Homeಅಂತರಾಷ್ಟ್ರೀಯಭಾರತ‌ದಲ್ಲಿ ನಡೆಯುವ ಎಸ್‌ಸಿಒ ಸಭೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಆಹ್ವಾನ?

ಭಾರತ‌ದಲ್ಲಿ ನಡೆಯುವ ಎಸ್‌ಸಿಒ ಸಭೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಆಹ್ವಾನ?

- Advertisement -
- Advertisement -

ಈ ವರ್ಷ ನಡೆಯುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ)ಯ ಸರ್ಕಾರದ ಮುಖ್ಯಸ್ಥರ ವಾರ್ಷಿಕ ಸಭೆಗೆ ಭಾರತವು ಆತಿಥ್ಯ ವಹಿಸಿದ್ದು, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಸಹ ಆಹ್ವಾನಿಸಲಿದೆ ಎಂದು ಕೆಲವು ಅಧಿಕಾರಿಗಳು ಹೇಳಿರುವುದಾಗಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

ಆದಾಗ್ಯೂ, ಈ ವರ್ಷ ನಡೆಯಲಿರುವ ಸಭೆಯಲ್ಲಿ ಪಾಕ್‌ ಪಿಎಂ ಇಮ್ರಾನ್‌ ಖಾನ್ ಭಾಗವಹಿಸುತ್ತಾರೆಯೇ ಎಂಬ ಬಗ್ಗೆ ಅಂತಿಮ ತೀರ್ಮಾನವನ್ನು ಇಸ್ಲಾಮಾಬಾದ್ ತೆಗೆದುಕೊಳ್ಳುತ್ತದೆ ಎಂದು ವರದಿ ಉಲ್ಲೇಖಿಸಿದೆ.

“ಪ್ರೋಟೋಕಾಲ್ ಮತ್ತು ಸಮಾವೇಶದ ಪ್ರಕಾರ, ಪಾಕಿಸ್ತಾನದ ಪ್ರಧಾನ ಮಂತ್ರಿಗೆ ಆಹ್ವಾನವನ್ನು ನೀಡಲಾಗುವುದು. ಅವರ ಪರವಾಗಿ ಪ್ರಧಾನಿ ಅಥವಾ ಇನ್ನಾವುದೇ ಪ್ರತಿನಿಧಿ ಸಭೆಗೆ ಹಾಜರಾಗುತ್ತಾರೆಯೇ ಎಂಬುದು ಪಾಕಿಸ್ತಾನಕ್ಕೆ ಬಿಟ್ಟದ್ದು. ಇದಲ್ಲದೆ, ಸಭೆಗೆ ಇನ್ನೂ ಬಹಳ ಸಮಯವಿದೆ,” ಎಂದು ಹೆಸರಿಸಲು ನಿರಾಕರಿಸಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಎಸ್‌ಸಿಒ ಸರ್ಕಾರದ ಮುಖ್ಯಸ್ಥರ ಸಭೆಯನ್ನು ಭಾರತ ಮೊದಲ ಬಾರಿಗೆ ಆಯೋಜಿಸುತ್ತಿದೆ ಎಂದು ಎಸ್‌ಸಿಒ ಪ್ರಧಾನ ಕಾರ್ಯದರ್ಶಿ ವ್ಲಾಡಿಮಿರ್ ನೊರೊವ್ ಸೋಮವಾರ ನವದೆಹಲಿಯಲ್ಲಿ ನೆರೆದ ಸುದ್ದಿಗಾರರಿಗೆ ತಿಳಿಸಿದ್ದರು.

ನಾಲ್ಕು ದಿನಗಳ ಭೇಟಿಯಲ್ಲಿ ಭಾನುವಾರ ನವದೆಹಲಿಗೆ ಆಗಮಿಸಿದ ನೊರೊವ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಎಸ್‌ಸಿಒ ಸಭೆಯಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆಯು ಚರ್ಚೆಗಳಲ್ಲಿ ಕಾಣಿಸಿಕೊಂಡಿದೆಯೆ ಎಂಬುದು ಸ್ಪಷ್ಟವಾಗಿಲ್ಲ.

