮಾನಾಂತರವಾಗಿ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನ್ನ ಅಧಿಕಾರಿಗಳನ್ನು ತಮ್ಮ ನ್ಯಾಯಸಮ್ಮತ ರಾಜತಾಂತ್ರಿಕ ಕಾರ್ಯಗಳನ್ನು ನಿರ್ವಹಿಸದಂತೆ ಬೆದರಿಸುವ ನಿರಂತರ ಅಭಿಯಾನದಲ್ಲಿ ತೊಡಗಿದೆ”ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಉಚ್ಚಾಟನೆಯ ಹದಿನೈದು ದಿನಗಳ ನಂತರ, ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಪ್ರಜೆಗಳು ಹಲವಾರು ಗಂಟೆಗಳ ಕಾಲ ನಾಪತ್ತೆಯಾಗಿದ್ದರು. ಆದರೆ ಭಾರತವು ತೀವ್ರ ಪ್ರತಿಭಟನೆ ನಡೆಸಿದ ನಂತರ ಅವರನ್ನು ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು.

ಗನ್‌ಪಾಯಿಂಟ್‌ ಇಟ್ಟು ಅಪಹರಣ ಮಾಡಿದ ಪಾಕಿಸ್ತಾನವು ಭಾರತೀಯ ಅಧಿಕಾರಿಗಳನ್ನು ಬೆದರಿಸಲು ಎಷ್ಟರ ಮಟ್ಟಿಗೆ ಪ್ರಯತ್ನಿಸಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ಜೂನ್ 22, 2020 ರಂದು ಭಾರತಕ್ಕೆ ಮರಳಿದ ಈ ಅಧಿಕಾರಿಗಳು ಪಾಕಿಸ್ತಾನದ ಏಜೆನ್ಸಿಗಳ ಕೈಯಲ್ಲಿ ಅನುಭವಿಸಿದ ಅನಾಗರಿಕ ನಡೆಯ ಗ್ರಾಫಿಕ್ ವಿವರಗಳನ್ನು ಒದಗಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಪಾಕಿಸ್ತಾನದ ನಡವಳಿಕೆಯು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಸಮಾವೇಶ 1961 ಮತ್ತು 1992 ರ ನೀತಿ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಭಾರತ ಪುನರುಚ್ಚರಿಸಿದೆ. ಇದು ಪ್ರತಿಕೂಲ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕರ ಸುರಕ್ಷತೆಯನ್ನು ಖಾತ್ರಿಗೊಳಿಸುತ್ತದೆ.


ಓದಿ: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?: ಫ್ಯಾಕ್ಟ್‌ಚೆಕ್‌


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂವಿಧಾನ-ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ

0
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭಗೊಂಡಿದ್ದು, ಮತದಾರರು ಎಚ್ಚರಿಕೆಯಿಂದ ಮತದಾನ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. "ಆರ್ಥಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಹೊಸ...