Homeಮುಖಪುಟ2023ರ ಏಷ್ಯಾ ಕಪ್‌‌ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ: ಜಯ್ ಶಾ

2023ರ ಏಷ್ಯಾ ಕಪ್‌‌ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ: ಜಯ್ ಶಾ

- Advertisement -
- Advertisement -

2023ರ ಏಷ್ಯಾಕಪ್‌ ಪಂದ್ಯಕ್ಕಾಗಿ ಭಾರತೀಯ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಮಂಗಳವಾರ ಮುಂಬೈನಲ್ಲಿ ನಡೆದ 91ನೇ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯ (ಎಜಿಎಂ) ವೇಳೆ ಮಂಗಳವಾರ ಹೇಳಿದ್ದಾರೆ.

2023 ರ ಏಷ್ಯಾ ಕಪ್ ಅನ್ನು ಪಾಕಿಸ್ತಾನವು ಆಯೋಜಿಸಲಿದೆ ಮತ್ತು ಪಂದ್ಯಾವಳಿಯಲ್ಲಿ ಭಾಗವಹಿಸಲು ಟೀಮ್ ಇಂಡಿಯಾವನ್ನು ಕಳುಹಿಸಲು ಬಿಸಿಸಿಐ ಸ್ವತಂತ್ರವಾಗಿದೆ ಎಂದು ಮೂಲಗಳು ಈ ಹಿಂದೆ ತಿಳಿಸಿದ್ದವು. ಆದರೆ ಬಿಸಿಸಿಐ ಕಾರ್ಯದರ್ಶಿಯೂ ಆಗಿರುವ ಜಯ್‌ ಶಾ, 2023ರ ಏಷ್ಯಾಕಪ್ ಅನ್ನು ತಟಸ್ಥ ಸ್ಥಳದಲ್ಲಿ ಆಡಬಹುದೇ ವಿನಃ ಪಾಕಿಸ್ತಾನದಲ್ಲಲ್ಲ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ ಕೊನೆಯದಾಗಿ 2005-06ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ನಡೆದ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಭಾರತ ಮತ್ತು ಪಾಕಿಸ್ತಾನವು 2012-13ರಲ್ಲಿ ಮೂರು T20Iಗಳು ಮತ್ತು ಅನೇಕ ಏಕದಿನ ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಮಾಡಿದ್ದವು. ಇದರ ನಂತರ ಭಾರತ ಮತ್ತು ಪಾಕಿಸ್ತಾನವು ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಆಡಿಲ್ಲ. ಅಂದಿನಿಂದ ಎರಡು ತಂಡಗಳು ವಿಶ್ವಕಪ್‌ ಅಥವಾ ಏಷ್ಯಾ ಕಪ್‌‌ನಲ್ಲಿ ಮಾತ್ರ ಕಾದಾಡಿದ್ದವು.

ಎರಡು ತಂಡಗಳ ನಡುವಿನ ಪಂದ್ಯಗಳು ಯಾವಾಗಲೂ ಹೆಚ್ಚು ನಿರೀಕ್ಷೆಯನ್ನು ಹುಟ್ಟು ಹಾಕುತ್ತವೆ ಮತ್ತು ಕ್ರೀಡಾಂಗಣಗಳು ಹೌಸ್ ಫುಲ್ ಆಗಿರುತ್ತವೆ. ಅಕ್ಟೋಬರ್ 23 ರಂದು ನಡೆಯಲಿರುವ ಎರಡು ತಂಡಗಳ T20 ವಿಶ್ವಕಪ್ 2022 ರ ಟಿಕೆಟ್‌ಗಳು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಾರಾಟವಾಗಿವೆ.

ಇದನ್ನೂ ಓದಿ: ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ಈ ನಡುವೆ ಪಾಕಿಸ್ತಾನವು ಭಾರತದ ವಿರುದ್ಧ ಕೆಲವು ಸ್ಮರಣೀಯ ಪ್ರದರ್ಶನಗಳನ್ನು ನೀಡಿದೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸುವ ಮೂಲಕ ಪಾಕಿಸ್ತಾನ ತನ್ನ ವಿಶ್ವಕಪ್‌ನಲ್ಲಿ ತನ್ನ ಸಂಪ್ರದಾಯವನ್ನು ಮುರಿದಿದೆ. ಭಾರತ ಮತ್ತು ಪಾಕಿಸ್ತಾನ ಕೊನೆಯದಾಗಿ ಏಷ್ಯಾಕಪ್‌ನಲ್ಲಿ ಮುಖಾಮುಖಿಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...