Homeಮುಖಪುಟಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; 'ಕಠ್‌ಮುಲ್ಲಾಗಳು' ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್...

ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

- Advertisement -
- Advertisement -

ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾನೂನು ಘಟಕ ಭಾನುವಾರ (ಡಿ.8) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ‘ಸಂವಿಧಾನ ವಿರೋಧಿ’ ಹೇಳಿಕೆ ನೀಡಿದ್ದಾರೆ.

ಅಲಹಾಬಾದ್ ಹೈಕೋರ್ಟ್‌ನ ಗ್ರಂಥಾಲಯ ಸಭಾಂಗಣದಲ್ಲಿ ವಿಹೆಚ್‌ಪಿಯ ‘ಕಾಶಿ ಪ್ರಾಂತ’ (ವಾರಣಾಸಿ ವಲಯ) ಮತ್ತು ಕಾನೂನು ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯತೆ’ಯ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ “ಇದು ಹಿಂದುಸ್ತಾನ. ಈ ದೇಶ, ಕಾನೂನು ಬಹುಸಂಖ್ಯಾತರ ಇಚ್ಚೆಯಂತೆ ನಡೆಯುತ್ತದೆ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದಿದ್ದಾರೆ.

“ಬಹುಸಂಖ್ಯಾತರಿಗೆ ಅನುಗುಣವಾಗಿ ಕಾನೂನು ಕಾರ್ಯನಿರ್ವಹಿಸುತ್ತದೆ. ಅದು ಹೇಗೆ ಎಂಬುವುದನ್ನು ಕುಟುಂಬ ಅಥವಾ ಸಮಾಜದ ಹಿನ್ನೆಲೆಯಲ್ಲಿ ನೋಡಿ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷಕ್ಕೆ ಯಾವುದು ಕಾರಣವಾಗುತ್ತದೋ ಅದನ್ನು ಒಪ್ಪಲಾಗುತ್ತದೆ. ಇದು ಕಾನೂನು, ಹೈಕೋರ್ಟ್ ನ್ಯಾಯಾಧೀಶರು ಹೀಗೆ ಹೇಳಿದ್ರಾ? ಎಂದು ನೀವು ಕೇಳುವಂತಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ, ಹಿಂದೂ ಧರ್ಮದಲ್ಲಿನ ಅಸ್ಪೃಶ್ಯತೆ, ಸತಿ ಸಹಗಮನ ಪದ್ದತಿಯಂತಹ ಆಚರಣೆಗಳನ್ನು ಏಕೆ ರದ್ದುಗೊಳಿಸಲಾಯಿತು? ಎಂದು ಪ್ರಶ್ನಿಸಿದ ನ್ಯಾಯಮೂರ್ತಿ, ಮುಸ್ಲಿಂ ಸಮುದಾಯ ಬಹು ಪತ್ನಿತ್ವ ಅಭ್ಯಾಸವನ್ನು ಮುಂದುವರೆಸಿದೆ. ಈ ಪದ್ಧತಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ಶಾಸ್ತ್ರಗಳು ಮತ್ತು ವೇದಗಳಂತಹ ಹಿಂದೂ ಧರ್ಮಗ್ರಂಥಗಳಲ್ಲಿ ಮಹಿಳೆಯರನ್ನು ದೇವತೆಗಳಾಗಿ ಪೂಜಿಸಲಾಗಿದ್ದರೂ, ಒಂದು ಸಮುದಾಯದ ಜನರು ಇನ್ನೂ ಅನೇಕ ಹೆಂಡತಿಯರನ್ನು ಹೊಂದಲು, ಹಲಾಲಾದಲ್ಲಿ ತೊಡಗಿಸಿಕೊಳ್ಳಲು ಅಥವಾ ತ್ರಿವಳಿ ತಲಾಖ್ ಅಭ್ಯಾಸ ಮಾಡಲು ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ

ಈ ದೇಶವು ಒಂದು ಸಂವಿಧಾನ ಮತ್ತು ಒಂದು ದಂಡದ ಕಾನೂನುಗಳನ್ನು ಹೊಂದಿರುವುದರಿಂದ, ನಾಗರಿಕ ಕಾನೂನುಗಳನ್ನು ಸಹ ಏಕೀಕರಿಸುವುದು ತಾರ್ಕಿಕವಾಗಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದಿದ್ದಾರೆ.

