Homeಕರ್ನಾಟಕಲೋಕಸಭೆ ಚುನಾವಣೆ: ರಾಜ್ಯದಲ್ಲಿ ‘ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ' ರಚನೆ

ಲೋಕಸಭೆ ಚುನಾವಣೆ: ರಾಜ್ಯದಲ್ಲಿ ‘ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ’ ರಚನೆ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ರಾಜ್ಯದಲ್ಲಿ ‘ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ’ಯನ್ನು ರಚಿಸಿದೆ. ಕೆಪಿಸಿಸಿಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯ ಸಂಚಾಲಕರಾಗಿ ಕೆಪಿಸಿಸಿಯ ಮಾದ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬುರನ್ನು ನೇಮಿಸಲಾಗಿದೆ, ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್, ಸಿಪಿಎಂ ಕಾರ್ಯದರ್ಶಿ ಬಸವರಾಜು, ಆಮ್ ಆದ್ಮಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ, ಸಮಾಜವಾದಿ ಪಕ್ಷದ ಅಧ್ಯಕ್ಷ ಮಂಜಪ್ಪ ಯಾದವ್, ಡಿಎಂಕೆ ಕಾರ್ಯದರ್ಶಿ ರಾಮಸ್ವಾಮಿ ನಟೇಶನ್, ಎನ್‍ಸಿಪಿ (ಶರದ್ ಪವಾರ್) ಅಧ್ಯಕ್ಷ ಸಿ.ಎಸ್. ಇನಾಮ್ಹಾರ್, ಸಿಪಿಐ(ಎಂಎಲ್)ನ ಕಾರ್ಯದರ್ಶಿ ಕ್ಲಿಪ್ಪನ್ ಡಿ.ರೊಜೆರಿಯೋ, ಫಾರ್‍ವರ್ಡ್‍ಬ್ಲಾಕ್‍ನ ಕಾರ್ಯದರ್ಶಿ ಶಿವಶಂಕರ್ ಜಿ.ಆರ್, ಐಯುಎಂಎಲ್‍ನ ಅಧ್ಯಕ್ಷ ಜಾವಿದುಲ್ಲಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಹಿಂದೆ ಹೇಳಿದ್ದರು.

ತುಮಕೂರಿನಲ್ಲಿ 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಿದ್ದವು, ಸಿಪಿಐ ಪಕ್ಷವು 17,000 ಮತಗಳನ್ನು ಗಳಿಸಿತ್ತು ಮತ್ತು ದೇವೇಗೌಡರು ಕೇವಲ 12,000 ಮತದಾನದ ಅಂತರದಿಂದ ಚುನಾವಣೆಯಲ್ಲಿ ಸೋತರು. 2024ರ ಚುನಾವಣೆಯಲ್ಲಿ ಅಂತಹ ಪರಿಸ್ಥಿತಿ ನಮಗೆ ಬೇಕಾಗಿಲ್ಲ. ಆದ್ದರಿಂದ, ನಾವು ಎಲ್ಲಾ ಮೈತ್ರಿ ಪಕ್ಷಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡಲು, ನಾವು ಈ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದರು.

‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್‌ಗೆ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಅನುಕೂಲವಾಗಲಿದೆ. ರಾಜಕಾರಣದಲ್ಲಿ 49 ಎಂದರೆ ಸೊನ್ನೆ, 51 ಎಂದರೆ ನೂರು ಎಂದರ್ಥ. ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಧ್ರುವನಾರಾಯಣ್ 1 ಮತದಿಂದ ಗೆದ್ದಿದ್ದರು. ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಲ್ಲೇ ಗೆದ್ದರು. ಸೌಮ್ಯಾ ರೆಡ್ಡಿ 16 ಮತಗಳಿಂದ ಸೋತರು, ಹೀಗಾಗಿ ಒಂದೊಂದು ಮತವೂ ಮುಖ್ಯ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಾಗಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಕಾಂಗ್ರೆಸ್‌ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಪಕ್ಷಗಳ ಬೆಂಬಲವನ್ನು ಕೂಡ ಪಡೆಯಲು ಮುಂದಾಗಿದೆ. ಮತ ವಿಭಜನೆಯನ್ನು ತಡೆಗಟ್ಟಲು ಮಹತ್ವದ ತಂತ್ರವನ್ನು ರೂಪಿಸುತ್ತಿದೆ.

ಇದನ್ನು ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...