HomeಮುಖಪುಟINDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಭರವಸೆ ನೀಡಿದ್ದ 15 ಲಕ್ಷ ರೂ.ವನ್ನು ಬ್ಯಾಂಕ್ ಎಕೌಂಟ್‌ಗಳಿಗೆ ಜಮೆ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ ಎಂದು ಹೇಳಿದ್ದಾರೆ.

ಇಂದು ಸಿಎಂ ಎಂ.ಕೆ.ಸ್ಟಾಲಿನ್ ಪ್ರಾರಂಭಿಸಿದ  ಪಾಡ್ ಕಾಸ್ಟ್‌ನ ಮೊದಲ ಸಂಚಿಕೆ  ಮಲಯಾಳಂ, ತೆಲುಗು, ಹಿಂದಿ, ಕನ್ನಡ, ತೆಲುಗು ಭಾಷೆಗಳಲ್ಲಿ  ಬಿಡುಗಡೆಯಾಗಿದ್ದು, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣೆಗೆ ಮೊದಲು ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಜನರಿಗೆ ಭರವಸೆ ನೀಡಿದ 15 ಲಕ್ಷವನ್ನು ಎಕೌಂಟ್‌ಗೆ ಜಮೆ ಮಾಡಿಲ್ಲ. ರೈತರ ಆದಾಯ ದ್ವಿಮುಖವಾಗಿಲ್ಲ. 2 ಕೋಟಿ ಉದ್ಯೋಗ ವಾರ್ಷಿಕವಾಗಿ ಸೃಷ್ಟಿ ಮಾಡವ ಭರವಸೆ ನೀಡಲಾಗಿತ್ತು, ಆದರೆ ಅದನ್ನು ಈಡೇರಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿಗಳು ತನ್ನ ಪಾಡ್ ಕಾಸ್ಟ್ ಸಂಚಿಕೆಯ ಲೈವ್‌ನಲ್ಲಿ ಹೇಳಿದ್ದಾರೆ.

ಭಾರತ, ಹರ್ಯಾಣ ಅಥವಾ ಮಣಿಪುರದಂತೆ ಆಗದಿರಲು INDIA ಒಕ್ಕೂಟದ ಗೆಲುವು ಅನಿವಾರ್ಯವಾಗಿದೆ ಎಂದು ಮೇ ತಿಂಗಳಿನಲ್ಲಿ ನಡೆದ ಮಣಿಪುರದ ಹಿಂಸಾಚಾರ ಮತ್ತು ಇತ್ತೀಚೆಗೆ ನಡೆದ ಹರ್ಯಾಣ ಹಿಂಸಾಚಾರದ ಬಗ್ಗೆ ಸ್ಟಾಲಿನ್‌ ಮಾತಿನಲ್ಲಿ ಉಲ್ಲೇಖಿಸಿದ್ದಾರೆ.

ಬಹುಸಂಸ್ಕೃತಿ ಮತ್ತು ವೈವಿಧ್ಯಮಯ ಭಾರತವನ್ನು ರೂಪಿಸಿ ಎಂದು ಎಂಕೆ ಸ್ಟಾಲಿನ್ ಜನರಿಗೆ ಕರೆ ನೀಡಿದ್ದು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ, ಏರ್ ಇಂಡಿಯಾ ಮಾರಾಟ, ವಿಮಾನ ನಿಲ್ದಾಣಗಳು ಮತ್ತು ಬಂದರುಗಳನ್ನು ಬಿಜೆಪಿಯ ನಿಕಟವರ್ತಿಗಳಿಗೆ ಹಸ್ತಾಂತರ ಕಾರ್ಯವನ್ನು ಮುಚ್ಚಿಡಲು ಬಿಜೆಪಿ ಕೋಮುವಾದವನ್ನು ಆಶ್ರಯಿಸುತ್ತದೆ ಎಂದು ಆರೋಪಿಸಿದ್ದಾರೆ.

ಸ್ಟಾಲಿನ್‌ ಅವರು ತಮ್ಮ ಭಾಷಣದಲ್ಲಿ ಗುಜರಾತ್‌ ಗಲಭೆಯನ್ನು ಉಲ್ಲೇಖಿಸಿದ್ದಾರೆ. ದ್ವೇಷವನ್ನು 2002ರಲ್ಲಿ ಗುಜರಾತ್‌ನಲ್ಲಿ ತೋರಿಸಲಾಗಿದೆ. ಇದೇ ಕಾರಣದಿಂದ 2023ರಲ್ಲಿ ಹರ್ಯಾಣ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಸಾಮಾಜಿಕ ನ್ಯಾಯ, ಶಾಂತಿ ಪುನಸ್ಥಾಪನೆ, ಜಾತ್ಯತೀತತೆ ಮತ್ತು ಸಮಾಜವಾದವನ್ನು ಪುನಃಸ್ಥಾಪಿಸಲು INDIA  ಒಕ್ಕೂಟವನ್ನು ರಚಿಸಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದಾಗಲೆಲ್ಲಾ ಡಿಎಂಕೆ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಎಂಕೆ ಸ್ಟಾಲಿನ್ ಹೇಳಿದರು.

ಇದನ್ನು ಓದಿ: ಜನ ಆಶೀರ್ವಾದ ಯಾತ್ರೆಗೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ; ಬಿಜೆಪಿ ವಿರುದ್ಧ ತಿರುಗಿಬಿದ್ದ ಉಮಾಭಾರತಿ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...