“ನಮ್ಮ ಶಾಸ್ತ್ರಗಳು ಮತ್ತು ವೇದಗಳಲ್ಲಿ ದೇವತೆ ಎಂದು ಪರಿಗಣಿಸಲ್ಪಟ್ಟ ಹೆಣ್ಣನ್ನು ನೀವು ಅಗೌರವಿಸಲು ಸಾಧ್ಯವಿಲ್ಲ. ನೀವು ನಾಲ್ವರು ಪತ್ನಿಯರನ್ನು ಹೊಂದಲು, ಹಲಾಲಾ ಮಾಡಲು ಅಥವಾ ತ್ರಿವಳಿ ತಲಾಖ್ ಹೇಳುವ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ. ನಮಗೆ ತ್ರಿವಳಿ ತಲಾಕ್ ಹೇಳುವ ಹಕ್ಕಿದೆ, ನಾವು ಜೀವನಾಂಶ ನೀಡುವುದಿಲ್ಲ ಎಂದು ನೀವು ಹೇಳುತ್ತೀರಿ. ನೀವು ಆ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ. ಆ ಹಕ್ಕು ವಿಎಚ್‌ಪಿ, ಆರ್‌ಎಸ್‌ಎಸ್ ಅಥವಾ ಹಿಂದೂ ಧರ್ಮದ ಪರವಾಗಿಲ್ಲ. ಈ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ಈ ಬಗ್ಗೆ ಮಾತನಾಡಿದೆ. ಇದು ನ್ಯಾಯಾಲಯ ಐತಿಹಾಸಿಕ ಗ್ರಂಥಾಲಯ, ಇಲ್ಲಿ ಅನೇಕ ಮಹನಿಯರು ಬಂದು ಹೋಗಿದ್ದಾರೆ. ನಾನು ಅವರಲ್ಲಿ ಒಬ್ಬನಾಗಿ ಮಾತನಾಡುತ್ತಿದ್ದೇನೆ. ನಾನು ಸುಮ್ಮನೆ ಹೇಳುತ್ತಿಲ್ಲ, ಪ್ರತಿಜ್ಞೆ ಮಾಡುತ್ತಿದ್ದೇನೆ. ಶೀಘ್ರದಲ್ಲಿ ಏಕರೂಪ ಕಾನೂನು ಬರಲಿದೆ” ಎಂದು ಹೇಳಿದ್ದಾರೆ.

ತನ್ನ ಭಾಷಣದ ಆರಂಭದಲ್ಲಿ, ನಾನು ಗಂಗೆ ಹರಿಯುವ ದೇಶದ ನಿವಾಸಿ ಎಂದು ಹೇಳುವವರೆ ನನ್ನ ಪರಿಚಯ ಪರಿಪೂರ್ಣವಾಗದು. ಗಾಯ್ (ಹಸು) ಗಂಗಾ (ಗಂಗೆ) ಗೀತಾ(ಗೀತೆ) ಭಾರತೀಯ ಸಂಸ್ಕೃತಿಯ ಭಾಗವಾಗಿದೆ ಎಂದು ನ್ಯಾಯಮೂರ್ತಿ ಪ್ರತಿಪಾದಿಸಿದ್ದಾರೆ.

ಗಂಗೆಯಲ್ಲಿ ಸ್ನಾನ ಮಾಡುವವರು ಅಥವಾ ಚಂದನ ಹಾಕಿಕೊಳ್ಳುವವರು ಮಾತ್ರ ಹಿಂದೂಗಳಲ್ಲ. ಈ ದೇಶವನ್ನು ತಾಯಿ ಎಂದು ಪರಿಗಣಿಸುವರು, ಬಿಕ್ಕಟ್ಟಿನ ಸಮಯದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧರಿರುವವರು ಹಿಂದೂಗಳು. ಅವರ ಧಾರ್ಮಿಕ ಆಚರಣೆಗಳು ಅಥವಾ ನಂಬಿಕೆಗಳ ಕುರಾನ್ ಅಥವಾ ಬೈಬಲ್ ಆಗಿರಲಿ ಅವರು ಹಿಂದೂಗಳು ಎಂದಿದ್ದಾರೆ.

