Homeಕ್ರೀಡೆಒಲಂಪಿಕ್ಭಾರತದ ಕೀರ್ತಿಪತಾಕೆ ಹಾರಿಸಿದ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು; ಇನ್ನಷ್ಟು ನೆರವಿನ ಅಗತ್ಯವಿದೆ

ಭಾರತದ ಕೀರ್ತಿಪತಾಕೆ ಹಾರಿಸಿದ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು; ಇನ್ನಷ್ಟು ನೆರವಿನ ಅಗತ್ಯವಿದೆ

- Advertisement -
- Advertisement -

ಟೋಕಿಯೊ ಪ್ಯಾರಾಲಿಂಪಿಕ್ಸ್-2020ರಲ್ಲಿ ಭಾರತ ಅಭೂತಪೂರ್ವ ಸಾಧನೆ ಮಾಡಿದೆ. 1968ರಿಂದ ಇದುವೆರೆಗೂ ಒಟ್ಟು 12 ಪದಕಗಳನ್ನಷ್ಟೆ ಭಾರತ ಗೆದ್ದುಕೊಂಡಿತ್ತು, ಆದರೆ ಈ ಬಾರಿಯ ಕ್ರೀಡಾಕೂಟದಲ್ಲಿಯೇ ಭಾರತ ಒಟ್ಟು 19 ಪದಕಗಳನ್ನು ಗೆದ್ದುಕೊಂಡಿದೆ. ಹಾಗಾಗಿ ಟೊಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ 162 ರಾಷ್ಟ್ರಗಳ ಪೈಕಿ ಭಾರತ 24ನೇ ರ್‍ಯಾಂಕ್‌ಅನ್ನು ಅಲಂಕರಿಸಿದೆ. ಈ ಬಾರಿ ಭಾರತ ತಂಡಕ್ಕೆ ಒಟ್ಟು ಐದು ಚಿನ್ನದ ಪದಕ, ಎಂಟು ಬೆಳ್ಳಿ ಪದಕ ಮತ್ತು ಆರು ಕಂಚಿನ ಪದಕ ಸಿಕ್ಕಿದೆ. ಈ ಮೂಲಕ ತಂಡವು ಇತಿಹಾಸ ನಿರ್ಮಿಸಿದೆ.

ನಿರಾಶ್ರಿತರ ಪ್ಯಾರಾಲಿಂಪಿಕ್ಸ್ ತಂಡ ಮತ್ತು ರಶ್ಯಾ ಪ್ಯಾರಾಲಿಂಪಿಕ್ಸ್ ಸಮಿತಿ ಸೇರಿಸಿದಂತೆ ಒಟ್ಟು 162 ದೇಶಗಳ 4,537 ಕ್ರೀಡಾಳುಗಳು ಈ ಬಾರಿ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಈವರೆಗೂ ಭಾಗವಹಿಸಿದ ಅತೀ ಹೆಚ್ಚಿನ ಕ್ರೀಡಾಳುಗಳ ಸಂಖ್ಯೆಯಾಗಿದೆ. ಈ ಕ್ರೀಡಾಕೂಟದಲ್ಲಿ ಒಟ್ಟು 22 ರೀತಿಯ ಕ್ರೀಡೆಗಳನ್ನು ವಿವಿಧ ವಿಭಾಗಗಳಲ್ಲಿ ಆಯೋಜಿಸಲಾಗಿತ್ತು.

