Homeಸಿನಿಮಾಕ್ರೀಡೆಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್...

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್ ಮಿರ್

- Advertisement -
- Advertisement -

ಕ್ರಿಕೆಟ್‌ ಅನ್ನೇ ಧರ್ಮ ಎಂಬಂತೆ ಭಾವಿಸಿರುವ ಭಾರತದಲ್ಲಿ ಕ್ರಿಕೆಟ್‌ ಹೊರತಾದ ಕ್ರೀಡೆಗಳಿಗೆ ಪ್ರಾತಿನಿಧ್ಯತೆ ಅಷ್ಟಕಷ್ಟೇ. ಇನ್ನೂ ಬೇರೆ ಕ್ರೀಡೆಗಳ ಸಾಧಕರನ್ನು ಗುರುತಿಸುವುದು ಸಹ ಅಪರೂಪವೇ. ಇಂತಹ ಸಂದಿಗ್ಧತೆಯ ನಡುವೆಯೇ ಯುವ ಶಟ್ಲರ್‌ ತಸ್ನಿಮ್ ಮೀರ್‌ ಇದೀಗ ಬಿಡಬ್ಲ್ಯುಎಫ್ ಜೂನಿಯರ್ ರ್ಯಾಂಕಿಂಗ್ನಲ್ಲಿ 19 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್‌ ವಿಭಾಗದಲ್ಲಿ ವಿಶ್ವದ ನಂಬರ್​ 1 ಸ್ಥಾನವನ್ನು ಪಡೆದಿದ್ದಾರೆ. ಅಲ್ಲದೆ, ಈ ಸಾಧನೆ ಮಾಡಿದ ಭಾರತದ ಮೊದಲ U-19 ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿರುವುದು ವಿಶೇಷ.

ಗುಜರಾತ್​​​ ಮೂಲದ ತಸ್ನಿಮ್ ಮಿರ್ (16) 2017 ರಲ್ಲಿ ಹೈದರಾಬಾದ್​ನ ಪುಲ್ಲೇಲಾ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿಯನ್ನು ಪ್ರಾರಂಭಿಸಿದರು. 2020 ರಲ್ಲಿ ಮಿಶ್ರ ಡಬಲ್ಸ್ ತರಬೇತಿಗಾಗಿ ಗುವಾಹಟಿಯಲ್ಲಿರುವ ಅಸ್ಸೋಂ ಬ್ಯಾಡ್ಮಿಂಟನ್ ಅಕಾಡೆಮಿ ಸೇರಿಕೊಂಡಿದ್ದು, ಪ್ರಸ್ತುತ ಇಲ್ಲಿಯೇ ತರಬೇತಿ ಮುಂದುವರೆಸಿದ್ದಾರೆ.

ತಸ್ನಿಮ್ ಮಿರ್ ತಮ್ಮ ಅದ್ಭುತ ಆಟದ ಪ್ರದರ್ಶನದಿಂದಾಗಿ ಮೂರು ಜೂನಿಯರ್ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಜೂನಿಯರ್ ವಿಶ್ವ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಗಳಿಸಿದ್ದಾರೆ. ತಸ್ನಿಮ್​ಗೂ ಮುನ್ನ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿ ವಿ ಸಿಂಧು ತಮ್ಮ ಅಂಡರ್-19 ದಿನಗಳಲ್ಲಿ ವಿಶ್ವದ ನಂ 2 ಸ್ಥಾನವನ್ನು ಪಡೆದುಕೊಂಡಿದ್ದರು.

ಈ ಬಗ್ಗೆ ತನ್ನ ಸಂತೋಷವನ್ನು ಹಂಚಿಕೊಂಡಿರುವ ತಸ್ನಿಂ ಮೀರ್‌, “ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್  ಅವರು ನನಗೆ ಸದಾ ಸ್ಪೂರ್ತಿ. ಶಟಲ್ ಆಟದಲ್ಲಿ ಅವರನ್ನು ಅನುಸರಿಸಲು ನಾನು ಬಯಸುತ್ತೇನೆ. ಮುಂದಿನ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿದಿಸಿ ಪದಕ ಗೆಲ್ಲುವುದು ನನ್ನ ಗುರಿ. ನನ್ನ ಪೋಷಕರು ನನ್ನ ಆಸಕ್ತಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹಾಗಾಗಿ ಆ ತ್ಯಾಗಕ್ಕೆ ಹೆಚ್ಚು ಬೆಲೆ ಬರುವಂತೆ ಮಾಡುವ ಆಸೆ ಇದೆ” ಎಂದು ತಿಳಿಸಿದ್ದಾರೆ.

ತಸ್ನಿಮ್ ಅವರು ಆರು ವರ್ಷ ಇದ್ದಾಗಿನಿಂದ ಬ್ಯಾಡ್ಮಿಂಟನ್‌ ನಲ್ಲಿ ಆಸಕ್ತಿವಹಿಸಿ ಆಡಲು ಪ್ರಾರಂಭಿಸಿದರಂತೆ, ಆಗ ಕೆಲವರು ಈಗಲೆ ಆಟ ಆಡುವುದು ಬೇಡ ಎಂದಿದ್ದರು. ಆದರೆ ಛಲ ಬಿಡದ ತಸ್ನಿಮ್ ಆಟ ಮುಂದುವರೆಸಿ ಇದುವರೆಗೂ ವಿವಿಧ ವಿಭಾಗಗಳಲ್ಲಿ  ಒಟ್ಟು 22 ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈಗ ಹಿರಿಯರ ವಿಭಾಗದಲ್ಲಿ ಚಾಂಪಿಯನ್ ಆಗುವ, ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದಾಳೆ ಎನ್ನುತ್ತಾ ಮಗಳು ತಸ್ನಿಮ್ ಬಗ್ಗೆ ವಿಶ್ವಾಸದ ಮಾತುಗಳನ್ನಾಡುತ್ತಾರೆ ತಂದೆ ಇರ್ಫಾನ್.


ಇದನ್ನೂ ಓದಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...