Homeಮುಖಪುಟಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; 'ಕಠ್‌ಮುಲ್ಲಾಗಳು' ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್...

ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

- Advertisement -
- Advertisement -

ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾನೂನು ಘಟಕ ಭಾನುವಾರ (ಡಿ.8) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ‘ಸಂವಿಧಾನ ವಿರೋಧಿ’ ಹೇಳಿಕೆ ನೀಡಿದ್ದಾರೆ.

ಅಲಹಾಬಾದ್ ಹೈಕೋರ್ಟ್‌ನ ಗ್ರಂಥಾಲಯ ಸಭಾಂಗಣದಲ್ಲಿ ವಿಹೆಚ್‌ಪಿಯ ‘ಕಾಶಿ ಪ್ರಾಂತ’ (ವಾರಣಾಸಿ ವಲಯ) ಮತ್ತು ಕಾನೂನು ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯತೆ’ಯ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ “ಇದು ಹಿಂದುಸ್ತಾನ. ಈ ದೇಶ, ಕಾನೂನು ಬಹುಸಂಖ್ಯಾತರ ಇಚ್ಚೆಯಂತೆ ನಡೆಯುತ್ತದೆ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದಿದ್ದಾರೆ.

“ಬಹುಸಂಖ್ಯಾತರಿಗೆ ಅನುಗುಣವಾಗಿ ಕಾನೂನು ಕಾರ್ಯನಿರ್ವಹಿಸುತ್ತದೆ. ಅದು ಹೇಗೆ ಎಂಬುವುದನ್ನು ಕುಟುಂಬ ಅಥವಾ ಸಮಾಜದ ಹಿನ್ನೆಲೆಯಲ್ಲಿ ನೋಡಿ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷಕ್ಕೆ ಯಾವುದು ಕಾರಣವಾಗುತ್ತದೋ ಅದನ್ನು ಒಪ್ಪಲಾಗುತ್ತದೆ. ಇದು ಕಾನೂನು, ಹೈಕೋರ್ಟ್ ನ್ಯಾಯಾಧೀಶರು ಹೀಗೆ ಹೇಳಿದ್ರಾ? ಎಂದು ನೀವು ಕೇಳುವಂತಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ, ಹಿಂದೂ ಧರ್ಮದಲ್ಲಿನ ಅಸ್ಪೃಶ್ಯತೆ, ಸತಿ ಸಹಗಮನ ಪದ್ದತಿಯಂತಹ ಆಚರಣೆಗಳನ್ನು ಏಕೆ ರದ್ದುಗೊಳಿಸಲಾಯಿತು? ಎಂದು ಪ್ರಶ್ನಿಸಿದ ನ್ಯಾಯಮೂರ್ತಿ, ಮುಸ್ಲಿಂ ಸಮುದಾಯ ಬಹು ಪತ್ನಿತ್ವ ಅಭ್ಯಾಸವನ್ನು ಮುಂದುವರೆಸಿದೆ. ಈ ಪದ್ಧತಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ಶಾಸ್ತ್ರಗಳು ಮತ್ತು ವೇದಗಳಂತಹ ಹಿಂದೂ ಧರ್ಮಗ್ರಂಥಗಳಲ್ಲಿ ಮಹಿಳೆಯರನ್ನು ದೇವತೆಗಳಾಗಿ ಪೂಜಿಸಲಾಗಿದ್ದರೂ, ಒಂದು ಸಮುದಾಯದ ಜನರು ಇನ್ನೂ ಅನೇಕ ಹೆಂಡತಿಯರನ್ನು ಹೊಂದಲು, ಹಲಾಲಾದಲ್ಲಿ ತೊಡಗಿಸಿಕೊಳ್ಳಲು ಅಥವಾ ತ್ರಿವಳಿ ತಲಾಖ್ ಅಭ್ಯಾಸ ಮಾಡಲು ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ

ಈ ದೇಶವು ಒಂದು ಸಂವಿಧಾನ ಮತ್ತು ಒಂದು ದಂಡದ ಕಾನೂನುಗಳನ್ನು ಹೊಂದಿರುವುದರಿಂದ, ನಾಗರಿಕ ಕಾನೂನುಗಳನ್ನು ಸಹ ಏಕೀಕರಿಸುವುದು ತಾರ್ಕಿಕವಾಗಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದಿದ್ದಾರೆ.

