HomeಮುಖಪುಟINDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಭರವಸೆ ನೀಡಿದ್ದ 15 ಲಕ್ಷ ರೂ.ವನ್ನು ಬ್ಯಾಂಕ್ ಎಕೌಂಟ್‌ಗಳಿಗೆ ಜಮೆ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ ಎಂದು ಹೇಳಿದ್ದಾರೆ.

ಇಂದು ಸಿಎಂ ಎಂ.ಕೆ.ಸ್ಟಾಲಿನ್ ಪ್ರಾರಂಭಿಸಿದ  ಪಾಡ್ ಕಾಸ್ಟ್‌ನ ಮೊದಲ ಸಂಚಿಕೆ  ಮಲಯಾಳಂ, ತೆಲುಗು, ಹಿಂದಿ, ಕನ್ನಡ, ತೆಲುಗು ಭಾಷೆಗಳಲ್ಲಿ  ಬಿಡುಗಡೆಯಾಗಿದ್ದು, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣೆಗೆ ಮೊದಲು ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಜನರಿಗೆ ಭರವಸೆ ನೀಡಿದ 15 ಲಕ್ಷವನ್ನು ಎಕೌಂಟ್‌ಗೆ ಜಮೆ ಮಾಡಿಲ್ಲ. ರೈತರ ಆದಾಯ ದ್ವಿಮುಖವಾಗಿಲ್ಲ. 2 ಕೋಟಿ ಉದ್ಯೋಗ ವಾರ್ಷಿಕವಾಗಿ ಸೃಷ್ಟಿ ಮಾಡವ ಭರವಸೆ ನೀಡಲಾಗಿತ್ತು, ಆದರೆ ಅದನ್ನು ಈಡೇರಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿಗಳು ತನ್ನ ಪಾಡ್ ಕಾಸ್ಟ್ ಸಂಚಿಕೆಯ ಲೈವ್‌ನಲ್ಲಿ ಹೇಳಿದ್ದಾರೆ.

ಭಾರತ, ಹರ್ಯಾಣ ಅಥವಾ ಮಣಿಪುರದಂತೆ ಆಗದಿರಲು INDIA ಒಕ್ಕೂಟದ ಗೆಲುವು ಅನಿವಾರ್ಯವಾಗಿದೆ ಎಂದು ಮೇ ತಿಂಗಳಿನಲ್ಲಿ ನಡೆದ ಮಣಿಪುರದ ಹಿಂಸಾಚಾರ ಮತ್ತು ಇತ್ತೀಚೆಗೆ ನಡೆದ ಹರ್ಯಾಣ ಹಿಂಸಾಚಾರದ ಬಗ್ಗೆ ಸ್ಟಾಲಿನ್‌ ಮಾತಿನಲ್ಲಿ ಉಲ್ಲೇಖಿಸಿದ್ದಾರೆ.

ಬಹುಸಂಸ್ಕೃತಿ ಮತ್ತು ವೈವಿಧ್ಯಮಯ ಭಾರತವನ್ನು ರೂಪಿಸಿ ಎಂದು ಎಂಕೆ ಸ್ಟಾಲಿನ್ ಜನರಿಗೆ ಕರೆ ನೀಡಿದ್ದು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ, ಏರ್ ಇಂಡಿಯಾ ಮಾರಾಟ, ವಿಮಾನ ನಿಲ್ದಾಣಗಳು ಮತ್ತು ಬಂದರುಗಳನ್ನು ಬಿಜೆಪಿಯ ನಿಕಟವರ್ತಿಗಳಿಗೆ ಹಸ್ತಾಂತರ ಕಾರ್ಯವನ್ನು ಮುಚ್ಚಿಡಲು ಬಿಜೆಪಿ ಕೋಮುವಾದವನ್ನು ಆಶ್ರಯಿಸುತ್ತದೆ ಎಂದು ಆರೋಪಿಸಿದ್ದಾರೆ.

ಸ್ಟಾಲಿನ್‌ ಅವರು ತಮ್ಮ ಭಾಷಣದಲ್ಲಿ ಗುಜರಾತ್‌ ಗಲಭೆಯನ್ನು ಉಲ್ಲೇಖಿಸಿದ್ದಾರೆ. ದ್ವೇಷವನ್ನು 2002ರಲ್ಲಿ ಗುಜರಾತ್‌ನಲ್ಲಿ ತೋರಿಸಲಾಗಿದೆ. ಇದೇ ಕಾರಣದಿಂದ 2023ರಲ್ಲಿ ಹರ್ಯಾಣ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಸಾಮಾಜಿಕ ನ್ಯಾಯ, ಶಾಂತಿ ಪುನಸ್ಥಾಪನೆ, ಜಾತ್ಯತೀತತೆ ಮತ್ತು ಸಮಾಜವಾದವನ್ನು ಪುನಃಸ್ಥಾಪಿಸಲು INDIA  ಒಕ್ಕೂಟವನ್ನು ರಚಿಸಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದಾಗಲೆಲ್ಲಾ ಡಿಎಂಕೆ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಎಂಕೆ ಸ್ಟಾಲಿನ್ ಹೇಳಿದರು.

ಇದನ್ನು ಓದಿ: ಜನ ಆಶೀರ್ವಾದ ಯಾತ್ರೆಗೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ; ಬಿಜೆಪಿ ವಿರುದ್ಧ ತಿರುಗಿಬಿದ್ದ ಉಮಾಭಾರತಿ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...