“ಶಾಂಘೈ ಸಹಕಾರ ಸಂಸ್ಥೆ ಪ್ರಧಾನ ಕಾರ್ಯದರ್ಶಿ ವ್ಲಾಡಿಮಿರ್ ನೊರೊವ್‌ರವರನ್ನು ಬರಮಾಡಿಕೊಂಡೆವು. SCO ಸರ್ಕಾರದ ಮುಖ್ಯಸ್ಥರ ಮಂಡಳಿಯ ಸಭೆಯ ಆತಿಥ್ಯವನ್ನು ವಹಿಸಿಕೊಳ್ಳಲು ಭಾರತ ಸಿದ್ಧತೆ ನಡೆಸುತ್ತಿರುವಾಗ ನಮ್ಮ ಸಹಕಾರದ ಪ್ರಗತಿಯನ್ನು ಪರಿಶೀಲಿಸಿದ್ದಾರೆ”ಎಂದು ಜೈಶಂಕರ್ ಟ್ವೀಟ್ ಮಾಡಿದ್ದರು.

ಈ ವರ್ಷ ಎಸ್‌ಸಿಒ ಸರ್ಕಾರಿ ಮುಖ್ಯಸ್ಥರ ಸಭೆಯನ್ನು ಭಾರತ ಆಯೋಜಿಸುತ್ತಿರುವುದಕ್ಕೆ ಎಲ್ಲಾ ಎಸ್‌ಸಿಒ ಸದಸ್ಯರು ಸಂತೋಷಪಟ್ಟಿದ್ದಾರೆ ಎಂದು ನೊರೊವ್ ಸೋಮವಾರ ಹೇಳಿದ್ದಾರೆ. ಭಾರತವು ಈ ಪ್ರದೇಶದ ಪ್ರಮುಖ ದೇಶವಾಗಿದ್ದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೊಡ್ಡ ಸಾಮರ್ಥ್ಯವನ್ನು ಹೊಂದಿದೆ ಎಂದರು.

ಆರ್ಥಿಕ ಚಟುವಟಿಕೆಗಳ ಎಸ್‌ಸಿಒ ಮಂತ್ರಿಗಳ ಸಭೆ ಸೇರಿದಂತೆ ಭಾರತದಲ್ಲಿ ಹಲವಾರು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದರು.

ಭಾರತವು 2005 ರಿಂದ ಎಸ್‌ಸಿಒದಲ್ಲಿ ವೀಕ್ಷಕರಾಗಿದ್ದರು ಮತ್ತು ಸಾಮಾನ್ಯವಾಗಿ ಯುರೇಷಿಯನ್ ಪ್ರದೇಶದಲ್ಲಿನ ಭದ್ರತೆ ಮತ್ತು ಆರ್ಥಿಕ ಸಹಕಾರವನ್ನು ಕೇಂದ್ರೀಕರಿಸುವ ಗುಂಪಿನ ಮಂತ್ರಿಮಟ್ಟದ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಎರಡೂ ಜೂನ್ 2017 ರಲ್ಲಿ ಎಸ್‌ಸಿಒದ ಪೂರ್ಣ ಸದಸ್ಯರಾದರು ಮತ್ತು ಚೀನಾ ಪ್ರಾಬಲ್ಯದ ಗುಂಪಿನಲ್ಲಿ ನವದೆಹಲಿಯ ಪ್ರವೇಶವು ಅದರ ವೇಗವನ್ನು ಹೆಚ್ಚಿಸಿದೆ.

ರಷ್ಯಾ, ಚೀನಾ, ಕಿರ್ಗಿಜ್ ರಿಪಬ್ಲಿಕ್, ಕಜಕಿಸ್ತಾನ್, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರ ನೇತೃತ್ವದಲ್ಲಿ 2001 ರಲ್ಲಿ ಶಾಂಘೈನಲ್ಲಿ ನಡೆದ ಶೃಂಗಸಭೆಯಲ್ಲಿ ಎಸ್‌ಸಿಒ ಸ್ಥಾಪಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...