HomeಮುಖಪುಟINDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಭರವಸೆ ನೀಡಿದ್ದ 15 ಲಕ್ಷ ರೂ.ವನ್ನು ಬ್ಯಾಂಕ್ ಎಕೌಂಟ್‌ಗಳಿಗೆ ಜಮೆ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ ಎಂದು ಹೇಳಿದ್ದಾರೆ.

ಇಂದು ಸಿಎಂ ಎಂ.ಕೆ.ಸ್ಟಾಲಿನ್ ಪ್ರಾರಂಭಿಸಿದ  ಪಾಡ್ ಕಾಸ್ಟ್‌ನ ಮೊದಲ ಸಂಚಿಕೆ  ಮಲಯಾಳಂ, ತೆಲುಗು, ಹಿಂದಿ, ಕನ್ನಡ, ತೆಲುಗು ಭಾಷೆಗಳಲ್ಲಿ  ಬಿಡುಗಡೆಯಾಗಿದ್ದು, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣೆಗೆ ಮೊದಲು ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಜನರಿಗೆ ಭರವಸೆ ನೀಡಿದ 15 ಲಕ್ಷವನ್ನು ಎಕೌಂಟ್‌ಗೆ ಜಮೆ ಮಾಡಿಲ್ಲ. ರೈತರ ಆದಾಯ ದ್ವಿಮುಖವಾಗಿಲ್ಲ. 2 ಕೋಟಿ ಉದ್ಯೋಗ ವಾರ್ಷಿಕವಾಗಿ ಸೃಷ್ಟಿ ಮಾಡವ ಭರವಸೆ ನೀಡಲಾಗಿತ್ತು, ಆದರೆ ಅದನ್ನು ಈಡೇರಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿಗಳು ತನ್ನ ಪಾಡ್ ಕಾಸ್ಟ್ ಸಂಚಿಕೆಯ ಲೈವ್‌ನಲ್ಲಿ ಹೇಳಿದ್ದಾರೆ.

ಭಾರತ, ಹರ್ಯಾಣ ಅಥವಾ ಮಣಿಪುರದಂತೆ ಆಗದಿರಲು INDIA ಒಕ್ಕೂಟದ ಗೆಲುವು ಅನಿವಾರ್ಯವಾಗಿದೆ ಎಂದು ಮೇ ತಿಂಗಳಿನಲ್ಲಿ ನಡೆದ ಮಣಿಪುರದ ಹಿಂಸಾಚಾರ ಮತ್ತು ಇತ್ತೀಚೆಗೆ ನಡೆದ ಹರ್ಯಾಣ ಹಿಂಸಾಚಾರದ ಬಗ್ಗೆ ಸ್ಟಾಲಿನ್‌ ಮಾತಿನಲ್ಲಿ ಉಲ್ಲೇಖಿಸಿದ್ದಾರೆ.

ಬಹುಸಂಸ್ಕೃತಿ ಮತ್ತು ವೈವಿಧ್ಯಮಯ ಭಾರತವನ್ನು ರೂಪಿಸಿ ಎಂದು ಎಂಕೆ ಸ್ಟಾಲಿನ್ ಜನರಿಗೆ ಕರೆ ನೀಡಿದ್ದು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ, ಏರ್ ಇಂಡಿಯಾ ಮಾರಾಟ, ವಿಮಾನ ನಿಲ್ದಾಣಗಳು ಮತ್ತು ಬಂದರುಗಳನ್ನು ಬಿಜೆಪಿಯ ನಿಕಟವರ್ತಿಗಳಿಗೆ ಹಸ್ತಾಂತರ ಕಾರ್ಯವನ್ನು ಮುಚ್ಚಿಡಲು ಬಿಜೆಪಿ ಕೋಮುವಾದವನ್ನು ಆಶ್ರಯಿಸುತ್ತದೆ ಎಂದು ಆರೋಪಿಸಿದ್ದಾರೆ.

ಸ್ಟಾಲಿನ್‌ ಅವರು ತಮ್ಮ ಭಾಷಣದಲ್ಲಿ ಗುಜರಾತ್‌ ಗಲಭೆಯನ್ನು ಉಲ್ಲೇಖಿಸಿದ್ದಾರೆ. ದ್ವೇಷವನ್ನು 2002ರಲ್ಲಿ ಗುಜರಾತ್‌ನಲ್ಲಿ ತೋರಿಸಲಾಗಿದೆ. ಇದೇ ಕಾರಣದಿಂದ 2023ರಲ್ಲಿ ಹರ್ಯಾಣ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಸಾಮಾಜಿಕ ನ್ಯಾಯ, ಶಾಂತಿ ಪುನಸ್ಥಾಪನೆ, ಜಾತ್ಯತೀತತೆ ಮತ್ತು ಸಮಾಜವಾದವನ್ನು ಪುನಃಸ್ಥಾಪಿಸಲು INDIA  ಒಕ್ಕೂಟವನ್ನು ರಚಿಸಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದಾಗಲೆಲ್ಲಾ ಡಿಎಂಕೆ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಎಂಕೆ ಸ್ಟಾಲಿನ್ ಹೇಳಿದರು.

ಇದನ್ನು ಓದಿ: ಜನ ಆಶೀರ್ವಾದ ಯಾತ್ರೆಗೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ; ಬಿಜೆಪಿ ವಿರುದ್ಧ ತಿರುಗಿಬಿದ್ದ ಉಮಾಭಾರತಿ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...