“ನಮ್ಮ ಶಾಸ್ತ್ರಗಳು ಮತ್ತು ವೇದಗಳಲ್ಲಿ ದೇವತೆ ಎಂದು ಪರಿಗಣಿಸಲ್ಪಟ್ಟ ಹೆಣ್ಣನ್ನು ನೀವು ಅಗೌರವಿಸಲು ಸಾಧ್ಯವಿಲ್ಲ. ನೀವು ನಾಲ್ವರು ಪತ್ನಿಯರನ್ನು ಹೊಂದಲು, ಹಲಾಲಾ ಮಾಡಲು ಅಥವಾ ತ್ರಿವಳಿ ತಲಾಖ್ ಹೇಳುವ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ. ನಮಗೆ ತ್ರಿವಳಿ ತಲಾಕ್ ಹೇಳುವ ಹಕ್ಕಿದೆ, ನಾವು ಜೀವನಾಂಶ ನೀಡುವುದಿಲ್ಲ ಎಂದು ನೀವು ಹೇಳುತ್ತೀರಿ. ನೀವು ಆ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ. ಆ ಹಕ್ಕು ವಿಎಚ್‌ಪಿ, ಆರ್‌ಎಸ್‌ಎಸ್ ಅಥವಾ ಹಿಂದೂ ಧರ್ಮದ ಪರವಾಗಿಲ್ಲ. ಈ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ಈ ಬಗ್ಗೆ ಮಾತನಾಡಿದೆ. ಇದು ನ್ಯಾಯಾಲಯ ಐತಿಹಾಸಿಕ ಗ್ರಂಥಾಲಯ, ಇಲ್ಲಿ ಅನೇಕ ಮಹನಿಯರು ಬಂದು ಹೋಗಿದ್ದಾರೆ. ನಾನು ಅವರಲ್ಲಿ ಒಬ್ಬನಾಗಿ ಮಾತನಾಡುತ್ತಿದ್ದೇನೆ. ನಾನು ಸುಮ್ಮನೆ ಹೇಳುತ್ತಿಲ್ಲ, ಪ್ರತಿಜ್ಞೆ ಮಾಡುತ್ತಿದ್ದೇನೆ. ಶೀಘ್ರದಲ್ಲಿ ಏಕರೂಪ ಕಾನೂನು ಬರಲಿದೆ” ಎಂದು ಹೇಳಿದ್ದಾರೆ.

ತನ್ನ ಭಾಷಣದ ಆರಂಭದಲ್ಲಿ, ನಾನು ಗಂಗೆ ಹರಿಯುವ ದೇಶದ ನಿವಾಸಿ ಎಂದು ಹೇಳುವವರೆ ನನ್ನ ಪರಿಚಯ ಪರಿಪೂರ್ಣವಾಗದು. ಗಾಯ್ (ಹಸು) ಗಂಗಾ (ಗಂಗೆ) ಗೀತಾ(ಗೀತೆ) ಭಾರತೀಯ ಸಂಸ್ಕೃತಿಯ ಭಾಗವಾಗಿದೆ ಎಂದು ನ್ಯಾಯಮೂರ್ತಿ ಪ್ರತಿಪಾದಿಸಿದ್ದಾರೆ.

ಗಂಗೆಯಲ್ಲಿ ಸ್ನಾನ ಮಾಡುವವರು ಅಥವಾ ಚಂದನ ಹಾಕಿಕೊಳ್ಳುವವರು ಮಾತ್ರ ಹಿಂದೂಗಳಲ್ಲ. ಈ ದೇಶವನ್ನು ತಾಯಿ ಎಂದು ಪರಿಗಣಿಸುವರು, ಬಿಕ್ಕಟ್ಟಿನ ಸಮಯದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧರಿರುವವರು ಹಿಂದೂಗಳು. ಅವರ ಧಾರ್ಮಿಕ ಆಚರಣೆಗಳು ಅಥವಾ ನಂಬಿಕೆಗಳ ಕುರಾನ್ ಅಥವಾ ಬೈಬಲ್ ಆಗಿರಲಿ ಅವರು ಹಿಂದೂಗಳು ಎಂದಿದ್ದಾರೆ.

