Homeಸಿನಿಮಾಕ್ರೀಡೆಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

- Advertisement -
- Advertisement -

ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡವು 16 ರನ್‌ಗಳ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಆ ಮೂಲಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿಯವರಿಗೆ ಅರ್ಥಪೂರ್ಣ ವಿದಾಯ ಹೇಳಲಾಯ್ತು. ಈ ಐತಿಹಾಸಿಕ ಸಾಧನೆಗೆ ಕಾರಣವಾದ ಪಂದ್ಯವು ಹಲವು ಹೊಸತನಗಳಿಗೆ ಸಾಕ್ಷಿಯಾಯಿತು.

ವಿವಾದಕ್ಕೆ ಕಾರಣವಾದ ಕೊನೆಯ ವಿಕೆಟ್

ಭಾರತ ಮಹಿಳೆಯರ ತಂಡವು ಮೊದಲು ಬ್ಯಾಟ್ ಮಾಡಿ 45.5 ಓವರ್‌ಗಳಲ್ಲಿ 169 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಸಾಧಾರಣ ರನ್ ಗುರಿ ಪಡೆದ ಇಂಗ್ಲೆಂಡ್ ಮಹಿಳಾ ತಂಡವು ಭಾರತದ ಬೌಲಿಂಗ್ ದಾಳಿಗೆ ಬೆದರಿತು. ಒಂದು ಹಂತದಲ್ಲಿ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಚಾರ್ಲೋಟ್ ಡೀನ್‌ರವರ ತಾಳ್ಮೆಯ ಆಟದಿಂದ ಗೆಲುವಿನ ಸನಿಹಕ್ಕೆ ಬಂದಿತ್ತು. 80 ಎಸೆತಗಳಲ್ಲಿ 47 ರನ್ ಗಳಿಸಿದ್ದ ಡೀನ್ ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿದ್ದಾಗ ಅನಗತ್ಯ ರನ್ ಔಟ್ ಆಗುವ ಮೂಲಕ ಕೊನೆಯ ವಿಕೆಟ್ ಒಪ್ಪಿಸಿ ಸೋಲೊಪ್ಪಿಕೊಂಡರು.

ಆದರೆ ಅವರ ರನ್ ಔಟ್ ಅಥವಾ ಮಕಂಡಿಂಗ್ ಎಂದು ಕರೆಯುವ ಔಟ್‌ ಕುರಿತು ವಿವಾದವೆದ್ದಿದೆ. ಕೆಲವರು ಅದನ್ನು ಕಾನೂನುಬದ್ಧ ಔಟ್ ಎಂದರೆ ಮತ್ತೆ ಕೆಲವರು ಇದು ನಿಜವಾದ ಕ್ರೀಡಾ ಸ್ಪೂರ್ತಿಯಲ್ಲ ಎಂದು ಕರೆದಿದ್ದಾರೆ.

ನಡೆದುದ್ದೇನು

ಇಂಗ್ಲೆಂಡ್ ತಂಡ 153 ರನ್ ಗಳಿಸಿ 9 ವಿಕೆಟ್ ಕಳೆದುಕೊಂಡಿತ್ತು. ಕ್ರೀಸ್‌ನಲ್ಲಿದ್ದ ಚಾರ್ಲೋಟ್ ಡೀನ್‌ ಮತ್ತು ಪ್ರೆಯಾ ಡೆವಿಸ್ 35 ರನ್‌ಗಳ ಜೊತೆಯಾಟದೊಂದಿಗೆ ಉತ್ತಮ ಆಟ ಆಡುತ್ತಿದ್ದರು. ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿತ್ತು. ಭಾರತದ ದೀಪ್ತಿ ಶರ್ಮಾ ಬೌಲಿಂಗ್ ಮಾಡುತ್ತಿದ್ದಾಗ ನಾಲ್ಕನೆ ಎಸೆತ ಎಸೆಯುವ ಮುನ್ನವೇ ನಾನ್‌ ಸ್ಟ್ರೈಕರ್‌ ಎಂಡ್‌ನಲ್ಲಿದ್ದ ಚಾರ್ಲೋಟ್ ಡೀನ್‌ ರನ್ ಗಾಗಿ ಕ್ರೀಸ್ ಬಿಟ್ಟು ಓಡಿದ್ದರು. ಆದರೆ ದೀಪ್ತಿ ಶರ್ಮಾ ಬೌಲ್ ಮಾಡುವ ಬದಲು ನಾನ್‌ ಸ್ಟ್ರೈಕರ್‌ ಎಂಡ್‌ನ ಬೆಲ್ಸ್ ಎಗರಿಸಿದರು. ಅಂಪೈರ್ ಡೆಡ್ ಬಾಲ್ ಸೂಚನೆ ಕೊಟ್ಟಿದ್ದರು. ಆದರೆ ಸಮಾಲೋಚಿಸಿ ಮೂರನೇ ಅಂಪೈರ್ ಮೋರೆ ಹೋದಾಗ ಅವರು ಔಟ್ ಎಂದು ಸೂಚಿಸಿದರು. ಇಂಗ್ಲೆಂಡ್ ತಂಡ ಆಲೌಟ್ ಆಯ್ತು. ಭಾರತ 16 ರನ್‌ಗಳ ಜಯ ಸಾಧಿಸಿ ಸರಣಿ ಕ್ಲೀನ್‌ಸ್ವೀಪ್ ಮಾಡಿತು.

ಪರ ವಿರೋಧದ ಚರ್ಚೆ

ಈ ಕೊನೆಯ ಮಂಕಡಿಂಗ್ ಮೂಲಕ ವಿಕೆಟ್ ಪತನಕ್ಕೆ ಇಂಗ್ಲೆಂಡ್‌ನ ಆಟಗಾರರು ಅಸಮ್ಮತಿ ಸೂಚಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಯಲ್ಲ ಎಂದಿದ್ದಾರೆ. ಆದರೆ ಅದು ಕ್ರಿಕೆಟ್ ನಿಯಮಗಳಲ್ಲಿದೆ ಮತ್ತು ನಿಯಮಬದ್ದವಾಗಿದೆ ಎಂದು ಭಾರತದ ನಾಯಕಿ ಹರ್ಮನ್‌ ಪ್ರೀತ್‌ ಕೌರ್ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನಿಯಮಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ಅಭಿಮಾನಿಗಳ ಟೀಕೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....