Homeಸಿನಿಮಾಕ್ರೀಡೆಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

- Advertisement -
- Advertisement -

ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡವು 16 ರನ್‌ಗಳ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಆ ಮೂಲಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿಯವರಿಗೆ ಅರ್ಥಪೂರ್ಣ ವಿದಾಯ ಹೇಳಲಾಯ್ತು. ಈ ಐತಿಹಾಸಿಕ ಸಾಧನೆಗೆ ಕಾರಣವಾದ ಪಂದ್ಯವು ಹಲವು ಹೊಸತನಗಳಿಗೆ ಸಾಕ್ಷಿಯಾಯಿತು.

ವಿವಾದಕ್ಕೆ ಕಾರಣವಾದ ಕೊನೆಯ ವಿಕೆಟ್

ಭಾರತ ಮಹಿಳೆಯರ ತಂಡವು ಮೊದಲು ಬ್ಯಾಟ್ ಮಾಡಿ 45.5 ಓವರ್‌ಗಳಲ್ಲಿ 169 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಸಾಧಾರಣ ರನ್ ಗುರಿ ಪಡೆದ ಇಂಗ್ಲೆಂಡ್ ಮಹಿಳಾ ತಂಡವು ಭಾರತದ ಬೌಲಿಂಗ್ ದಾಳಿಗೆ ಬೆದರಿತು. ಒಂದು ಹಂತದಲ್ಲಿ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಚಾರ್ಲೋಟ್ ಡೀನ್‌ರವರ ತಾಳ್ಮೆಯ ಆಟದಿಂದ ಗೆಲುವಿನ ಸನಿಹಕ್ಕೆ ಬಂದಿತ್ತು. 80 ಎಸೆತಗಳಲ್ಲಿ 47 ರನ್ ಗಳಿಸಿದ್ದ ಡೀನ್ ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿದ್ದಾಗ ಅನಗತ್ಯ ರನ್ ಔಟ್ ಆಗುವ ಮೂಲಕ ಕೊನೆಯ ವಿಕೆಟ್ ಒಪ್ಪಿಸಿ ಸೋಲೊಪ್ಪಿಕೊಂಡರು.

ಆದರೆ ಅವರ ರನ್ ಔಟ್ ಅಥವಾ ಮಕಂಡಿಂಗ್ ಎಂದು ಕರೆಯುವ ಔಟ್‌ ಕುರಿತು ವಿವಾದವೆದ್ದಿದೆ. ಕೆಲವರು ಅದನ್ನು ಕಾನೂನುಬದ್ಧ ಔಟ್ ಎಂದರೆ ಮತ್ತೆ ಕೆಲವರು ಇದು ನಿಜವಾದ ಕ್ರೀಡಾ ಸ್ಪೂರ್ತಿಯಲ್ಲ ಎಂದು ಕರೆದಿದ್ದಾರೆ.

ನಡೆದುದ್ದೇನು

ಇಂಗ್ಲೆಂಡ್ ತಂಡ 153 ರನ್ ಗಳಿಸಿ 9 ವಿಕೆಟ್ ಕಳೆದುಕೊಂಡಿತ್ತು. ಕ್ರೀಸ್‌ನಲ್ಲಿದ್ದ ಚಾರ್ಲೋಟ್ ಡೀನ್‌ ಮತ್ತು ಪ್ರೆಯಾ ಡೆವಿಸ್ 35 ರನ್‌ಗಳ ಜೊತೆಯಾಟದೊಂದಿಗೆ ಉತ್ತಮ ಆಟ ಆಡುತ್ತಿದ್ದರು. ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿತ್ತು. ಭಾರತದ ದೀಪ್ತಿ ಶರ್ಮಾ ಬೌಲಿಂಗ್ ಮಾಡುತ್ತಿದ್ದಾಗ ನಾಲ್ಕನೆ ಎಸೆತ ಎಸೆಯುವ ಮುನ್ನವೇ ನಾನ್‌ ಸ್ಟ್ರೈಕರ್‌ ಎಂಡ್‌ನಲ್ಲಿದ್ದ ಚಾರ್ಲೋಟ್ ಡೀನ್‌ ರನ್ ಗಾಗಿ ಕ್ರೀಸ್ ಬಿಟ್ಟು ಓಡಿದ್ದರು. ಆದರೆ ದೀಪ್ತಿ ಶರ್ಮಾ ಬೌಲ್ ಮಾಡುವ ಬದಲು ನಾನ್‌ ಸ್ಟ್ರೈಕರ್‌ ಎಂಡ್‌ನ ಬೆಲ್ಸ್ ಎಗರಿಸಿದರು. ಅಂಪೈರ್ ಡೆಡ್ ಬಾಲ್ ಸೂಚನೆ ಕೊಟ್ಟಿದ್ದರು. ಆದರೆ ಸಮಾಲೋಚಿಸಿ ಮೂರನೇ ಅಂಪೈರ್ ಮೋರೆ ಹೋದಾಗ ಅವರು ಔಟ್ ಎಂದು ಸೂಚಿಸಿದರು. ಇಂಗ್ಲೆಂಡ್ ತಂಡ ಆಲೌಟ್ ಆಯ್ತು. ಭಾರತ 16 ರನ್‌ಗಳ ಜಯ ಸಾಧಿಸಿ ಸರಣಿ ಕ್ಲೀನ್‌ಸ್ವೀಪ್ ಮಾಡಿತು.

ಪರ ವಿರೋಧದ ಚರ್ಚೆ

ಈ ಕೊನೆಯ ಮಂಕಡಿಂಗ್ ಮೂಲಕ ವಿಕೆಟ್ ಪತನಕ್ಕೆ ಇಂಗ್ಲೆಂಡ್‌ನ ಆಟಗಾರರು ಅಸಮ್ಮತಿ ಸೂಚಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಯಲ್ಲ ಎಂದಿದ್ದಾರೆ. ಆದರೆ ಅದು ಕ್ರಿಕೆಟ್ ನಿಯಮಗಳಲ್ಲಿದೆ ಮತ್ತು ನಿಯಮಬದ್ದವಾಗಿದೆ ಎಂದು ಭಾರತದ ನಾಯಕಿ ಹರ್ಮನ್‌ ಪ್ರೀತ್‌ ಕೌರ್ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನಿಯಮಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ಅಭಿಮಾನಿಗಳ ಟೀಕೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...