ನಮ್ಮ ಹಿಂದೂ ಧರ್ಮದಲ್ಲಿ ಬಾಲ್ಯವಿವಾಹ, ಸತಿ ಪದ್ಧತಿ, ಹೆಣ್ಣುಮಗುವಿನ ಹತ್ಯೆಯಂತಹ ಅನೇಕ ಸಾಮಾಜಿಕ ಅನಿಷ್ಟಗಳು ಇತ್ತು. ಆದರೆ, ರಾಮ್ ಮೋಹನ್ ರಾಯ್ ಅವರಂತಹ ಸುಧಾರಕರು ಈ ಪದ್ಧತಿಗಳನ್ನು ಕೊನೆಗೊಳಿಸಲು ಹೋರಾಡಿದರು. ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕ ಅನಿಷ್ಟಗಳಾದ ಹಲಾಲಾ, ತ್ರಿವಳಿ ತಲಾಖ್ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ. ಅವುಗಳನ್ನು ಕೊನೆಗೊಂಡಿಲ್ಲ, ಅದನ್ನು ಎದುರಿಸುವ ಧೈರ್ಯವೂ ಇಲ್ಲ ಎಂದು ಹೇಳಿದ್ದಾರೆ.

ಮುಸ್ಲಿಮರು ಬೆಂಕಿಯ ಸುತ್ತಲೂ ಏಳು ಸುತ್ತು ಹಾಕಿ ಮದುವೆಯಾಗಬೇಕು, ಗಂಗಾ ಸ್ನಾನ ಮಾಡಿ ಚಂದನ ಹಚ್ಚಿಕೊಳ್ಳಬೇಕು ಎಂದು ನಾವು ಭಯಸುವುದಿಲ್ಲ. ಈ ದೇಶದ ಸಂಸ್ಕೃತಿ, ಮಹಾನ್ ವ್ಯಕ್ತಿಗಳು ಮತ್ತು ಈ ನೆಲದ ದೇವರನ್ನು ಗೌರವಿಸುವುದನ್ನು ಬಯಸುತ್ತೇವೆ ಅಷ್ಟೇ ಎಂದಿದ್ದಾರೆ.

ನ್ಯಾ. ಶೇಖರ್ ಕುಮಾರ್ ಯಾದವ್ ಅವರು ಸುಪ್ರೀಂ ಕೋರ್ಟ್‌ನ ಅಯೋಧ್ಯೆ ತೀರ್ಪಿನ ಬಗ್ಗೆಯೂ ಮಾತನಾಡಿದ್ದಾರೆ. ರಾಮಲಲ್ಲಾನನ್ನು ವಿಮೋಚನೆಗೊಳಿಸಲು ಮತ್ತು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುವುದನ್ನು ಕಾಣಲು ನಮ್ಮ ಪೂರ್ವಜರು ಅನೇಕ ತ್ಯಾಗ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಹಿಂದೂಗಳು ತಮ್ಮ ಅಹಿಂಸೆ ಮತ್ತು ದಯೆಗೆ ಹೆಸರುವಾಸಿಯಾಗಿದ್ದು, ಅದನ್ನು ಹೇಡಿತನ ಎಂದು ತಪ್ಪಾಗಿ ಭಾವಿಸಬಾರದು. ನಮ್ಮ ಧಾರ್ಮಿಕ ಆಚರಣೆಗಳು ಮತ್ತು ನಮ್ಮ ಪೂಜ್ಯ ವ್ಯಕ್ತಿಗಳು ಯಾವಾಗಲೂ ಮೊದಲ ಸ್ಥಾನದಲ್ಲಿರಬೇಕು ಎಂದು ಮಕ್ಕಳಿಗೆ ಕಲಿಸುವ ಮಹತ್ವವನ್ನು ಒತ್ತಿ ಹೇಳಿದರು.

“ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು”

ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರ ವಿರುದ್ಧ ಸಾಮಾನ್ಯವಾಗಿ ಬಳಸಲಾಗುವ ‘ಕಠ್‌ಮುಲ್ಲಾ’ ಎಂಬ ಪದ ಬಳಕೆಯೂ ಸೇರಿದಂತೆ ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನ್ಯಾಯಮೂರ್ತಿ, ‘ಕಠ್‌ಮುಲ್ಲಾ’ ಎಂಬ ಪದ ಉಲ್ಲೇಖಿಸಿ, ದೇಶವು ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.

