Homeಮುಖಪುಟಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

ಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಚೀನಾ ಕಾರಣವೆಂದು ಅಮೆರಿಕಾ ಪ್ರಾರಂಭಿಸಿದ ಅಭಿಯಾನದಿಂದ ಭಾರತ ದೂರವಿರಬೇಕು ಎಂದು ಚೀನಾ ಬಯಸಿದೆ. ಪೂರ್ವ ಲಡಾಕ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಉದ್ವಿಗ್ನತೆ ತಗ್ಗಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿರುವಾಗಲೂ, ಚೀನಾ ರಾಜತಾಂತ್ರಿಕ ಮಾರ್ಗಗಳ ಮೂಲಕ ಈ ವಿಷಯವನ್ನು ಭಾರತಕ್ಕೆ ತಿಳಿಸಿದೆ.

ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವಾಗ ಕೊರೊನಾ ಸಾಂಕ್ರಾಮಿಕ ವಿಷಯ ಕೂಡಾ ಚರ್ಚೆಗೆ ಬಂದಿದೆ. ಈ ವಿಡಿಯೋ-ಕಾನ್ಪರೆನ್ಸ್ ಭಾರತೀಯ ಸೇನೆಯ ಕಮಾಂಡರ್‌ಗಳು ಮತ್ತು ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿಯ ಜೊತೆಗೆ ಮಾತುಕತೆಯ ಚೌಕಟ್ಟನ್ನು ನಿಗದಿಪಡಿಸಿತು.

“ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು, ಚೀನಾ ಮತ್ತು ಭಾರತವು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು ಇನ್ನಷ್ಟು ಹೆಚ್ಚಿಸಬೇಕು, ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲ, ಬಹುಪಕ್ಷೀಯತೆಯನ್ನು ದೃಡವಾಗಿ ಎತ್ತಿಹಿಡಿದು ಹಾಗೂ ಉತ್ತೇಜಿಸಿ ಅಭಿವೃದ್ಧಿಶೀಲ ರಾಷ್ಟ್ರಗಳ ಸಾಮಾನ್ಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡರು” ಎಂದು ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌‌ನಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ನವೀನ್ ಶ್ರೀವಾಸ್ತವ ಭಾರತವನ್ನು ಪ್ರತಿನಿಧಿಸಿದರೆ. ವೂ ಜಿಯಾಂಗ್‌ಹಾವೊ, ಚೀನಾ ಸರ್ಕಾರದ ನಿಯೋಗವನ್ನು ಮುನ್ನಡೆಸಿದರು.

“ಕೊರೊನಾ ಸಾಂಕ್ರಾಮಿಕ ಮತ್ತು ವಿವಿಧ ಬಹುಪಕ್ಷೀಯ ವೇದಿಕೆಗಳಲ್ಲಿ ಎದುರಿಸುತ್ತಿರುವ ಸವಾಲಿನ ಬಗ್ಗೆ ಎರಡೂ ಕಡೆಯವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು” ಎಂದು ವಿದೇಶಾಂಗ ಸಚಿವಾಲಯ  ನವದೆಹಲಿಯಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ, ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬೀಜಿಂಗ್‌ನಲ್ಲಿ ಬಿಡುಗಡೆ ಮಾಡಿದ ಪ್ರತ್ಯೇಕ ಪತ್ರಿಕಾ ಪ್ರಕಟಣೆಯಲ್ಲಿ ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಎರಡೂ ದೇಶಗಳು ಸಹಾಕಾರ ಮಾಡುವುದಾಗಿ ಹಾ‌ಗೂ ಸಾಂಕ್ರಾಮಿಕ ಪರಿಸ್ಥಿತಿಯ ರಾಜಕೀಯೀಕರಣವನ್ನು ವಿರೋಧಿಸಲು ಒಪ್ಪಿಕೊಂಡಿದೆ ಎಂದು ಹೇಳಿದೆ.

ಅಮೆರಿಕಾ ಕೊರೊನಾ ಸಾಂಕ್ರಮಿಕಕ್ಕೆ ಚೀನಾ ಕಾರಣವೆಂದು ಪದೇ ಪದೇ ಹೇಳುತ್ತಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿ ಇದೆ ಎಂದು ಆರೋಪಿಸಿದ್ದರು. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಗೆ ಧನ ಸಹಯ ಮಾಡುವುದನ್ನು ಕೂಡಾ ಅಮೆರಿಕಾ ನಿಲ್ಲಿಸಿದೆ. ಆದರೆ ಕೊರೊನಾ ಕಾರಣಕ್ಕಾಗಿ ಚೀನಾವನ್ನು ದೂರುವ ಕಾರ್ಯದಿಂದ ಭಾರತ ಅಂತರ ಕಾಯ್ದುಕೊಂಡಿತ್ತು.

ಆದಾಗ್ಯೂ, ಯುರೋಪಿಯನ್ ಒಕ್ಕೂಟ ಮತ್ತು ಇತರ ಹಲವಾರು ರಾಷ್ಟ್ರಗಳು ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಪ್ರಾಯೋಜಿಸಿದ ವೈರಸ್‌ನ ಮೂಲವನ್ನು ಪತ್ತೆ ಹಚ್ಚುವ ನಿರ್ಣಯದೊಂದಿಗೆ ಭಾರತ ನಿಂತು ಕೊಂಡಿದೆ.

ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೂರವಾಣಿಯಲ್ಲಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆಯ ಬಗ್ಗೆಯೂ ಚರ್ಚಿಸಿದ್ದರು.


ಓದಿ: ಭಾರತ-ಚೀನಾ ಗಡಿ ವಿವಾದ-ವಿಶ್ವದ ಬಲಶಾಲಿ ದೇಶಗಳು ಭಾರತದ ಪರ ನಿಂತಿವೆಯೇ? ಫೋಸ್ಟ್ ಕಾರ್ಡ್ ಹರಡಿದ ಸುಳ್ಳುಗಳೇನು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...