Homeಸಿನಿಮಾಕ್ರೀಡೆಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

- Advertisement -
- Advertisement -

ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡವು 16 ರನ್‌ಗಳ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಆ ಮೂಲಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿಯವರಿಗೆ ಅರ್ಥಪೂರ್ಣ ವಿದಾಯ ಹೇಳಲಾಯ್ತು. ಈ ಐತಿಹಾಸಿಕ ಸಾಧನೆಗೆ ಕಾರಣವಾದ ಪಂದ್ಯವು ಹಲವು ಹೊಸತನಗಳಿಗೆ ಸಾಕ್ಷಿಯಾಯಿತು.

ವಿವಾದಕ್ಕೆ ಕಾರಣವಾದ ಕೊನೆಯ ವಿಕೆಟ್

ಭಾರತ ಮಹಿಳೆಯರ ತಂಡವು ಮೊದಲು ಬ್ಯಾಟ್ ಮಾಡಿ 45.5 ಓವರ್‌ಗಳಲ್ಲಿ 169 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಸಾಧಾರಣ ರನ್ ಗುರಿ ಪಡೆದ ಇಂಗ್ಲೆಂಡ್ ಮಹಿಳಾ ತಂಡವು ಭಾರತದ ಬೌಲಿಂಗ್ ದಾಳಿಗೆ ಬೆದರಿತು. ಒಂದು ಹಂತದಲ್ಲಿ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಚಾರ್ಲೋಟ್ ಡೀನ್‌ರವರ ತಾಳ್ಮೆಯ ಆಟದಿಂದ ಗೆಲುವಿನ ಸನಿಹಕ್ಕೆ ಬಂದಿತ್ತು. 80 ಎಸೆತಗಳಲ್ಲಿ 47 ರನ್ ಗಳಿಸಿದ್ದ ಡೀನ್ ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿದ್ದಾಗ ಅನಗತ್ಯ ರನ್ ಔಟ್ ಆಗುವ ಮೂಲಕ ಕೊನೆಯ ವಿಕೆಟ್ ಒಪ್ಪಿಸಿ ಸೋಲೊಪ್ಪಿಕೊಂಡರು.

ಆದರೆ ಅವರ ರನ್ ಔಟ್ ಅಥವಾ ಮಕಂಡಿಂಗ್ ಎಂದು ಕರೆಯುವ ಔಟ್‌ ಕುರಿತು ವಿವಾದವೆದ್ದಿದೆ. ಕೆಲವರು ಅದನ್ನು ಕಾನೂನುಬದ್ಧ ಔಟ್ ಎಂದರೆ ಮತ್ತೆ ಕೆಲವರು ಇದು ನಿಜವಾದ ಕ್ರೀಡಾ ಸ್ಪೂರ್ತಿಯಲ್ಲ ಎಂದು ಕರೆದಿದ್ದಾರೆ.

ನಡೆದುದ್ದೇನು

ಇಂಗ್ಲೆಂಡ್ ತಂಡ 153 ರನ್ ಗಳಿಸಿ 9 ವಿಕೆಟ್ ಕಳೆದುಕೊಂಡಿತ್ತು. ಕ್ರೀಸ್‌ನಲ್ಲಿದ್ದ ಚಾರ್ಲೋಟ್ ಡೀನ್‌ ಮತ್ತು ಪ್ರೆಯಾ ಡೆವಿಸ್ 35 ರನ್‌ಗಳ ಜೊತೆಯಾಟದೊಂದಿಗೆ ಉತ್ತಮ ಆಟ ಆಡುತ್ತಿದ್ದರು. ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿತ್ತು. ಭಾರತದ ದೀಪ್ತಿ ಶರ್ಮಾ ಬೌಲಿಂಗ್ ಮಾಡುತ್ತಿದ್ದಾಗ ನಾಲ್ಕನೆ ಎಸೆತ ಎಸೆಯುವ ಮುನ್ನವೇ ನಾನ್‌ ಸ್ಟ್ರೈಕರ್‌ ಎಂಡ್‌ನಲ್ಲಿದ್ದ ಚಾರ್ಲೋಟ್ ಡೀನ್‌ ರನ್ ಗಾಗಿ ಕ್ರೀಸ್ ಬಿಟ್ಟು ಓಡಿದ್ದರು. ಆದರೆ ದೀಪ್ತಿ ಶರ್ಮಾ ಬೌಲ್ ಮಾಡುವ ಬದಲು ನಾನ್‌ ಸ್ಟ್ರೈಕರ್‌ ಎಂಡ್‌ನ ಬೆಲ್ಸ್ ಎಗರಿಸಿದರು. ಅಂಪೈರ್ ಡೆಡ್ ಬಾಲ್ ಸೂಚನೆ ಕೊಟ್ಟಿದ್ದರು. ಆದರೆ ಸಮಾಲೋಚಿಸಿ ಮೂರನೇ ಅಂಪೈರ್ ಮೋರೆ ಹೋದಾಗ ಅವರು ಔಟ್ ಎಂದು ಸೂಚಿಸಿದರು. ಇಂಗ್ಲೆಂಡ್ ತಂಡ ಆಲೌಟ್ ಆಯ್ತು. ಭಾರತ 16 ರನ್‌ಗಳ ಜಯ ಸಾಧಿಸಿ ಸರಣಿ ಕ್ಲೀನ್‌ಸ್ವೀಪ್ ಮಾಡಿತು.

ಪರ ವಿರೋಧದ ಚರ್ಚೆ

ಈ ಕೊನೆಯ ಮಂಕಡಿಂಗ್ ಮೂಲಕ ವಿಕೆಟ್ ಪತನಕ್ಕೆ ಇಂಗ್ಲೆಂಡ್‌ನ ಆಟಗಾರರು ಅಸಮ್ಮತಿ ಸೂಚಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಯಲ್ಲ ಎಂದಿದ್ದಾರೆ. ಆದರೆ ಅದು ಕ್ರಿಕೆಟ್ ನಿಯಮಗಳಲ್ಲಿದೆ ಮತ್ತು ನಿಯಮಬದ್ದವಾಗಿದೆ ಎಂದು ಭಾರತದ ನಾಯಕಿ ಹರ್ಮನ್‌ ಪ್ರೀತ್‌ ಕೌರ್ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನಿಯಮಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ಅಭಿಮಾನಿಗಳ ಟೀಕೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....