Homeಮುಖಪುಟಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

ಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರ ಸಂಭ್ರಮಾಚರಣೆ ಜೋರಾಗಿತ್ತು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಸಮಾರಂಭದಲ್ಲಿ ನಿರೂಪಣೆ ಮಾಡಿದ ದೀಪಿಕಾ ಪಡುಕೋಣೆ ಅವರು,  RRR ಚಿತ್ರದ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿಯನ್ನು ಗೆದ್ದಿದೆ ಎಂದು ಅನೌನ್ಸ್‌ ಮಾಡುವಾಗ ಹಾಡಿನ ಬಗ್ಗೆ ಪರಿಚಯಿಸಿದರು. ಆಸ್ಕರ್‌ನಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವರ್ಗಕ್ಕೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಮೂಲ ಗೀತೆಯಾಗಿದೆ. ಈ ಕ್ಷಣವನ್ನು ನಾವು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದರು. ಈ ಐತಿಹಾಸಿಕ ಕ್ಷಣದಲ್ಲಿ ದೀಪಿಕಾ ಪಡುಕೋಣೆ ಅವರು ಭಾವುಕರಾದರು. ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು.

ಈ ವೇಳೆ ವೇದಿಕೆ ಮೇಲೆ ನಾಟು ನಾಟು ಹಾಡು ಹಾಡುತ್ತ ನೃತ್ಯ ಮಾಡಿ ಸಂಭ್ರಮಿಸಿದರು. ಒಂದೆಡೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿಯ ನಿರೂಪಣೆ ಮತ್ತೊಂದೆಡೆ ಎರಡು ಆಸ್ಕರ್ ಪ್ರಶಸ್ತಿಗಳು ಭಾರತಕ್ಕೆ ಬಂದಿವೆ. ಇದು ಇಡೀ ಭಾರತೀಯರ ಸಂಭ್ರಮಕ್ಕೆ ಕಾರಣವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...