Homeಮುಖಪುಟ‘ಭಾರತ ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ…’; ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್

‘ಭಾರತ ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ…’; ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿರುವ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಹೇಳಿಕೆಗಳು ‘ಭಾರತದ ಘನತೆಗೆ ಸವಾಲಾಗಿದೆ’ ಎಂದು ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಹೇಳಿದ್ದಾರೆ ಎಂದು ಸೋಮವಾರ ಎನ್‌ಡಿಟಿವಿ ವರದಿ ಮಾಡಿದೆ.

‘ಭಾರತವು ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ. ಇಡೀ ದೇಶವು ಪ್ರಧಾನಿಯವರೊಟ್ಟಿಗೆ ಒಗ್ಗಟ್ಟನ್ನು ತೋರಿಸಿದೆ. ಪ್ರಧಾನಿ ಮತ್ತು ಲಕ್ಷದ್ವೀಪಗಳ ಪರವಾಗಿ ನಿಂತಿರುವ ಭಾರತದ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

‘ನಾವು ಅವರ ಕ್ಷಮೆಯಾಚನೆ ಬಗ್ಗೆ ಮಾತನಾಡಲು ಹೋಗುವುದಿಲ್ಲ.. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ … ಅವರು ಅಂತಹ ಟೀಕೆಗಳನ್ನು ಮಾಡುವ ಅಗತ್ಯವಿಲ್ಲ. ಅವರ ತಪ್ಪುಗಳಿಗಾಗಿ ಅಲ್ಲಿನ ಸರ್ಕಾರದಿಂದ ಅವರು ಶಿಕ್ಷೆಗೆ ಒಳಗಾಗಿದ್ದಾರೆ. ಇದನ್ನೆಲ್ಲಾ ಭಾರತ ಸಹಿಸುವುದಿಲ್ಲ ಎಂದು ತೋರಿಸಿದೆ. ತನ್ನ ಪ್ರಧಾನಿಗೆ ಯಾವುದೇ ಅವಮಾನ ಆಗದಂತೆ ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು ಮತ್ತು ಸಾಮಾನ್ಯ ಜನರವರೆಗೆ ಭಾರತವು ಮಾಲ್ಡೀವ್ಸ್‌ಗೆ ತಕ್ಕ ಪ್ರತ್ಯುತ್ತರವನ್ನು ನೀಡಿದೆ’ ಎಂದರು.

ಮಾಲ್ಡೀವಿಯನ್ ಸಚಿವರಾದ ಮರ್ಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜಿದ್ ಅವರು ಎಕ್ಸ್ ನಲ್ಲಿ ಮೋದಿಯವರ ಬಗ್ಗೆ ವಿಮರ್ಶಾತ್ಮಕ ಟೀಕೆಗಳನ್ನು ಪೋಸ್ಟ್ ಮಾಡಿದ ನಂತರ ಈ ಗದ್ದಲ ಪ್ರಾರಂಭವಾಯಿತು. ಪ್ರಧಾನಿಯವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದದ್ದರು. ಪ್ರಧಾನಮಂತ್ರಿಯವರ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಲಕ್ಷದ್ವೀಪವನ್ನು ಪರ್ಯಾಯ ರಜೆಯ ತಾಣವಾಗಿಸಿಕೊಳ್ಳಲು ಪ್ರೇರೇಪಿಸಿತು.

ಮಾಲ್ಡೀವ್ಸ್ ದ್ವೀಪವು ಆದಾಯಕ್ಕಾಗಿ ಭಾರತೀಯ ಪ್ರವಾಸಿಗರ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ತಮ್ಮ ಸಚಿವರ ಹೇಳಿಕೆಯ ಬಗ್ಗೆ ದ್ವೀಪ ರಾಷ್ಟ್ರವು ತಡಮಾಡದೆ ಪ್ರತಿಕ್ರಿಯಿಸಿದೆ. ‘ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಪೋಸ್ಟ್‌ ಮಾಡಿದವರನ್ನು ಅಮಾನತುಗೊಳಿಸಲಾಗಿದೆ’ ಎಂದು ದ್ವೀಪ ರಾಷ್ಟ್ರ ಹೇಳಿದೆ.

ಈ ಘಟನೆಯು ರಾಜಕೀಯ ಮತ್ತು ರಾಜತಾಂತ್ರಿಕ ಬಿಕ್ಕಟ್ಟಾಗಿ ಮಾರ್ಪಟ್ಟಿದ್ದು, ವಿಶೇಷವಾಗಿ ಆ ದೇಶದ ವಿರೋಧ ಪಕ್ಷದ ಶಾಸಕರು ಆಡಳಿತ ಪಕ್ಷದ ಮೇಲೆ ದಾಳಿ ಮಾಡಲು ಇದನ್ನು ಬಳಸುತ್ತಿದ್ದಾರೆ. ಮಾಜಿ ಅಧ್ಯಕ್ಷ ಮೊಹಮದ್ ನಶೀದ್ ಅವರು ಸಚಿವರ ಹೇಳಿಕೆಗಳನ್ನು “ಭಯಾನಕ” ಎಂದು ಕರೆದಿದ್ದಾರೆ. ಈ ಮಧ್ಯೆ ಭಾರತವು ದೆಹಲಿಯಲ್ಲಿ ಮಾಲ್ಡೀವ್ಸ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ವ್ಯಕ್ತಪಡಿಸಿದೆ.

ಚೀನಾದ ಪರವಾಗಿದ್ದಾರೆ ಎನ್ನಲಾದ ಮೊಹಮ್ಮದ್ ಮುಯಿಝು ಅವರು ದ್ವೀಪ ರಾಷ್ಟ್ರದ ನಾಯಕರಾಗಿ ಆಯ್ಕೆಯಾದಾಗಿನಿಂದ ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಮುಯಿಝು ಅವರು ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ಮಾಲ್ಡೀವ್ಸ್‌ನಿಂದ ಭಾರತೀಯ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...