ನಮ್ಮ ಹಿಂದೂ ಧರ್ಮದಲ್ಲಿ ಬಾಲ್ಯವಿವಾಹ, ಸತಿ ಪದ್ಧತಿ, ಹೆಣ್ಣುಮಗುವಿನ ಹತ್ಯೆಯಂತಹ ಅನೇಕ ಸಾಮಾಜಿಕ ಅನಿಷ್ಟಗಳು ಇತ್ತು. ಆದರೆ, ರಾಮ್ ಮೋಹನ್ ರಾಯ್ ಅವರಂತಹ ಸುಧಾರಕರು ಈ ಪದ್ಧತಿಗಳನ್ನು ಕೊನೆಗೊಳಿಸಲು ಹೋರಾಡಿದರು. ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕ ಅನಿಷ್ಟಗಳಾದ ಹಲಾಲಾ, ತ್ರಿವಳಿ ತಲಾಖ್ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ. ಅವುಗಳನ್ನು ಕೊನೆಗೊಂಡಿಲ್ಲ, ಅದನ್ನು ಎದುರಿಸುವ ಧೈರ್ಯವೂ ಇಲ್ಲ ಎಂದು ಹೇಳಿದ್ದಾರೆ.

ಮುಸ್ಲಿಮರು ಬೆಂಕಿಯ ಸುತ್ತಲೂ ಏಳು ಸುತ್ತು ಹಾಕಿ ಮದುವೆಯಾಗಬೇಕು, ಗಂಗಾ ಸ್ನಾನ ಮಾಡಿ ಚಂದನ ಹಚ್ಚಿಕೊಳ್ಳಬೇಕು ಎಂದು ನಾವು ಭಯಸುವುದಿಲ್ಲ. ಈ ದೇಶದ ಸಂಸ್ಕೃತಿ, ಮಹಾನ್ ವ್ಯಕ್ತಿಗಳು ಮತ್ತು ಈ ನೆಲದ ದೇವರನ್ನು ಗೌರವಿಸುವುದನ್ನು ಬಯಸುತ್ತೇವೆ ಅಷ್ಟೇ ಎಂದಿದ್ದಾರೆ.

ನ್ಯಾ. ಶೇಖರ್ ಕುಮಾರ್ ಯಾದವ್ ಅವರು ಸುಪ್ರೀಂ ಕೋರ್ಟ್‌ನ ಅಯೋಧ್ಯೆ ತೀರ್ಪಿನ ಬಗ್ಗೆಯೂ ಮಾತನಾಡಿದ್ದಾರೆ. ರಾಮಲಲ್ಲಾನನ್ನು ವಿಮೋಚನೆಗೊಳಿಸಲು ಮತ್ತು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುವುದನ್ನು ಕಾಣಲು ನಮ್ಮ ಪೂರ್ವಜರು ಅನೇಕ ತ್ಯಾಗ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಹಿಂದೂಗಳು ತಮ್ಮ ಅಹಿಂಸೆ ಮತ್ತು ದಯೆಗೆ ಹೆಸರುವಾಸಿಯಾಗಿದ್ದು, ಅದನ್ನು ಹೇಡಿತನ ಎಂದು ತಪ್ಪಾಗಿ ಭಾವಿಸಬಾರದು. ನಮ್ಮ ಧಾರ್ಮಿಕ ಆಚರಣೆಗಳು ಮತ್ತು ನಮ್ಮ ಪೂಜ್ಯ ವ್ಯಕ್ತಿಗಳು ಯಾವಾಗಲೂ ಮೊದಲ ಸ್ಥಾನದಲ್ಲಿರಬೇಕು ಎಂದು ಮಕ್ಕಳಿಗೆ ಕಲಿಸುವ ಮಹತ್ವವನ್ನು ಒತ್ತಿ ಹೇಳಿದರು.

“ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು”

ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರ ವಿರುದ್ಧ ಸಾಮಾನ್ಯವಾಗಿ ಬಳಸಲಾಗುವ ‘ಕಠ್‌ಮುಲ್ಲಾ’ ಎಂಬ ಪದ ಬಳಕೆಯೂ ಸೇರಿದಂತೆ ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನ್ಯಾಯಮೂರ್ತಿ, ‘ಕಠ್‌ಮುಲ್ಲಾ’ ಎಂಬ ಪದ ಉಲ್ಲೇಖಿಸಿ, ದೇಶವು ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.

