Homeಸಿನಿಮಾಕ್ರೀಡೆಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್...

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್ ಮಿರ್

- Advertisement -
- Advertisement -

ಕ್ರಿಕೆಟ್‌ ಅನ್ನೇ ಧರ್ಮ ಎಂಬಂತೆ ಭಾವಿಸಿರುವ ಭಾರತದಲ್ಲಿ ಕ್ರಿಕೆಟ್‌ ಹೊರತಾದ ಕ್ರೀಡೆಗಳಿಗೆ ಪ್ರಾತಿನಿಧ್ಯತೆ ಅಷ್ಟಕಷ್ಟೇ. ಇನ್ನೂ ಬೇರೆ ಕ್ರೀಡೆಗಳ ಸಾಧಕರನ್ನು ಗುರುತಿಸುವುದು ಸಹ ಅಪರೂಪವೇ. ಇಂತಹ ಸಂದಿಗ್ಧತೆಯ ನಡುವೆಯೇ ಯುವ ಶಟ್ಲರ್‌ ತಸ್ನಿಮ್ ಮೀರ್‌ ಇದೀಗ ಬಿಡಬ್ಲ್ಯುಎಫ್ ಜೂನಿಯರ್ ರ್ಯಾಂಕಿಂಗ್ನಲ್ಲಿ 19 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್‌ ವಿಭಾಗದಲ್ಲಿ ವಿಶ್ವದ ನಂಬರ್​ 1 ಸ್ಥಾನವನ್ನು ಪಡೆದಿದ್ದಾರೆ. ಅಲ್ಲದೆ, ಈ ಸಾಧನೆ ಮಾಡಿದ ಭಾರತದ ಮೊದಲ U-19 ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿರುವುದು ವಿಶೇಷ.

ಗುಜರಾತ್​​​ ಮೂಲದ ತಸ್ನಿಮ್ ಮಿರ್ (16) 2017 ರಲ್ಲಿ ಹೈದರಾಬಾದ್​ನ ಪುಲ್ಲೇಲಾ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿಯನ್ನು ಪ್ರಾರಂಭಿಸಿದರು. 2020 ರಲ್ಲಿ ಮಿಶ್ರ ಡಬಲ್ಸ್ ತರಬೇತಿಗಾಗಿ ಗುವಾಹಟಿಯಲ್ಲಿರುವ ಅಸ್ಸೋಂ ಬ್ಯಾಡ್ಮಿಂಟನ್ ಅಕಾಡೆಮಿ ಸೇರಿಕೊಂಡಿದ್ದು, ಪ್ರಸ್ತುತ ಇಲ್ಲಿಯೇ ತರಬೇತಿ ಮುಂದುವರೆಸಿದ್ದಾರೆ.

ತಸ್ನಿಮ್ ಮಿರ್ ತಮ್ಮ ಅದ್ಭುತ ಆಟದ ಪ್ರದರ್ಶನದಿಂದಾಗಿ ಮೂರು ಜೂನಿಯರ್ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಜೂನಿಯರ್ ವಿಶ್ವ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಗಳಿಸಿದ್ದಾರೆ. ತಸ್ನಿಮ್​ಗೂ ಮುನ್ನ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿ ವಿ ಸಿಂಧು ತಮ್ಮ ಅಂಡರ್-19 ದಿನಗಳಲ್ಲಿ ವಿಶ್ವದ ನಂ 2 ಸ್ಥಾನವನ್ನು ಪಡೆದುಕೊಂಡಿದ್ದರು.

ಈ ಬಗ್ಗೆ ತನ್ನ ಸಂತೋಷವನ್ನು ಹಂಚಿಕೊಂಡಿರುವ ತಸ್ನಿಂ ಮೀರ್‌, “ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್  ಅವರು ನನಗೆ ಸದಾ ಸ್ಪೂರ್ತಿ. ಶಟಲ್ ಆಟದಲ್ಲಿ ಅವರನ್ನು ಅನುಸರಿಸಲು ನಾನು ಬಯಸುತ್ತೇನೆ. ಮುಂದಿನ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿದಿಸಿ ಪದಕ ಗೆಲ್ಲುವುದು ನನ್ನ ಗುರಿ. ನನ್ನ ಪೋಷಕರು ನನ್ನ ಆಸಕ್ತಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹಾಗಾಗಿ ಆ ತ್ಯಾಗಕ್ಕೆ ಹೆಚ್ಚು ಬೆಲೆ ಬರುವಂತೆ ಮಾಡುವ ಆಸೆ ಇದೆ” ಎಂದು ತಿಳಿಸಿದ್ದಾರೆ.

ತಸ್ನಿಮ್ ಅವರು ಆರು ವರ್ಷ ಇದ್ದಾಗಿನಿಂದ ಬ್ಯಾಡ್ಮಿಂಟನ್‌ ನಲ್ಲಿ ಆಸಕ್ತಿವಹಿಸಿ ಆಡಲು ಪ್ರಾರಂಭಿಸಿದರಂತೆ, ಆಗ ಕೆಲವರು ಈಗಲೆ ಆಟ ಆಡುವುದು ಬೇಡ ಎಂದಿದ್ದರು. ಆದರೆ ಛಲ ಬಿಡದ ತಸ್ನಿಮ್ ಆಟ ಮುಂದುವರೆಸಿ ಇದುವರೆಗೂ ವಿವಿಧ ವಿಭಾಗಗಳಲ್ಲಿ  ಒಟ್ಟು 22 ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈಗ ಹಿರಿಯರ ವಿಭಾಗದಲ್ಲಿ ಚಾಂಪಿಯನ್ ಆಗುವ, ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದಾಳೆ ಎನ್ನುತ್ತಾ ಮಗಳು ತಸ್ನಿಮ್ ಬಗ್ಗೆ ವಿಶ್ವಾಸದ ಮಾತುಗಳನ್ನಾಡುತ್ತಾರೆ ತಂದೆ ಇರ್ಫಾನ್.


ಇದನ್ನೂ ಓದಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...