ಪ್ಯಾರಾಲಿಂಪಿಕ್ಸ್ ಕೂಟದ ಬಗ್ಗೆ

’ಪ್ಯಾರಾಲಿಂಪಿಕ್’ ಎಂಬ ಪದವು ಗ್ರೀಕ್‌ನ ’ಪ್ಯಾರಾ’ ಮತ್ತು ’ಒಲಿಂಪಿಕ್’ ಪದದಿಂದ ಬಂದಿದೆ. ಪ್ಯಾರಾ ಎಂದರೆ ’ಸಮಾನಾಂತರ’ ಎಂಬ ಅರ್ಥ ಬರುತ್ತದೆ. ಒಟ್ಟಿನಲ್ಲಿ ಪ್ಯಾರಾಲಿಂಪಿಕ್ ಎಂದರೆ ಒಲಿಂಪಿಕ್‌ಗೆ ಸಮಾನವಾದದ್ದು ಎಂದರ್ಥ. ವಿಶ್ವದ ಮಾನವೀಯತೆಯ ಬೆಳವಣಿಗೆಯಲ್ಲಿ ಪ್ಯಾರಾಲಿಂಪಿಕ್ಸ್ ಮಹತ್ವದ ಪಾತ್ರ ವಹಿಸುತ್ತದೆ. ವಿಕಲಚೇತನ ವ್ಯಕ್ತಿಗಳು ಕೂಡಾ ಸಾಮರ್ಥ್ಯವಿರುವವರಾಗಿದ್ದು, ಅವರು ಕೂಡಾ ಸಾಧನೆ ಮಾಡಬಲ್ಲರು ಎಂಬುವುದನ್ನು ಈ ಕ್ರೀಡಾಕೂಟ ಎತ್ತಿ ತೋರಿಸುತ್ತದೆ. ದೇಹದಲ್ಲಿನ ಅಂಗಗಳು ಊನವಾಗಿದ್ದರೆ ಅದು ಮನುಷ್ಯ ಏರುವ ಎತ್ತರವನ್ನು ತಡೆಯುವುದಿಲ್ಲ ಎಂಬ ಸ್ಪೂರ್ತಿಯನ್ನು ಪ್ಯಾರಾಲಿಂಪಿಕ್ಸ್ ನೀಡುತ್ತದೆ.

ಡಾ. ಲುಡ್ವಿಕ್ ಗಟ್ಮನ್

ಒಲಿಂಪಿಕ್‌ಗೆ ಪುರಾತನ ಗ್ರೀಸ್ ನಾಗರಿಕತೆಯಷ್ಟು ಇತಿಹಾಸವಿದೆ. ಇದಕ್ಕೆ ಹೋಲಿಸಿದರೆ ಪ್ಯಾರಾಲಿಂಪಿಕ್ಸ್ ತೀರಾ ಇತ್ತೀಚೆಗೆ ಪ್ರಾರಂಭವಾಗಿದ್ದು. 1948ರಲ್ಲಿ ಜರ್ಮನಿಯ ನರವಿಜ್ಞಾನಿಯಾದ ಡಾ. ಲುಡ್ವಿಕ್ ಗಟ್ಮನ್ ತನ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸೈನಿಕರ ಮೂಲಕ ಈ ಕ್ರೀಡೆಯನ್ನು ಪ್ರಾರಂಭಿಸಿದರು. ’ಸ್ಟೋಕ್ ಮ್ಯಾಂಡೆವಿಲ್ಲೆ ಗೇಮ್ಸ್’ ಎಂಬ ಹೆಸರಿನಲ್ಲಿ ಪ್ರಾರಂಭವಾದ ಪ್ಯಾರಾಲಿಂಪಿಕ್ಸ್‌ನ ಮೊದಲ ಕ್ರೀಡಾ ಕೂಟದಲ್ಲಿ 14 ಪುರುಷರು ಮತ್ತು ಇಬ್ಬರು ಮಹಿಳೆಯರು ಗಾಲಿ ಕುರ್ಚಿಯಲ್ಲಿ ಕೂತು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೇವಲ ಬಿಲ್ಲುಗಾರಿಕೆಯನ್ನು ಮಾತ್ರವೆ ಆಯೋಜಿಸಲಾಗಿತ್ತು. 1952ರಲ್ಲಿ ಡಚ್ ಸೈನಿಕರು ’ಸ್ಟೋಕ್ ಮ್ಯಾಂಡೆವಿಲ್ಲೆ ಗೇಮ್ಸ್’ಗೆ ಪಾದಾರ್ಪಣೆ ಮಾಡುವುದರೊಂದಿಗೆ ಅದು ಅಂತರಾಷ್ಟ್ರೀಯ ಗೇಮ್ಸ್ ಆಗಿ ಹೊರಹೊಮ್ಮಿತು. ಈ ಕ್ರೀಡಾ ಕೂಟವನ್ನು ಡಾ. ಲುಡ್ವಿಕ್ ಗಟ್ಮನ್ ಅವರು ಪ್ರತಿ ವರ್ಷ ಆಯೋಜಿಸುತ್ತಿದ್ದರು.

