Homeಮುಖಪುಟಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

ಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಚೀನಾ ಕಾರಣವೆಂದು ಅಮೆರಿಕಾ ಪ್ರಾರಂಭಿಸಿದ ಅಭಿಯಾನದಿಂದ ಭಾರತ ದೂರವಿರಬೇಕು ಎಂದು ಚೀನಾ ಬಯಸಿದೆ. ಪೂರ್ವ ಲಡಾಕ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಉದ್ವಿಗ್ನತೆ ತಗ್ಗಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿರುವಾಗಲೂ, ಚೀನಾ ರಾಜತಾಂತ್ರಿಕ ಮಾರ್ಗಗಳ ಮೂಲಕ ಈ ವಿಷಯವನ್ನು ಭಾರತಕ್ಕೆ ತಿಳಿಸಿದೆ.

ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವಾಗ ಕೊರೊನಾ ಸಾಂಕ್ರಾಮಿಕ ವಿಷಯ ಕೂಡಾ ಚರ್ಚೆಗೆ ಬಂದಿದೆ. ಈ ವಿಡಿಯೋ-ಕಾನ್ಪರೆನ್ಸ್ ಭಾರತೀಯ ಸೇನೆಯ ಕಮಾಂಡರ್‌ಗಳು ಮತ್ತು ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿಯ ಜೊತೆಗೆ ಮಾತುಕತೆಯ ಚೌಕಟ್ಟನ್ನು ನಿಗದಿಪಡಿಸಿತು.

“ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು, ಚೀನಾ ಮತ್ತು ಭಾರತವು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು ಇನ್ನಷ್ಟು ಹೆಚ್ಚಿಸಬೇಕು, ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲ, ಬಹುಪಕ್ಷೀಯತೆಯನ್ನು ದೃಡವಾಗಿ ಎತ್ತಿಹಿಡಿದು ಹಾಗೂ ಉತ್ತೇಜಿಸಿ ಅಭಿವೃದ್ಧಿಶೀಲ ರಾಷ್ಟ್ರಗಳ ಸಾಮಾನ್ಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡರು” ಎಂದು ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌‌ನಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ನವೀನ್ ಶ್ರೀವಾಸ್ತವ ಭಾರತವನ್ನು ಪ್ರತಿನಿಧಿಸಿದರೆ. ವೂ ಜಿಯಾಂಗ್‌ಹಾವೊ, ಚೀನಾ ಸರ್ಕಾರದ ನಿಯೋಗವನ್ನು ಮುನ್ನಡೆಸಿದರು.

“ಕೊರೊನಾ ಸಾಂಕ್ರಾಮಿಕ ಮತ್ತು ವಿವಿಧ ಬಹುಪಕ್ಷೀಯ ವೇದಿಕೆಗಳಲ್ಲಿ ಎದುರಿಸುತ್ತಿರುವ ಸವಾಲಿನ ಬಗ್ಗೆ ಎರಡೂ ಕಡೆಯವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು” ಎಂದು ವಿದೇಶಾಂಗ ಸಚಿವಾಲಯ  ನವದೆಹಲಿಯಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ, ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬೀಜಿಂಗ್‌ನಲ್ಲಿ ಬಿಡುಗಡೆ ಮಾಡಿದ ಪ್ರತ್ಯೇಕ ಪತ್ರಿಕಾ ಪ್ರಕಟಣೆಯಲ್ಲಿ ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಎರಡೂ ದೇಶಗಳು ಸಹಾಕಾರ ಮಾಡುವುದಾಗಿ ಹಾ‌ಗೂ ಸಾಂಕ್ರಾಮಿಕ ಪರಿಸ್ಥಿತಿಯ ರಾಜಕೀಯೀಕರಣವನ್ನು ವಿರೋಧಿಸಲು ಒಪ್ಪಿಕೊಂಡಿದೆ ಎಂದು ಹೇಳಿದೆ.

ಅಮೆರಿಕಾ ಕೊರೊನಾ ಸಾಂಕ್ರಮಿಕಕ್ಕೆ ಚೀನಾ ಕಾರಣವೆಂದು ಪದೇ ಪದೇ ಹೇಳುತ್ತಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿ ಇದೆ ಎಂದು ಆರೋಪಿಸಿದ್ದರು. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಗೆ ಧನ ಸಹಯ ಮಾಡುವುದನ್ನು ಕೂಡಾ ಅಮೆರಿಕಾ ನಿಲ್ಲಿಸಿದೆ. ಆದರೆ ಕೊರೊನಾ ಕಾರಣಕ್ಕಾಗಿ ಚೀನಾವನ್ನು ದೂರುವ ಕಾರ್ಯದಿಂದ ಭಾರತ ಅಂತರ ಕಾಯ್ದುಕೊಂಡಿತ್ತು.

ಆದಾಗ್ಯೂ, ಯುರೋಪಿಯನ್ ಒಕ್ಕೂಟ ಮತ್ತು ಇತರ ಹಲವಾರು ರಾಷ್ಟ್ರಗಳು ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಪ್ರಾಯೋಜಿಸಿದ ವೈರಸ್‌ನ ಮೂಲವನ್ನು ಪತ್ತೆ ಹಚ್ಚುವ ನಿರ್ಣಯದೊಂದಿಗೆ ಭಾರತ ನಿಂತು ಕೊಂಡಿದೆ.

ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೂರವಾಣಿಯಲ್ಲಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆಯ ಬಗ್ಗೆಯೂ ಚರ್ಚಿಸಿದ್ದರು.


ಓದಿ: ಭಾರತ-ಚೀನಾ ಗಡಿ ವಿವಾದ-ವಿಶ್ವದ ಬಲಶಾಲಿ ದೇಶಗಳು ಭಾರತದ ಪರ ನಿಂತಿವೆಯೇ? ಫೋಸ್ಟ್ ಕಾರ್ಡ್ ಹರಡಿದ ಸುಳ್ಳುಗಳೇನು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...