Homeಅಂತರಾಷ್ಟ್ರೀಯನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

ನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

- Advertisement -
- Advertisement -

ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿಗಳ ಬಲವನ್ನು 50% ರಷ್ಟು ಕಡಿಮೆಗೊಳಿಸುವುದಾಗಿ ಭಾರತ ಮಂಗಳವಾರ ಹೇಳಿದೆ. ಅಲ್ಲದೆ ಉಭಯ ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದಗಳ ಮಧ್ಯೆ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಅರ್ಧದಷ್ಟು ಅಧಿಕಾರಿಗಳನ್ನು ಕೂಡ ವಾಪಸ್‌ ಕರೆಸಿಕೊಳ್ಳಲಿದೆ.

ವಿದೇಶಾಂಗ ಸಚಿವಾಲಯವು ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ ಅಫೈರ್‌ಗಳಾದ ಸೈಯದ್ ಹೈದರ್ ಷಾ ಅವರನ್ನು ಕರೆದು ತನ್ನ ಕಾರ್ಯಾಚರಣೆಯ ಅಧಿಕಾರಿಗಳ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೇಹುಗಾರಿಕೆ ಆರೋಪದ ಮೇಲೆ ಇಬ್ಬರು ಪಾಕಿಸ್ತಾನ ಹೈಕಮಿಷನ್ ನೌಕರರನ್ನು ಕೇಂದ್ರ ಹೊರಹಾಕಿತು. ಅಬಿದ್ ಹುಸೇನ್ ಮತ್ತು ಮೊಹಮ್ಮದ್ ತಾಹಿರ್ ನಡವಳಿಕೆಯ ಆರೋಪವನ್ನು “ರಾಜತಾಂತ್ರಿಕ ಕಾರ್ಯಾಚರಣೆಯ ಸದಸ್ಯರಾಗಿ ಅವರ ಸ್ಥಾನಮಾನಕ್ಕೆ ಹೊಂದಿಕೆಯಾಗುವುದಿಲ್ಲ” ಎಂದು ಹೇಳಿತ್ತು ಹಾಗೂ 24 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಕೇಳಲಾಗಿತ್ತು.

“ಅವರ ಅಧಿಕಾರಿಗಳು ಹೈಕಮಿಷನ್ ನಲ್ಲಿ ತಮ್ಮ ಸವಲತ್ತು ಸ್ಥಾನಮಾನಕ್ಕೆ ಅನುಗುಣವಾಗಿರದ ಕ್ರಮಗಳಲ್ಲಿ ಪಾಲ್ಗೊಂಡಿದ್ದರೆ, ಪಾಕಿಸ್ತಾನವು ಸಮಾನಾಂತರವಾಗಿ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನ್ನ ಅಧಿಕಾರಿಗಳನ್ನು ತಮ್ಮ ನ್ಯಾಯಸಮ್ಮತ ರಾಜತಾಂತ್ರಿಕ ಕಾರ್ಯಗಳನ್ನು ನಿರ್ವಹಿಸದಂತೆ ಬೆದರಿಸುವ ನಿರಂತರ ಅಭಿಯಾನದಲ್ಲಿ ತೊಡಗಿದೆ”ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಉಚ್ಚಾಟನೆಯ ಹದಿನೈದು ದಿನಗಳ ನಂತರ, ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಪ್ರಜೆಗಳು ಹಲವಾರು ಗಂಟೆಗಳ ಕಾಲ ನಾಪತ್ತೆಯಾಗಿದ್ದರು. ಆದರೆ ಭಾರತವು ತೀವ್ರ ಪ್ರತಿಭಟನೆ ನಡೆಸಿದ ನಂತರ ಅವರನ್ನು ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು.

ಗನ್‌ಪಾಯಿಂಟ್‌ ಇಟ್ಟು ಅಪಹರಣ ಮಾಡಿದ ಪಾಕಿಸ್ತಾನವು ಭಾರತೀಯ ಅಧಿಕಾರಿಗಳನ್ನು ಬೆದರಿಸಲು ಎಷ್ಟರ ಮಟ್ಟಿಗೆ ಪ್ರಯತ್ನಿಸಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ಜೂನ್ 22, 2020 ರಂದು ಭಾರತಕ್ಕೆ ಮರಳಿದ ಈ ಅಧಿಕಾರಿಗಳು ಪಾಕಿಸ್ತಾನದ ಏಜೆನ್ಸಿಗಳ ಕೈಯಲ್ಲಿ ಅನುಭವಿಸಿದ ಅನಾಗರಿಕ ನಡೆಯ ಗ್ರಾಫಿಕ್ ವಿವರಗಳನ್ನು ಒದಗಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಪಾಕಿಸ್ತಾನದ ನಡವಳಿಕೆಯು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಸಮಾವೇಶ 1961 ಮತ್ತು 1992 ರ ನೀತಿ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಭಾರತ ಪುನರುಚ್ಚರಿಸಿದೆ. ಇದು ಪ್ರತಿಕೂಲ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕರ ಸುರಕ್ಷತೆಯನ್ನು ಖಾತ್ರಿಗೊಳಿಸುತ್ತದೆ.


ಓದಿ: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?: ಫ್ಯಾಕ್ಟ್‌ಚೆಕ್‌


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...