Homeಸಿನಿಮಾಕ್ರೀಡೆಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್...

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್ ಮಿರ್

- Advertisement -
- Advertisement -

ಕ್ರಿಕೆಟ್‌ ಅನ್ನೇ ಧರ್ಮ ಎಂಬಂತೆ ಭಾವಿಸಿರುವ ಭಾರತದಲ್ಲಿ ಕ್ರಿಕೆಟ್‌ ಹೊರತಾದ ಕ್ರೀಡೆಗಳಿಗೆ ಪ್ರಾತಿನಿಧ್ಯತೆ ಅಷ್ಟಕಷ್ಟೇ. ಇನ್ನೂ ಬೇರೆ ಕ್ರೀಡೆಗಳ ಸಾಧಕರನ್ನು ಗುರುತಿಸುವುದು ಸಹ ಅಪರೂಪವೇ. ಇಂತಹ ಸಂದಿಗ್ಧತೆಯ ನಡುವೆಯೇ ಯುವ ಶಟ್ಲರ್‌ ತಸ್ನಿಮ್ ಮೀರ್‌ ಇದೀಗ ಬಿಡಬ್ಲ್ಯುಎಫ್ ಜೂನಿಯರ್ ರ್ಯಾಂಕಿಂಗ್ನಲ್ಲಿ 19 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್‌ ವಿಭಾಗದಲ್ಲಿ ವಿಶ್ವದ ನಂಬರ್​ 1 ಸ್ಥಾನವನ್ನು ಪಡೆದಿದ್ದಾರೆ. ಅಲ್ಲದೆ, ಈ ಸಾಧನೆ ಮಾಡಿದ ಭಾರತದ ಮೊದಲ U-19 ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿರುವುದು ವಿಶೇಷ.

ಗುಜರಾತ್​​​ ಮೂಲದ ತಸ್ನಿಮ್ ಮಿರ್ (16) 2017 ರಲ್ಲಿ ಹೈದರಾಬಾದ್​ನ ಪುಲ್ಲೇಲಾ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿಯನ್ನು ಪ್ರಾರಂಭಿಸಿದರು. 2020 ರಲ್ಲಿ ಮಿಶ್ರ ಡಬಲ್ಸ್ ತರಬೇತಿಗಾಗಿ ಗುವಾಹಟಿಯಲ್ಲಿರುವ ಅಸ್ಸೋಂ ಬ್ಯಾಡ್ಮಿಂಟನ್ ಅಕಾಡೆಮಿ ಸೇರಿಕೊಂಡಿದ್ದು, ಪ್ರಸ್ತುತ ಇಲ್ಲಿಯೇ ತರಬೇತಿ ಮುಂದುವರೆಸಿದ್ದಾರೆ.

ತಸ್ನಿಮ್ ಮಿರ್ ತಮ್ಮ ಅದ್ಭುತ ಆಟದ ಪ್ರದರ್ಶನದಿಂದಾಗಿ ಮೂರು ಜೂನಿಯರ್ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಜೂನಿಯರ್ ವಿಶ್ವ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಗಳಿಸಿದ್ದಾರೆ. ತಸ್ನಿಮ್​ಗೂ ಮುನ್ನ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿ ವಿ ಸಿಂಧು ತಮ್ಮ ಅಂಡರ್-19 ದಿನಗಳಲ್ಲಿ ವಿಶ್ವದ ನಂ 2 ಸ್ಥಾನವನ್ನು ಪಡೆದುಕೊಂಡಿದ್ದರು.

ಈ ಬಗ್ಗೆ ತನ್ನ ಸಂತೋಷವನ್ನು ಹಂಚಿಕೊಂಡಿರುವ ತಸ್ನಿಂ ಮೀರ್‌, “ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್  ಅವರು ನನಗೆ ಸದಾ ಸ್ಪೂರ್ತಿ. ಶಟಲ್ ಆಟದಲ್ಲಿ ಅವರನ್ನು ಅನುಸರಿಸಲು ನಾನು ಬಯಸುತ್ತೇನೆ. ಮುಂದಿನ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿದಿಸಿ ಪದಕ ಗೆಲ್ಲುವುದು ನನ್ನ ಗುರಿ. ನನ್ನ ಪೋಷಕರು ನನ್ನ ಆಸಕ್ತಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹಾಗಾಗಿ ಆ ತ್ಯಾಗಕ್ಕೆ ಹೆಚ್ಚು ಬೆಲೆ ಬರುವಂತೆ ಮಾಡುವ ಆಸೆ ಇದೆ” ಎಂದು ತಿಳಿಸಿದ್ದಾರೆ.

ತಸ್ನಿಮ್ ಅವರು ಆರು ವರ್ಷ ಇದ್ದಾಗಿನಿಂದ ಬ್ಯಾಡ್ಮಿಂಟನ್‌ ನಲ್ಲಿ ಆಸಕ್ತಿವಹಿಸಿ ಆಡಲು ಪ್ರಾರಂಭಿಸಿದರಂತೆ, ಆಗ ಕೆಲವರು ಈಗಲೆ ಆಟ ಆಡುವುದು ಬೇಡ ಎಂದಿದ್ದರು. ಆದರೆ ಛಲ ಬಿಡದ ತಸ್ನಿಮ್ ಆಟ ಮುಂದುವರೆಸಿ ಇದುವರೆಗೂ ವಿವಿಧ ವಿಭಾಗಗಳಲ್ಲಿ  ಒಟ್ಟು 22 ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈಗ ಹಿರಿಯರ ವಿಭಾಗದಲ್ಲಿ ಚಾಂಪಿಯನ್ ಆಗುವ, ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದಾಳೆ ಎನ್ನುತ್ತಾ ಮಗಳು ತಸ್ನಿಮ್ ಬಗ್ಗೆ ವಿಶ್ವಾಸದ ಮಾತುಗಳನ್ನಾಡುತ್ತಾರೆ ತಂದೆ ಇರ್ಫಾನ್.


ಇದನ್ನೂ ಓದಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...