HomeಮುಖಪುಟINDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ...

INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

- Advertisement -
- Advertisement -

INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ, ಎನ್‌ಡಿಎ INDIA ಎದುರಿಸಲು ಸಾಧ್ಯವೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಒಗ್ಗಟ್ಟಿನ ಸಭೆಯ ನಂತರ ಮಾತನಾಡಿದ ಅವರು, ನಮ್ಮ ಸಭೆ ಫಲಪ್ರದವಾಗಿದೆ ಮತ್ತು ಯಶಸ್ವಿಯಾಗಿದೆ. ನಮ್ಮ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈಯನ್ಸ್ ಎಂದು ಹೆಸರಿಟ್ಟಿದ್ದೇವೆ. ಎನ್‌ಡಿಎಗೆ INDIA ವನ್ನು ಎದುರಿಸುವ ಶಕ್ತಿ ಇದೆಯೇ ಎಂದು ಅವರು ಹೇಳಿದ್ದಾರೆ.

ಕೇಂದ್ರದ ಆಡಳಿತವು ಇಂದು ಮಾಡುತ್ತಿರುವ ಏಕೈಕ ಕೆಲಸವೆಂದರೆ ಸರ್ಕಾರಗಳನ್ನು ಖರೀದಿಸುವುದು ಮತ್ತು ಸಾರ್ವಜನಿಕ ಸಂಪತ್ತನ್ನು ಮಾರಾಟ ಮಾಡುವುದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, 2024ರ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಿ ಯಶಸ್ವಿಯಾಗುತ್ತೇವೆ. ಇಂದು ಇಡೀ ಮಾಧ್ಯಮವನ್ನು ಪ್ರಧಾನಿ ಮೋದಿ ವಶಪಡಿಸಿಕೊಂಡಿದ್ದಾರೆ. ಅವರ ಆದೇಶವಿಲ್ಲದೇ ಯಾರೂ ಚಲಿಸುವುದಿಲ್ಲ. ನನ್ನ 52 ವರ್ಷಗಳ ಸಕ್ರಿಯ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದ ನಾಯಕರನ್ನು (ಧ್ವನಿಗಳನ್ನು) ಹತ್ತಿಕ್ಕುವ ಇಂತಹ ಪ್ರತಿಕೂಲ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಮಹತ್ವದ ಸಭೆ ಇದಾಗಿದ್ದು, ದೇಶದ ಹಿತಾಸಕ್ತಿಯಿಂದ ನಾವು ಒಗ್ಗೂಡಿದ್ದೇವೆ. ಒಕ್ಕೂಟದ ಪ್ರಚಾರ ನಿರ್ವಹಣೆಗಾಗಿ ಸಚಿವಾಲಯವನ್ನು ಸ್ಥಾಪಿಸಲಾಗುವುದು ಮತ್ತು ಇತರ ಸಮಿತಿಗಳು ಇರುತ್ತವೆ ಎಂದು ಅವರು ತಿಳಿಸಿದ್ದಾರೆ.

ಎನ್‌ಡಿಎ ಇಂದೇ 30 ಪಕ್ಷಗಳೊಂದಿಗೆ ಸಭೆ ನಡೆಸುತ್ತಿದೆ. ಭಾರತದಲ್ಲಿ ಇಷ್ಟು ಪಕ್ಷಗಳು ಸಕ್ರಿಯವಾಗಿರುವುದರ ಬಗ್ಗೆ ನಾನು ಕೇಳಿರಲಿಲ್ಲ. ಈ ಮೊದಲು ಅವರು ಯಾವುದೇ ಸಭೆಗಳನ್ನು ನಡೆಸಲಿಲ್ಲ ಆದರೆ ಈಗ ಅವರು ಒಂದೊಂದಾಗಿ ಭೇಟಿಯಾಗುತ್ತಿದ್ದಾರೆ. ಏಕೆಂದರೆ ಪ್ರಧಾನಿ ಮೋದಿ ಈಗ ವಿರೋಧ ಪಕ್ಷಗಳಿಗೆ ಹೆದರುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದು ನಮ್ಮ ಎರಡನೇ ಯಶಸ್ವಿ ಸಭೆಯಾಗಿದೆ. ಇಡೀ ದೇಶವೇ ನಮ್ಮ ಕುಟುಂಬವಾಗಿದ್ದು, ನಮ್ಮ ಕುಟುಂಬವನ್ನು ಉಳಿಸಲು ನಾವು ಒಟ್ಟಾಗಿ ಹೋರಾಡುತ್ತಿದ್ದೇವೆ. ಈ ಮೈತ್ರಿಕೂಟದ ಮುಂದಿನ ಸಭೆ ಮುಂಬೈನಲ್ಲಿ ನಡೆಯಲಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದರು.

ಪ್ರಧಾನಿ ಮೋದಿಗೆ 9 ವರ್ಷಗಳಲ್ಲಿ ದೇಶಕ್ಕಾಗಿ ಸಾಕಷ್ಟು ಮಾಡುವ ಅವಕಾಶ ಸಿಕ್ಕಿದೆ, ಆದರೆ ಯಾವುದೇ ಅಭಿವೃದ್ಧಿಯಾಗಿಲ್ಲ. ಅವರು ಕಳೆದ 9 ವರ್ಷಗಳಲ್ಲಿ ಆರ್ಥಿಕತೆ, ರೈಲ್ವೆಯನ್ನು ಹಾಳು ಮಾಡಿದ್ದಾರೆ. ಯುವಕರು, ರೈತರು, ಉದ್ಯಮಿಗಳು, ಕೈಗಾರಿಕೋದ್ಯಮಿಗಳು ಎಲ್ಲರೂ ಈ (ಎನ್‌ಡಿಎ) ಸರ್ಕಾರದಿಂದ ಅತೃಪ್ತರಾಗಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.

ಈ ಹೋರಾಟ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಅಲ್ಲ. ದೇಶದ ಧ್ವನಿಯನ್ನು ಅಡಗಿಸುತ್ತಿರುವುದರ ವಿರುದ್ಧದ ಹೋರಾಟವಾಗಿದೆ. ಅದಕ್ಕಾಗಿಯೇ ನಾವು ಮೈತ್ರಿಕೂಟದ ಹೆಸರನ್ನು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ ಎಂದು ಕರೆದಿದ್ದೇವೆ. ಯಾರಾದರೂ ಇಂಡಿಯಾದ ವಿರುದ್ಧ ನಿಂತರೆ ಯಾರು ಗೆಲ್ಲಬಹುದು? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...