1960 ಇಟಲಿಯ ರೋಮ್‌ನಲ್ಲಿ ವಿಶ್ವದ 23 ದೇಶಗಳ 400 ಕ್ರೀಡಾಳುಗಳು ಭಾಗವಹಿಸುವುದರೊಂದಿಗೆ ಕ್ರೀಡಾಕೂಟವು ಮತ್ತಷ್ಟು ಪ್ರಸಿದ್ದಿ ಪಡೆಯಿತು. ಅಂದಿನಿಂದ ಕ್ರೀಡಾಕೂಟವನ್ನು ಒಲಿಂಪಿಕ್ಸ್ ರೀತಿಯಲ್ಲಿಯೇ ನಾಲ್ಕು ವರ್ಷಗಳಿಗೊಮ್ಮೆ ನಡೆಸುವ ತೀರ್ಮಾನ ಮಾಡಲಾಯಿತು. ಇದರ ನಂತರ 1976ರಲ್ಲಿ ಒಲಿಂಪಿಕ್ಸ್ ಮಾದರಿಯಲ್ಲಿ ಚಳಿಗಾಲದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ಕೂಡ ಪ್ರಾರಂಭವಾಯಿತು. ಅದುವರೆಗೂ ಗಾಲಿ ಕುರ್ಚಿಯಲ್ಲಿರುವ ಕ್ರೀಡಾಳುಗಳಿಗೆ ಮಾತ್ರ ಅವಕಾಶ ಇದ್ದ ಕ್ರೀಡಾಕೂಟವು, ಬೇರೆ ರೀತಿಯ ವಿಕಲಚೇತನರನ್ನೂ ಅದು ಒಳಗೊಂಡಿತು.

1988ರ ನಂತರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಗಳು ಒಂದೇ ದೇಶದಲ್ಲಿ ಆಯೋಜನೆಗೊಳ್ಳಲು ಪ್ರಾರಂಭವಾಯಿತು. ಜೊತೆಗೆ ಕ್ರೀಡಾಕೂಟಕ್ಕೆ ’ಪ್ಯಾರಾಲಿಂಪಿಕ್ಸ್’ ಎಂಬ ಹೆಸರನ್ನು ಅಧಿಕೃತಗೊಳಿಸಲಾಯಿತು.

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ

ಭಾರತವು 1968ರಿಂದ ಈವರೆಗೆ ಒಟ್ಟು ಹನ್ನೆರೆಡು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದೆ. ಆದರೆ ಈ ವರ್ಷದ ಕ್ರೀಡಾಕೂಟದಲ್ಲಿ ಅಭೂತಪೂರ್ವ ಸಾಧನೆ ಮೆರೆದು ಒಟ್ಟು 19 ಪದಕವನ್ನು ಪಡೆದುಕೊಂಡಿದೆ. ಇಲ್ಲಿಯವರೆಗೆ ದೇಶದ ಪಾಲಿಗೆ ಕೇವಲ 12 ಪ್ಯಾರಾಲಿಂಪಿಕ್ಸ್ ಪದಕಗಳಿದ್ದವು. ಅಷ್ಟೆ ಅಲ್ಲದೆ ಈ ವರ್ಷದ ಕ್ರೀಡಾಕೂಟದಲ್ಲಿ ದೇಶದಿಂದ ಒಟ್ಟು 54 ಜನ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದು ಇದುವೆರೆಗೂ ಪ್ಯಾರಾಲಿಂಪಿಕ್ಸ್‌ಗೆ ತೆರಳಿದ ಭಾರತದ ಅತೀ ದೊಡ್ಡ ತಂಡವಾಗಿದೆ.

ಚಳಿಗಾಲದ ಪ್ಯಾರಾಲಿಂಪಿಕ್ಸ್ 1976ರಿಂದ ಪ್ರಾರಂಭವಾದರೂ ಭಾರತ ಇದುವರೆಗೂ ಯಾವುದೇ ಚಳಿಗಾಲದ ಕ್ರೀಡಾಕೂಟದಲ್ಲಿ ಭಾಗವಹಿಸಿಲ್ಲ. ಮುರಳಿಕಾಂತ್ ಪೆಟ್ಕರ್ ಈಜು ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ 1972ರ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತನ್ನ ಮೊದಲ ಪದಕವನ್ನು ಗೆದ್ದುಕೊಂಡಿತು.

ಮುರಳಿಕಾಂತ್ ಪೆಟ್ಕರ್

1984ರಲ್ಲಿ ಜೋಗಿಂದರ್ ಸಿಂಗ್ ಬೇಡಿ ಪುರುಷರ ಶಾಟ್ ಪುಟ್‌ನಲ್ಲಿ ಬೆಳ್ಳಿ, ಡಿಸ್ಕಸ್ ಮತ್ತು ಜಾವೆಲಿನ್ ಥ್ರೋಗಳಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡು ಪ್ಯಾರಾಲಿಂಪಿಕ್ಸ್‌ನಲ್ಲಿ ಬಹುಪದಕ ಪಡೆದ ಭಾರತದ ಕ್ರೀಡಾಪಟುವಾಗಿ ದಾಖಲೆ ಬರೆದಿದ್ದಾರೆ.