“ಇದು (ಕಠ್‌ಮುಲ್ಲಾ) ಸರಿಯಾದ ಪದ ಅಲ್ಲದಿರಬಹುದು. ಆದರೆ, ಅದನ್ನು ಹೇಳಲು ನಾನು ಹಿಂಜರಿಯಲಾರೆ. ಏಕೆಂದರೆ ಅವರು ದೇಶಕ್ಕೆ ಮಾರಕ ಅವರು ಹಾನಿಕಾರಕ. ಅವರು ರಾಷ್ಟ್ರ ವಿರೋಧಿಗಳು ಮತ್ತು ಜನರಿಗೆ ಕುಮ್ಮಕ್ಕು ನೀಡುವವರು. ಅವರು ದೇಶದ ಪ್ರಗತಿ ಬಯಸದಂತಹ ಜನ. ಅವರ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು” ಎಂದು ಹೇಳಿದ್ದಾರೆ.

ಆಕ್ರೋಶಕ್ಕೆ ಕಾರಣವಾದ ನ್ಯಾಯಾಧೀಶರ ಭಾಷಣ

ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ಸಂವಿಧಾನ ವಿರೋಧಿ, ಮುಸ್ಲಿಂ ವಿರೋಧಿ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.  ಈ ಕುರಿತು ಎಐಎಂಐಎಂ ಪಕ್ಷದ ಮುಖಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ವಿಹೆಚ್‌ಪಿಯನ್ನು ವಿವಿಧ ಸಂದರ್ಭಗಳಲ್ಲಿ ನಿಷೇಧಿಸಲಾಗಿತ್ತು. ಸರ್ದಾರ್ ವಲ್ಲಭಾಯಿ ಪಟೇಲ್ ಅವರು ‘ದ್ವೇಷ ಮತ್ತು ಹಿಂಸೆಯ ಶಕ್ತಿ’ ಎಂದು ನಿಷೇಧಿಸಿದ ಸಂಘಟನೆಯಾದ ಆರ್‌ಎಸ್‌ಎಸ್‌ನೊಂದಿಗೆ ಇದು ಸಂಬಂಧ ಹೊಂದಿದೆ. ಇಂತಹ ಸಂಘಟನೆಯ ಸಮಾವೇಶದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಭಾಗವಹಿಸಿರುವುದು ದುರದೃಷ್ಟಕರ ಎಂದಿದ್ದಾರೆ.

“ಹೈಕೋರ್ಟ್ ನ್ಯಾಯಮೂರ್ತಿಯವರ ಭಾಷಣವನ್ನು ಸುಲಭವಾಗಿ ತಿರಸ್ಕರಿಸಬಹುದು. ಆದರೆ, ಅವರಿಗೆ ಭಾರತದ ಸಂವಿಧಾನವು ನ್ಯಾಯಾಂಗ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದನ್ನು  ಬಯಸುತ್ತದೆ ಎಂದು ಅವರಿಗೆ ನೆನಪಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

“ಭಾರತದ ಸಂವಿಧಾನವು ಬಹುಸಂಖ್ಯಾತರ ಪರವಾಗಿಲ್ಲ, ಅದು ಪ್ರಜಾಸತ್ತಾತ್ಮಕವಾಗಿದೆ. ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಅಂಬೇಡ್ಕರ್ ಹೇಳಿದಂತೆ “ರಾಜನಿಗೆ ಆಳುವ ಯಾವುದೇ ದೈವಿಕ ಹಕ್ಕಿಲ್ಲ, ಅದೇ ರೀತಿ ಬಹುಸಂಖ್ಯಾತರಿಗೂ ಆಳುವ ದೈವಿಕ ಹಕ್ಕಿಲ್ಲ” ಎಂದಿದ್ದಾರೆ.

“ನ್ಯಾಯಮೂರ್ತಿಯ ಭಾಷಣ ಕೊಲಿಜಿಯಂ ವ್ಯವಸ್ಥೆಯನ್ನು ದೂಷಿಸುತ್ತದೆ ಮತ್ತು ನ್ಯಾಯಾಂಗ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತದೆ. ವಿಹೆಚ್‌ಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಿಂದ ಮುಂದೆ ಅಲ್ಪಸಂಖ್ಯಾತರು ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ? ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ  : ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯತೆ ಕುರಿತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...