HomeಮುಖಪುಟINDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಭರವಸೆ ನೀಡಿದ್ದ 15 ಲಕ್ಷ ರೂ.ವನ್ನು ಬ್ಯಾಂಕ್ ಎಕೌಂಟ್‌ಗಳಿಗೆ ಜಮೆ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ ಎಂದು ಹೇಳಿದ್ದಾರೆ.

ಇಂದು ಸಿಎಂ ಎಂ.ಕೆ.ಸ್ಟಾಲಿನ್ ಪ್ರಾರಂಭಿಸಿದ  ಪಾಡ್ ಕಾಸ್ಟ್‌ನ ಮೊದಲ ಸಂಚಿಕೆ  ಮಲಯಾಳಂ, ತೆಲುಗು, ಹಿಂದಿ, ಕನ್ನಡ, ತೆಲುಗು ಭಾಷೆಗಳಲ್ಲಿ  ಬಿಡುಗಡೆಯಾಗಿದ್ದು, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣೆಗೆ ಮೊದಲು ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಜನರಿಗೆ ಭರವಸೆ ನೀಡಿದ 15 ಲಕ್ಷವನ್ನು ಎಕೌಂಟ್‌ಗೆ ಜಮೆ ಮಾಡಿಲ್ಲ. ರೈತರ ಆದಾಯ ದ್ವಿಮುಖವಾಗಿಲ್ಲ. 2 ಕೋಟಿ ಉದ್ಯೋಗ ವಾರ್ಷಿಕವಾಗಿ ಸೃಷ್ಟಿ ಮಾಡವ ಭರವಸೆ ನೀಡಲಾಗಿತ್ತು, ಆದರೆ ಅದನ್ನು ಈಡೇರಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿಗಳು ತನ್ನ ಪಾಡ್ ಕಾಸ್ಟ್ ಸಂಚಿಕೆಯ ಲೈವ್‌ನಲ್ಲಿ ಹೇಳಿದ್ದಾರೆ.

ಭಾರತ, ಹರ್ಯಾಣ ಅಥವಾ ಮಣಿಪುರದಂತೆ ಆಗದಿರಲು INDIA ಒಕ್ಕೂಟದ ಗೆಲುವು ಅನಿವಾರ್ಯವಾಗಿದೆ ಎಂದು ಮೇ ತಿಂಗಳಿನಲ್ಲಿ ನಡೆದ ಮಣಿಪುರದ ಹಿಂಸಾಚಾರ ಮತ್ತು ಇತ್ತೀಚೆಗೆ ನಡೆದ ಹರ್ಯಾಣ ಹಿಂಸಾಚಾರದ ಬಗ್ಗೆ ಸ್ಟಾಲಿನ್‌ ಮಾತಿನಲ್ಲಿ ಉಲ್ಲೇಖಿಸಿದ್ದಾರೆ.

ಬಹುಸಂಸ್ಕೃತಿ ಮತ್ತು ವೈವಿಧ್ಯಮಯ ಭಾರತವನ್ನು ರೂಪಿಸಿ ಎಂದು ಎಂಕೆ ಸ್ಟಾಲಿನ್ ಜನರಿಗೆ ಕರೆ ನೀಡಿದ್ದು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ, ಏರ್ ಇಂಡಿಯಾ ಮಾರಾಟ, ವಿಮಾನ ನಿಲ್ದಾಣಗಳು ಮತ್ತು ಬಂದರುಗಳನ್ನು ಬಿಜೆಪಿಯ ನಿಕಟವರ್ತಿಗಳಿಗೆ ಹಸ್ತಾಂತರ ಕಾರ್ಯವನ್ನು ಮುಚ್ಚಿಡಲು ಬಿಜೆಪಿ ಕೋಮುವಾದವನ್ನು ಆಶ್ರಯಿಸುತ್ತದೆ ಎಂದು ಆರೋಪಿಸಿದ್ದಾರೆ.

ಸ್ಟಾಲಿನ್‌ ಅವರು ತಮ್ಮ ಭಾಷಣದಲ್ಲಿ ಗುಜರಾತ್‌ ಗಲಭೆಯನ್ನು ಉಲ್ಲೇಖಿಸಿದ್ದಾರೆ. ದ್ವೇಷವನ್ನು 2002ರಲ್ಲಿ ಗುಜರಾತ್‌ನಲ್ಲಿ ತೋರಿಸಲಾಗಿದೆ. ಇದೇ ಕಾರಣದಿಂದ 2023ರಲ್ಲಿ ಹರ್ಯಾಣ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಸಾಮಾಜಿಕ ನ್ಯಾಯ, ಶಾಂತಿ ಪುನಸ್ಥಾಪನೆ, ಜಾತ್ಯತೀತತೆ ಮತ್ತು ಸಮಾಜವಾದವನ್ನು ಪುನಃಸ್ಥಾಪಿಸಲು INDIA  ಒಕ್ಕೂಟವನ್ನು ರಚಿಸಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದಾಗಲೆಲ್ಲಾ ಡಿಎಂಕೆ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಎಂಕೆ ಸ್ಟಾಲಿನ್ ಹೇಳಿದರು.

ಇದನ್ನು ಓದಿ: ಜನ ಆಶೀರ್ವಾದ ಯಾತ್ರೆಗೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ; ಬಿಜೆಪಿ ವಿರುದ್ಧ ತಿರುಗಿಬಿದ್ದ ಉಮಾಭಾರತಿ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...