ವಿಶೇಷವಾಗಿ ಈ ವರ್ಷದ ಪದಕ ವಿಜೇತರಲ್ಲಿ ಕನ್ನಡಿಗ, ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾ ಜಿಲ್ಲಾ ಮ್ಯಾಜಿಸ್ಟ್ರೆಟ್ ಆಗಿರುವ, ಸುಹಾಸ್ ಲಾಳನಕೆರೆ ಯತಿರಾಜ್ ಅವರು ಇರುವುದು ನಾಡಿಗೆ ಹೆಮ್ಮೆಯ ವಿಷಯವಾಗಿದೆ. ಹಾಸನ ಮೂಲದ ಸುಹಾಸ್ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ, ದೇಶದ ಮೊದಲ ನಾಗರಿಕ ಸೇವೆಯಲ್ಲಿರುವ ಅಧಿಕಾರಿಯಾಗಿದ್ದು, ಅವರು ’ಪುರುಷರ ಸಿಂಗಲ್ಸ್ ಎಸ್‌ಎಲ್4’ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬೆಳ್ಳಿ ಗೆದ್ದಿದ್ದಾರೆ.

ಈ ಬಗ್ಗೆ ಸುಹಾಸ್ ಅವರ ತಾಯಿ ಜಯಶ್ರೀ ಅವರು ನ್ಯಾಯಪಥದೊಂದಿಗೆ ಮಾತನಾಡಿದ್ದಾರೆ. ತಮ್ಮ ಮಗನ ಬಗ್ಗೆ ಹೆಮ್ಮೆ ಪಟ್ಟ ಅವರು, “ಸುಹಾಸ್ ಛಲವಾದಿಯಾಗಿದ್ದಾನೆ, ಸಾಧನೆ ಮಾಡಬೇಕು ಎಂದು ತುಂಬಾ ಕಷ್ಟಪಟ್ಟಿದ್ದಾನೆ. ಅದಕ್ಕೆ ಈಗ ಫಲ ಸಿಕ್ಕಿದೆ. ಈ ಸಾಧನೆ ಬಗ್ಗೆ ತುಂಬಾ ಖುಷಿಯಾಗುತ್ತಿದೆ, ಇಡೀ ದೇಶ ಮೆಚ್ಚುವಂತಹ ಕೆಲಸವನ್ನು ನನ್ನ ಮಗ ಮಾಡಿದ್ದಾನೆ” ಎಂದು ಹೇಳಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಳುಗಳ ಕಷ್ಟಗಳೇನು?

ಮೊದಲೆ ಹೇಳಿದಂತೆ ಪ್ಯಾರಾಲಿಂಪಿಕ್ಸ್ ಅಂದರೆ ಒಲಿಂಪಿಕ್‌ಗೆ ಸಮಾನವಾದುದು ಎಂದರ್ಥ. ಆದರೆ ವಾಸ್ತವದಲ್ಲಿ ಭಾರಿ ಸುದ್ದಿಯಲ್ಲಿರುವ ಒಲಿಂಪಿಕ್ಸ್‌ನಷ್ಟು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ಸುದ್ದಿ ಆಗಲೇ ಇಲ್ಲ. ಹಾಗೆ ನೋಡಿದರೆ ಪ್ಯಾರಾಲಿಂಪಿಕ್ಸ್‌ಗೆ ಒಲಿಂಪಿಕ್ಸ್‌ಗೆ ಹಾಕುವ ಶ್ರಮದ ಹಲವು ಪಟ್ಟು ಶ್ರಮವನ್ನು ಕ್ರೀಡಾಳುಗಳು ಹಾಕಬೇಕಾಗುತ್ತದೆ. ಮೊದಲೆ ಅಂಗ ಸಮಸ್ಯೆಯಿರುವ ಕ್ರೀಡಾಪಟುಗಳು ಅದನ್ನು ಮೆಟ್ಟಿ ನಿಲ್ಲಬೇಕು ಮತ್ತು ಪದಕ ಗೆಲ್ಲಲು ಹೆಚ್ಚಿನ ಶ್ರಮವೂ ಬೇಕಾಗುತ್ತದೆ.

