Homeಅಂತರಾಷ್ಟ್ರೀಯಭಾರತ‌ದಲ್ಲಿ ನಡೆಯುವ ಎಸ್‌ಸಿಒ ಸಭೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಆಹ್ವಾನ?

ಭಾರತ‌ದಲ್ಲಿ ನಡೆಯುವ ಎಸ್‌ಸಿಒ ಸಭೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಆಹ್ವಾನ?

- Advertisement -
- Advertisement -

ಈ ವರ್ಷ ನಡೆಯುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ)ಯ ಸರ್ಕಾರದ ಮುಖ್ಯಸ್ಥರ ವಾರ್ಷಿಕ ಸಭೆಗೆ ಭಾರತವು ಆತಿಥ್ಯ ವಹಿಸಿದ್ದು, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಸಹ ಆಹ್ವಾನಿಸಲಿದೆ ಎಂದು ಕೆಲವು ಅಧಿಕಾರಿಗಳು ಹೇಳಿರುವುದಾಗಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

ಆದಾಗ್ಯೂ, ಈ ವರ್ಷ ನಡೆಯಲಿರುವ ಸಭೆಯಲ್ಲಿ ಪಾಕ್‌ ಪಿಎಂ ಇಮ್ರಾನ್‌ ಖಾನ್ ಭಾಗವಹಿಸುತ್ತಾರೆಯೇ ಎಂಬ ಬಗ್ಗೆ ಅಂತಿಮ ತೀರ್ಮಾನವನ್ನು ಇಸ್ಲಾಮಾಬಾದ್ ತೆಗೆದುಕೊಳ್ಳುತ್ತದೆ ಎಂದು ವರದಿ ಉಲ್ಲೇಖಿಸಿದೆ.

“ಪ್ರೋಟೋಕಾಲ್ ಮತ್ತು ಸಮಾವೇಶದ ಪ್ರಕಾರ, ಪಾಕಿಸ್ತಾನದ ಪ್ರಧಾನ ಮಂತ್ರಿಗೆ ಆಹ್ವಾನವನ್ನು ನೀಡಲಾಗುವುದು. ಅವರ ಪರವಾಗಿ ಪ್ರಧಾನಿ ಅಥವಾ ಇನ್ನಾವುದೇ ಪ್ರತಿನಿಧಿ ಸಭೆಗೆ ಹಾಜರಾಗುತ್ತಾರೆಯೇ ಎಂಬುದು ಪಾಕಿಸ್ತಾನಕ್ಕೆ ಬಿಟ್ಟದ್ದು. ಇದಲ್ಲದೆ, ಸಭೆಗೆ ಇನ್ನೂ ಬಹಳ ಸಮಯವಿದೆ,” ಎಂದು ಹೆಸರಿಸಲು ನಿರಾಕರಿಸಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಎಸ್‌ಸಿಒ ಸರ್ಕಾರದ ಮುಖ್ಯಸ್ಥರ ಸಭೆಯನ್ನು ಭಾರತ ಮೊದಲ ಬಾರಿಗೆ ಆಯೋಜಿಸುತ್ತಿದೆ ಎಂದು ಎಸ್‌ಸಿಒ ಪ್ರಧಾನ ಕಾರ್ಯದರ್ಶಿ ವ್ಲಾಡಿಮಿರ್ ನೊರೊವ್ ಸೋಮವಾರ ನವದೆಹಲಿಯಲ್ಲಿ ನೆರೆದ ಸುದ್ದಿಗಾರರಿಗೆ ತಿಳಿಸಿದ್ದರು.

ನಾಲ್ಕು ದಿನಗಳ ಭೇಟಿಯಲ್ಲಿ ಭಾನುವಾರ ನವದೆಹಲಿಗೆ ಆಗಮಿಸಿದ ನೊರೊವ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಎಸ್‌ಸಿಒ ಸಭೆಯಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆಯು ಚರ್ಚೆಗಳಲ್ಲಿ ಕಾಣಿಸಿಕೊಂಡಿದೆಯೆ ಎಂಬುದು ಸ್ಪಷ್ಟವಾಗಿಲ್ಲ.

