Homeಮುಖಪುಟಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

ಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಚೀನಾ ಕಾರಣವೆಂದು ಅಮೆರಿಕಾ ಪ್ರಾರಂಭಿಸಿದ ಅಭಿಯಾನದಿಂದ ಭಾರತ ದೂರವಿರಬೇಕು ಎಂದು ಚೀನಾ ಬಯಸಿದೆ. ಪೂರ್ವ ಲಡಾಕ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಉದ್ವಿಗ್ನತೆ ತಗ್ಗಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿರುವಾಗಲೂ, ಚೀನಾ ರಾಜತಾಂತ್ರಿಕ ಮಾರ್ಗಗಳ ಮೂಲಕ ಈ ವಿಷಯವನ್ನು ಭಾರತಕ್ಕೆ ತಿಳಿಸಿದೆ.

ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವಾಗ ಕೊರೊನಾ ಸಾಂಕ್ರಾಮಿಕ ವಿಷಯ ಕೂಡಾ ಚರ್ಚೆಗೆ ಬಂದಿದೆ. ಈ ವಿಡಿಯೋ-ಕಾನ್ಪರೆನ್ಸ್ ಭಾರತೀಯ ಸೇನೆಯ ಕಮಾಂಡರ್‌ಗಳು ಮತ್ತು ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿಯ ಜೊತೆಗೆ ಮಾತುಕತೆಯ ಚೌಕಟ್ಟನ್ನು ನಿಗದಿಪಡಿಸಿತು.

“ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು, ಚೀನಾ ಮತ್ತು ಭಾರತವು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು ಇನ್ನಷ್ಟು ಹೆಚ್ಚಿಸಬೇಕು, ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲ, ಬಹುಪಕ್ಷೀಯತೆಯನ್ನು ದೃಡವಾಗಿ ಎತ್ತಿಹಿಡಿದು ಹಾಗೂ ಉತ್ತೇಜಿಸಿ ಅಭಿವೃದ್ಧಿಶೀಲ ರಾಷ್ಟ್ರಗಳ ಸಾಮಾನ್ಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡರು” ಎಂದು ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌‌ನಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ನವೀನ್ ಶ್ರೀವಾಸ್ತವ ಭಾರತವನ್ನು ಪ್ರತಿನಿಧಿಸಿದರೆ. ವೂ ಜಿಯಾಂಗ್‌ಹಾವೊ, ಚೀನಾ ಸರ್ಕಾರದ ನಿಯೋಗವನ್ನು ಮುನ್ನಡೆಸಿದರು.

“ಕೊರೊನಾ ಸಾಂಕ್ರಾಮಿಕ ಮತ್ತು ವಿವಿಧ ಬಹುಪಕ್ಷೀಯ ವೇದಿಕೆಗಳಲ್ಲಿ ಎದುರಿಸುತ್ತಿರುವ ಸವಾಲಿನ ಬಗ್ಗೆ ಎರಡೂ ಕಡೆಯವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು” ಎಂದು ವಿದೇಶಾಂಗ ಸಚಿವಾಲಯ  ನವದೆಹಲಿಯಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ, ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬೀಜಿಂಗ್‌ನಲ್ಲಿ ಬಿಡುಗಡೆ ಮಾಡಿದ ಪ್ರತ್ಯೇಕ ಪತ್ರಿಕಾ ಪ್ರಕಟಣೆಯಲ್ಲಿ ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಎರಡೂ ದೇಶಗಳು ಸಹಾಕಾರ ಮಾಡುವುದಾಗಿ ಹಾ‌ಗೂ ಸಾಂಕ್ರಾಮಿಕ ಪರಿಸ್ಥಿತಿಯ ರಾಜಕೀಯೀಕರಣವನ್ನು ವಿರೋಧಿಸಲು ಒಪ್ಪಿಕೊಂಡಿದೆ ಎಂದು ಹೇಳಿದೆ.

ಅಮೆರಿಕಾ ಕೊರೊನಾ ಸಾಂಕ್ರಮಿಕಕ್ಕೆ ಚೀನಾ ಕಾರಣವೆಂದು ಪದೇ ಪದೇ ಹೇಳುತ್ತಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿ ಇದೆ ಎಂದು ಆರೋಪಿಸಿದ್ದರು. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಗೆ ಧನ ಸಹಯ ಮಾಡುವುದನ್ನು ಕೂಡಾ ಅಮೆರಿಕಾ ನಿಲ್ಲಿಸಿದೆ. ಆದರೆ ಕೊರೊನಾ ಕಾರಣಕ್ಕಾಗಿ ಚೀನಾವನ್ನು ದೂರುವ ಕಾರ್ಯದಿಂದ ಭಾರತ ಅಂತರ ಕಾಯ್ದುಕೊಂಡಿತ್ತು.

ಆದಾಗ್ಯೂ, ಯುರೋಪಿಯನ್ ಒಕ್ಕೂಟ ಮತ್ತು ಇತರ ಹಲವಾರು ರಾಷ್ಟ್ರಗಳು ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಪ್ರಾಯೋಜಿಸಿದ ವೈರಸ್‌ನ ಮೂಲವನ್ನು ಪತ್ತೆ ಹಚ್ಚುವ ನಿರ್ಣಯದೊಂದಿಗೆ ಭಾರತ ನಿಂತು ಕೊಂಡಿದೆ.

ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೂರವಾಣಿಯಲ್ಲಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆಯ ಬಗ್ಗೆಯೂ ಚರ್ಚಿಸಿದ್ದರು.


ಓದಿ: ಭಾರತ-ಚೀನಾ ಗಡಿ ವಿವಾದ-ವಿಶ್ವದ ಬಲಶಾಲಿ ದೇಶಗಳು ಭಾರತದ ಪರ ನಿಂತಿವೆಯೇ? ಫೋಸ್ಟ್ ಕಾರ್ಡ್ ಹರಡಿದ ಸುಳ್ಳುಗಳೇನು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....