ಹೋರಾಟಗಾರ ಜಿಎನ್ ನಾಗರಾಜ್ ಹೇಳುವಂತೆ, “ಸರ್ಕಾರವು ಒಲಿಂಪಿಕ್ಸ್‌ನ ಕ್ರೀಡಾಳುಗಳಿಗೆ ನೀಡುವ ಪ್ರೋತ್ಸಾಹವನ್ನು ಪ್ಯಾರಾಲಿಂಪಿಕ್ಸ್‌ನ ಕ್ರೀಡಾಳುಗಳಿಗೆ ನೀಡುವುದಿಲ್ಲ. ಸ್ಪರ್ಧಿಗಳು ಅಂತಾರಾಷ್ಟ್ರೀಯ ಹಂತಕ್ಕೆ ತಲುಪುವವರೆಗೂ ಅವರ ಎಲ್ಲಾ ಖರ್ಚುಗಳನ್ನು ಸ್ವತಃ ಅವರೇ ನೋಡಿಬೇಕಾಗುತ್ತದೆ. ಅಷ್ಟೇ ಅಲ್ಲದೆ ಒಲಿಂಪಿಕ್ಸ್‌ನ ಕ್ರೀಡಾಳುಗಳಿಗಿಂತಲೂ ಹೆಚ್ಚಿನ ಖರ್ಚು ಪ್ಯಾರಾಲಿಂಪಿಕ್ಸ್ ಕ್ರೀಡಾಳುಗಳಿಗೆ ಬೇಕಾಗುತ್ತದೆ. ಅವರ ಪ್ರತೀ ಕೆಲಸಗಳಿಗೂ ಒಬ್ಬ ಸಹಾಯಕ ಬೇಕಾಗುತ್ತದೆ. ಆದರೆ ಸರ್ಕಾರ ಒಲಿಂಪಿಕ್ಸ್‌ಗೆ ಮಾತ್ರ ಹೆಚ್ಚಿನ ದುಡ್ಡು
ಸುರಿಸುತ್ತದೆಯೆ ಹೊರತು ಪ್ಯಾರಾಲಿಂಪಿಕ್ಸ್‌ಗೆ ಅಲ್ಲ. ಕಾರ್ಪೊರೆಟ್‌ಗಳು ಕೂಡಾ ಒಲಿಂಪಿಕ್ಸ್ ಕ್ರೀಡಾಳುಗಳ ಹಿಂದೆ ಇರುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ತಮ್ಮ ಅಂಗವೈಕಲ್ಯಗಳನ್ನು ಮೆಟ್ಟಿ ವ್ಯಕ್ತಿಗಳು ಹೊರಬರುವುದೇ ಅಪರೂಪವಾಗಿರುವಾಗ, ಅದನ್ನು ಮೀರಿ ಅವರು ಪ್ಯಾರಾಲಿಂಪಿಕ್ಸ್‌ವರೆಗೂ ತಲುಪುವುದು, ಅಲ್ಲಿ ಪದಕ ಪಡೆಯುವುದಕ್ಕಿಂತ ಮೂರು ಪಟ್ಟು ದೊಡ್ಡ ಸಾಧನೆ” ಎಂದು ಅವರು ಹೇಳುತ್ತಾರೆ.

ಒಬ್ಬ ಸಾಮಾನ್ಯ ಕ್ರೀಡಾಳು ಫಿಟ್ ಇರಲು ಸಾಮಾನ್ಯವಾದ ವ್ಯಾಯಾಮದ ಸಲಕರಣೆಗಳು ಸಾಕಾಗುತ್ತದೆ. ಆದರೆ ಪ್ಯಾರಾಲಿಂಪಿಕ್ಸ್ ಕ್ರೀಡಾಳುಗಳಿಗೆ ವಿಶೇಷವಾದ ಸಲಕರಣೆಗಳು, ವಿಶೇಷ ಆರೈಕೆಗಳು ಬೇಕಾಗುತ್ತವೆ.

