Homeಸಿನಿಮಾಕ್ರೀಡೆಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

- Advertisement -
- Advertisement -

ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡವು 16 ರನ್‌ಗಳ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಆ ಮೂಲಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿಯವರಿಗೆ ಅರ್ಥಪೂರ್ಣ ವಿದಾಯ ಹೇಳಲಾಯ್ತು. ಈ ಐತಿಹಾಸಿಕ ಸಾಧನೆಗೆ ಕಾರಣವಾದ ಪಂದ್ಯವು ಹಲವು ಹೊಸತನಗಳಿಗೆ ಸಾಕ್ಷಿಯಾಯಿತು.

ವಿವಾದಕ್ಕೆ ಕಾರಣವಾದ ಕೊನೆಯ ವಿಕೆಟ್

ಭಾರತ ಮಹಿಳೆಯರ ತಂಡವು ಮೊದಲು ಬ್ಯಾಟ್ ಮಾಡಿ 45.5 ಓವರ್‌ಗಳಲ್ಲಿ 169 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಸಾಧಾರಣ ರನ್ ಗುರಿ ಪಡೆದ ಇಂಗ್ಲೆಂಡ್ ಮಹಿಳಾ ತಂಡವು ಭಾರತದ ಬೌಲಿಂಗ್ ದಾಳಿಗೆ ಬೆದರಿತು. ಒಂದು ಹಂತದಲ್ಲಿ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಚಾರ್ಲೋಟ್ ಡೀನ್‌ರವರ ತಾಳ್ಮೆಯ ಆಟದಿಂದ ಗೆಲುವಿನ ಸನಿಹಕ್ಕೆ ಬಂದಿತ್ತು. 80 ಎಸೆತಗಳಲ್ಲಿ 47 ರನ್ ಗಳಿಸಿದ್ದ ಡೀನ್ ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿದ್ದಾಗ ಅನಗತ್ಯ ರನ್ ಔಟ್ ಆಗುವ ಮೂಲಕ ಕೊನೆಯ ವಿಕೆಟ್ ಒಪ್ಪಿಸಿ ಸೋಲೊಪ್ಪಿಕೊಂಡರು.

ಆದರೆ ಅವರ ರನ್ ಔಟ್ ಅಥವಾ ಮಕಂಡಿಂಗ್ ಎಂದು ಕರೆಯುವ ಔಟ್‌ ಕುರಿತು ವಿವಾದವೆದ್ದಿದೆ. ಕೆಲವರು ಅದನ್ನು ಕಾನೂನುಬದ್ಧ ಔಟ್ ಎಂದರೆ ಮತ್ತೆ ಕೆಲವರು ಇದು ನಿಜವಾದ ಕ್ರೀಡಾ ಸ್ಪೂರ್ತಿಯಲ್ಲ ಎಂದು ಕರೆದಿದ್ದಾರೆ.

ನಡೆದುದ್ದೇನು

ಇಂಗ್ಲೆಂಡ್ ತಂಡ 153 ರನ್ ಗಳಿಸಿ 9 ವಿಕೆಟ್ ಕಳೆದುಕೊಂಡಿತ್ತು. ಕ್ರೀಸ್‌ನಲ್ಲಿದ್ದ ಚಾರ್ಲೋಟ್ ಡೀನ್‌ ಮತ್ತು ಪ್ರೆಯಾ ಡೆವಿಸ್ 35 ರನ್‌ಗಳ ಜೊತೆಯಾಟದೊಂದಿಗೆ ಉತ್ತಮ ಆಟ ಆಡುತ್ತಿದ್ದರು. ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿತ್ತು. ಭಾರತದ ದೀಪ್ತಿ ಶರ್ಮಾ ಬೌಲಿಂಗ್ ಮಾಡುತ್ತಿದ್ದಾಗ ನಾಲ್ಕನೆ ಎಸೆತ ಎಸೆಯುವ ಮುನ್ನವೇ ನಾನ್‌ ಸ್ಟ್ರೈಕರ್‌ ಎಂಡ್‌ನಲ್ಲಿದ್ದ ಚಾರ್ಲೋಟ್ ಡೀನ್‌ ರನ್ ಗಾಗಿ ಕ್ರೀಸ್ ಬಿಟ್ಟು ಓಡಿದ್ದರು. ಆದರೆ ದೀಪ್ತಿ ಶರ್ಮಾ ಬೌಲ್ ಮಾಡುವ ಬದಲು ನಾನ್‌ ಸ್ಟ್ರೈಕರ್‌ ಎಂಡ್‌ನ ಬೆಲ್ಸ್ ಎಗರಿಸಿದರು. ಅಂಪೈರ್ ಡೆಡ್ ಬಾಲ್ ಸೂಚನೆ ಕೊಟ್ಟಿದ್ದರು. ಆದರೆ ಸಮಾಲೋಚಿಸಿ ಮೂರನೇ ಅಂಪೈರ್ ಮೋರೆ ಹೋದಾಗ ಅವರು ಔಟ್ ಎಂದು ಸೂಚಿಸಿದರು. ಇಂಗ್ಲೆಂಡ್ ತಂಡ ಆಲೌಟ್ ಆಯ್ತು. ಭಾರತ 16 ರನ್‌ಗಳ ಜಯ ಸಾಧಿಸಿ ಸರಣಿ ಕ್ಲೀನ್‌ಸ್ವೀಪ್ ಮಾಡಿತು.

ಪರ ವಿರೋಧದ ಚರ್ಚೆ

ಈ ಕೊನೆಯ ಮಂಕಡಿಂಗ್ ಮೂಲಕ ವಿಕೆಟ್ ಪತನಕ್ಕೆ ಇಂಗ್ಲೆಂಡ್‌ನ ಆಟಗಾರರು ಅಸಮ್ಮತಿ ಸೂಚಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಯಲ್ಲ ಎಂದಿದ್ದಾರೆ. ಆದರೆ ಅದು ಕ್ರಿಕೆಟ್ ನಿಯಮಗಳಲ್ಲಿದೆ ಮತ್ತು ನಿಯಮಬದ್ದವಾಗಿದೆ ಎಂದು ಭಾರತದ ನಾಯಕಿ ಹರ್ಮನ್‌ ಪ್ರೀತ್‌ ಕೌರ್ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನಿಯಮಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ಅಭಿಮಾನಿಗಳ ಟೀಕೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...