“ಇದು (ಕಠ್‌ಮುಲ್ಲಾ) ಸರಿಯಾದ ಪದ ಅಲ್ಲದಿರಬಹುದು. ಆದರೆ, ಅದನ್ನು ಹೇಳಲು ನಾನು ಹಿಂಜರಿಯಲಾರೆ. ಏಕೆಂದರೆ ಅವರು ದೇಶಕ್ಕೆ ಮಾರಕ ಅವರು ಹಾನಿಕಾರಕ. ಅವರು ರಾಷ್ಟ್ರ ವಿರೋಧಿಗಳು ಮತ್ತು ಜನರಿಗೆ ಕುಮ್ಮಕ್ಕು ನೀಡುವವರು. ಅವರು ದೇಶದ ಪ್ರಗತಿ ಬಯಸದಂತಹ ಜನ. ಅವರ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು” ಎಂದು ಹೇಳಿದ್ದಾರೆ.

ಆಕ್ರೋಶಕ್ಕೆ ಕಾರಣವಾದ ನ್ಯಾಯಾಧೀಶರ ಭಾಷಣ

ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ಸಂವಿಧಾನ ವಿರೋಧಿ, ಮುಸ್ಲಿಂ ವಿರೋಧಿ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.  ಈ ಕುರಿತು ಎಐಎಂಐಎಂ ಪಕ್ಷದ ಮುಖಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ವಿಹೆಚ್‌ಪಿಯನ್ನು ವಿವಿಧ ಸಂದರ್ಭಗಳಲ್ಲಿ ನಿಷೇಧಿಸಲಾಗಿತ್ತು. ಸರ್ದಾರ್ ವಲ್ಲಭಾಯಿ ಪಟೇಲ್ ಅವರು ‘ದ್ವೇಷ ಮತ್ತು ಹಿಂಸೆಯ ಶಕ್ತಿ’ ಎಂದು ನಿಷೇಧಿಸಿದ ಸಂಘಟನೆಯಾದ ಆರ್‌ಎಸ್‌ಎಸ್‌ನೊಂದಿಗೆ ಇದು ಸಂಬಂಧ ಹೊಂದಿದೆ. ಇಂತಹ ಸಂಘಟನೆಯ ಸಮಾವೇಶದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಭಾಗವಹಿಸಿರುವುದು ದುರದೃಷ್ಟಕರ ಎಂದಿದ್ದಾರೆ.

“ಹೈಕೋರ್ಟ್ ನ್ಯಾಯಮೂರ್ತಿಯವರ ಭಾಷಣವನ್ನು ಸುಲಭವಾಗಿ ತಿರಸ್ಕರಿಸಬಹುದು. ಆದರೆ, ಅವರಿಗೆ ಭಾರತದ ಸಂವಿಧಾನವು ನ್ಯಾಯಾಂಗ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದನ್ನು  ಬಯಸುತ್ತದೆ ಎಂದು ಅವರಿಗೆ ನೆನಪಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

“ಭಾರತದ ಸಂವಿಧಾನವು ಬಹುಸಂಖ್ಯಾತರ ಪರವಾಗಿಲ್ಲ, ಅದು ಪ್ರಜಾಸತ್ತಾತ್ಮಕವಾಗಿದೆ. ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಅಂಬೇಡ್ಕರ್ ಹೇಳಿದಂತೆ “ರಾಜನಿಗೆ ಆಳುವ ಯಾವುದೇ ದೈವಿಕ ಹಕ್ಕಿಲ್ಲ, ಅದೇ ರೀತಿ ಬಹುಸಂಖ್ಯಾತರಿಗೂ ಆಳುವ ದೈವಿಕ ಹಕ್ಕಿಲ್ಲ” ಎಂದಿದ್ದಾರೆ.

“ನ್ಯಾಯಮೂರ್ತಿಯ ಭಾಷಣ ಕೊಲಿಜಿಯಂ ವ್ಯವಸ್ಥೆಯನ್ನು ದೂಷಿಸುತ್ತದೆ ಮತ್ತು ನ್ಯಾಯಾಂಗ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತದೆ. ವಿಹೆಚ್‌ಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಿಂದ ಮುಂದೆ ಅಲ್ಪಸಂಖ್ಯಾತರು ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ? ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ  : ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯತೆ ಕುರಿತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...