PC : Kannada News (ಸುಹಾಸ್ ಲಾಳನಕೆರೆ ಯತಿರಾಜ್)

“ಸಾಮಾನ್ಯವಾಗಿ, ಒಲಿಂಪಿಕ್ಸ್‌ನಲ್ಲಿ ಪದಕ ಪಡೆದವರಿಗೆ ಸರ್ಕಾರಿ ಉದ್ಯೋಗ ಸ್ಪೋರ್ಟ್ ಕೋಟಾದಡಿಯಲ್ಲಿ ಸುಲಭವಾಗಿ ಸಿಗುತ್ತದೆ. ಆದರೆ ಈ ಸೌಲಭ್ಯ ಪ್ಯಾರಾಲಿಂಪಿಕ್ಸ್‌ನ ವಿಜೇತರಿಗೆ ಸಿಗುವುದಿಲ್ಲ. ಅಲ್ಲದೆ ಸರ್ಕಾರಿ ಉದ್ಯೋಗಿಯೊಬ್ಬ ಒಲಿಂಪಿಕ್ಸ್‌ನಲ್ಲಿ ಪದಕೆ ಗೆದ್ದರೆ, ಐದು ಇಂಕ್ರಿಮಂಟ್ ಸಿಗುತ್ತದೆ. ಆದರೆ ಈ ಸೌಲಭ್ಯ ಪ್ಯಾರಾಲಿಂಪಿಕ್ಸ್‌ನವರಿಗೆ 2018ವರೆಗೂ ಸಿಗುತ್ತಿರಲಿಲ್ಲ” ಎನ್ನುತ್ತಾರೆ ಜಿಎನ್ ನಾಗರಾಜ್. “ಸಾಧನೆ ಮಾಡಿದ ನಂತರ ಫೋನ್ ಮಾಡಿ ಅವರಿಗೆ ಅಭಿನಂದನೆ ಹೇಳುವ ಪ್ರದರ್ಶನಕ್ಕಿಂತ, ಈ ಕ್ರೀಡಾಪಟುಗಳು ಸಾಧನೆಯ ಹಾದಿಯಲ್ಲಿ ನಡೆಯುತ್ತಾ ಇರಬೇಕಾದರೆ ಅವರಿಗೆ ಬಲನೀಡಬೇಕು” ಎನ್ನತ್ತಾರವರು.

“ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಸಾಮಾನ್ಯ ಆಟಗಾರರಿಗೆ ನೀಡುವ ಹಾಗೆಯೆ ಪ್ಯಾರಾಲಿಂಪಿಕ್ಸ್ ಆಟಗಾರರಿಗೆ ಒಂದಿಷ್ಟು ಪಾಲನ್ನು ತೆಗೆದಿಡುತ್ತದೆ. ಆದರೆ ಇದು ಬದಲಾಗಬೇಕು, ಪ್ಯಾರಾಲಿಂಪಿಕ್ಸ್ ಆಟಗಾರರಿಗೆ ಬೇರೆಯದೇ ಆದ ಅನುದಾನವನ್ನು ಬಿಡುಗಡೆ ಮಾಡಿ, ಅವರ ಸಾಧನೆಗೆ ನೆರವಾಗಬೇಕು” ಎಂದು ಅವರು ಹೇಳುತ್ತಾರೆ.

“ಅಷ್ಟೇ ಅಲ್ಲದೆ ಒಲಿಂಪಿಕ್ಸ್ ಆಟಗಾರ ಟ್ರೇನಿಂಗ್‌ಗೆ ವಿಶ್ವ ಮಟ್ಟದ ತರಬೇತಿಯನ್ನು, ಕೋಚ್‌ಗಳನ್ನೂ ನೀಡಲಾಗುತ್ತದೆ. ಆದರೆ ಪ್ಯಾರಾಲಿಂಪಿಕ್ಸ್‌ಗೆ ಈ ರೀತಿಯ ಯಾವುದೆ ಪ್ರೋತ್ಸಾಹ ಇಲ್ಲ” ಎನ್ನುತ್ತಾರೆ ನಾಗರಾಜ್ ಅವರು.

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟು, ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಡಲಿದ್ದಾರೆ ಎಂದಾಗಷ್ಟೇ ಅವರಿಗೆ ಸರ್ಕಾರ ಸಹಾಯ ಮಾಡುತ್ತದೆ. ಅಲ್ಲಿವರೆಗೂ ಪ್ಯಾರಾಲಿಂಪಿಕ್ಸ್ ಸಾಧಕರು ಹೋರಾಡಬೇಕಾಗುತ್ತದೆ. ಆದರೆ ಈ ಎಲ್ಲಾ ಅಡೆತಡೆಗಳನ್ನು ಮೀರಿ ಈ ವರ್ಷದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಬೃಹತ್ ಸಾಧನೆ ಮಾಡಿ ದೇಶದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸಿದ್ದಾರೆ.


ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್‌: ಶೂಟರ್‌ ಮನೀಶ್‌ಗೆ ಚಿನ್ನ, ಸಿಂಗ್‌ ರಾಜ್‌ಗೆ ಬೆಳ್ಳಿ ಪದಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...