“ಶಾಂಘೈ ಸಹಕಾರ ಸಂಸ್ಥೆ ಪ್ರಧಾನ ಕಾರ್ಯದರ್ಶಿ ವ್ಲಾಡಿಮಿರ್ ನೊರೊವ್‌ರವರನ್ನು ಬರಮಾಡಿಕೊಂಡೆವು. SCO ಸರ್ಕಾರದ ಮುಖ್ಯಸ್ಥರ ಮಂಡಳಿಯ ಸಭೆಯ ಆತಿಥ್ಯವನ್ನು ವಹಿಸಿಕೊಳ್ಳಲು ಭಾರತ ಸಿದ್ಧತೆ ನಡೆಸುತ್ತಿರುವಾಗ ನಮ್ಮ ಸಹಕಾರದ ಪ್ರಗತಿಯನ್ನು ಪರಿಶೀಲಿಸಿದ್ದಾರೆ”ಎಂದು ಜೈಶಂಕರ್ ಟ್ವೀಟ್ ಮಾಡಿದ್ದರು.

ಈ ವರ್ಷ ಎಸ್‌ಸಿಒ ಸರ್ಕಾರಿ ಮುಖ್ಯಸ್ಥರ ಸಭೆಯನ್ನು ಭಾರತ ಆಯೋಜಿಸುತ್ತಿರುವುದಕ್ಕೆ ಎಲ್ಲಾ ಎಸ್‌ಸಿಒ ಸದಸ್ಯರು ಸಂತೋಷಪಟ್ಟಿದ್ದಾರೆ ಎಂದು ನೊರೊವ್ ಸೋಮವಾರ ಹೇಳಿದ್ದಾರೆ. ಭಾರತವು ಈ ಪ್ರದೇಶದ ಪ್ರಮುಖ ದೇಶವಾಗಿದ್ದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೊಡ್ಡ ಸಾಮರ್ಥ್ಯವನ್ನು ಹೊಂದಿದೆ ಎಂದರು.

ಆರ್ಥಿಕ ಚಟುವಟಿಕೆಗಳ ಎಸ್‌ಸಿಒ ಮಂತ್ರಿಗಳ ಸಭೆ ಸೇರಿದಂತೆ ಭಾರತದಲ್ಲಿ ಹಲವಾರು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದರು.

ಭಾರತವು 2005 ರಿಂದ ಎಸ್‌ಸಿಒದಲ್ಲಿ ವೀಕ್ಷಕರಾಗಿದ್ದರು ಮತ್ತು ಸಾಮಾನ್ಯವಾಗಿ ಯುರೇಷಿಯನ್ ಪ್ರದೇಶದಲ್ಲಿನ ಭದ್ರತೆ ಮತ್ತು ಆರ್ಥಿಕ ಸಹಕಾರವನ್ನು ಕೇಂದ್ರೀಕರಿಸುವ ಗುಂಪಿನ ಮಂತ್ರಿಮಟ್ಟದ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಎರಡೂ ಜೂನ್ 2017 ರಲ್ಲಿ ಎಸ್‌ಸಿಒದ ಪೂರ್ಣ ಸದಸ್ಯರಾದರು ಮತ್ತು ಚೀನಾ ಪ್ರಾಬಲ್ಯದ ಗುಂಪಿನಲ್ಲಿ ನವದೆಹಲಿಯ ಪ್ರವೇಶವು ಅದರ ವೇಗವನ್ನು ಹೆಚ್ಚಿಸಿದೆ.

ರಷ್ಯಾ, ಚೀನಾ, ಕಿರ್ಗಿಜ್ ರಿಪಬ್ಲಿಕ್, ಕಜಕಿಸ್ತಾನ್, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರ ನೇತೃತ್ವದಲ್ಲಿ 2001 ರಲ್ಲಿ ಶಾಂಘೈನಲ್ಲಿ ನಡೆದ ಶೃಂಗಸಭೆಯಲ್ಲಿ ಎಸ್‌ಸಿಒ ಸ್ಥಾಪಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...