Homeಮುಖಪುಟ'ಆಲ್ ಐಸ್ ಆನ್ ರಫಾ': ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

- Advertisement -
- Advertisement -

ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್ ಸಲ್ಮಾನ್, ಸಮಂತಾ ರುತ್ ಪ್ರಭು, ಟೊವಿನೋ ಥಾಮಸ್, ಕೀರ್ತಿ ಸುರೇಶ್, ಮಾಧುರಿ ದೀಕ್ಷಿತ್, ವರುಣ್ ಧವನ್, ವಿಜಯ್ ವರ್ಮಾ ಮತ್ತು ಇತರ ಹಲವು ಸೆಲೆಬ್ರಿಟಿಗಳು ರಫಾ ಮೇಲಿನ ಇಸ್ರೇಲ್‌ ಬಾಂಬ್ ದಾಳಿಯನ್ನು ಖಂಡಿಸಿ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

‘ಆಲ್ ಐಸ್ ಆನ್ ರಫಾ’ ಎಂಬ AI- ರಚಿತವಾದ ಚಿತ್ರದ ಪೋಸ್ಟ್‌ನ್ನು ಇನ್ಸ್ಟಾಗ್ರಾಂವೊಂದರಲ್ಲೇ  33 ದಶಲಕ್ಷಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ. ಚಿತ್ರವು ರಫಾದಲ್ಲಿನ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ, ಅಲ್ಲಿನ ನಿರಾಶ್ರಿತ ಜನರನ್ನು ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಮತ್ತು ಮಿಲಿಟರಿ ಪಡೆಗಳು ಸುತ್ತುವರಿದಿರುವುದನ್ನು ಪ್ರತಿಬಿಂಬಿಸುತ್ತದೆ.

‘ಆಲ್ ಐಸ್ ಆನ್ ರಾಫಾ’ ಎಂಬ ಪದವು ಫೆಬ್ರವರಿ 2024ರಲ್ಲಿ ಆಕ್ರಮಿತ ಪ್ಯಾಲೇಸ್ತೀನ್‌ ಪ್ರಾಂತ್ಯಗಳ WHOನ ಕಚೇರಿಯ ನಿರ್ದೇಶಕ ಡಾ ರಿಕ್ ಪೀಪರ್‌ಕಾರ್ನ್ ಮೊದಲು ಬಳಕೆ ಮಾಡಿದ್ದಾರೆ. ‘ರಫಾದ ಮೇಲೆ ಎಲ್ಲರ ಕಣ್ಣುಗಳು’ ಎಂಬುವುದು ಗಾಝಾದ ರಫಾದಲ್ಲಿ ನಡೆಯುತ್ತಿರುವ ನರಮೇಧವನ್ನು ಉಲ್ಲೇಖಿಸುವ ಪದಗುಚ್ಛವಾಗಿದೆ. ಇಸ್ರೇಲ್‌ ರಫಾ ಮೇಲೆ ದಾಳಿ ನಡೆಸಿದರೆ ಅದು ಮಹಾ ದುರಂತ ಎಂದು ಡಾ. ಪೀಪರ್‌ಕಾರ್ನ್‌ ಹೇಳಿದ್ದಾರೆ. ರಾಫಾದಿಂದ WHOನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಪರ್‌ಕಾರ್ನ್ ‘ಎಲ್ಲಾ ಕಣ್ಣುಗಳು ರಫಾ ಮೇಲೆ ಇವೆ” ಎಂದು ಹೇಳಿದ್ದಾರೆ.

ಮೇ 26ರಂದು, ಇಸ್ರೇಲ್‌ ವಾಯುಪಡೆಗಳು ಇಸ್ರೇಲ್‌ನ ನಿರಾಶ್ರಿತರಿರುವ ಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 45 ಜನರ ಹತ್ಯೆ ನಡೆದಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA) ಪ್ರಕಾರ, ಜನರು ರಫಾಗೆ ಓಡಿಹೋಗುವಂತೆ ಇಸ್ರೇಲ್‌ ಮಾಡಿದೆ. ಬಾಂಬ್ ಸ್ಫೋಟಗಳು, ಆಹಾರ ಮತ್ತು ನೀರಿನ ಕೊರತೆ, ತ್ಯಾಜ್ಯದ ರಾಶಿಗಳು ಮತ್ತು ಸೂಕ್ತವಲ್ಲದ ಜೀವನ ಪರಿಸ್ಥಿತಿಗಳ ನಡುವೆ ಇದು ಸಂಭವಿಸಿದೆ. ಗಾಝಾವು “ಭೂಮಿಯ ಮೇಲಿನ ನರಕ”ವಾಗಿದೆ ಮತ್ತು “ಗಾಝಾ ಪಟ್ಟಿಯಲ್ಲಿ ಯಾವುದೇ ಸುರಕ್ಷಿತ ಸ್ಥಳವಿಲ್ಲ” ಎಂದು UNRWA ಹೇಳಿದೆ. ಯಾರೂ ಸುರಕ್ಷಿತವಾಗಿಲ್ಲ, ನಾಗರಿಕರು ಸುರಕ್ಷಿತವಾಗಿಲ್ಲ, ನೆರವು ಕಾರ್ಯಕರ್ತರು ಸುರಕ್ಷಿತವಾಗಿಲ್ಲ, ನಮಗೆ ಕದನ ವಿರಾಮ ಬೇಕು ಎಂದು ಹೇಳಿದೆ.

ಈ ಮಧ್ಯೆ ರಫಾ ಮೇಲಿನ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ದುರಂತ’ ಎಂದು ಕರೆದಿದ್ದಾರೆ. ಮುಗ್ಧ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವ ನಮ್ಮ ಪ್ರಯತ್ನಗಳ ಹೊರತಾಗಿಯೂ, ನಿನ್ನೆ ರಾತ್ರಿ ಒಂದು ತಪ್ಪುಗಿ ದುರಂತ ಸಂಭವಿಸಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಇಸ್ರೇಲ್ ರಾಫಾ ಮೇಲೆ ದಾಳಿ ನಡೆಸುತ್ತಿದೆ. ರಾಫಾ ಮೇಲಿನ ದಾಳಿಯನ್ನು ಹಮಾಸ್‌ನ್ನು ಸೋಲಿಸುವ ತನ್ನ ಕಾರ್ಯತಂತ್ರದ ಭಾಗ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಮೇ 24 ರಂದು, ರಫಾದಲ್ಲಿ ಇಸ್ರೇಲ್ ತನ್ನ ಆಕ್ರಮಣಕಾರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ICJ ಆದೇಶಿಸಿದೆ. ನ್ಯಾಯಾಲಯದ ಸೂಚನೆಯ ಹೊರತಾಗಿಯೂ, ಇಸ್ರೇಲ್ ರಫಾದಲ್ಲಿ ತನ್ನ ದಾಳಿಯನ್ನು ಮುಂದುವರೆಸಿದ್ದು, ಮೇ 25ರಿಂದ 60ಕ್ಕೂ ಹೆಚ್ಚು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ.

ರಫಾದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ 900 ಕೆಜಿ ತೂಕದ 7 ಬಾಂಬ್‌ಗಳನ್ನು ಹಾಕಿದೆ. ಇಸ್ರೇಲ್‌ ಸೈನ್ಯವು “ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ” ರಫಾವನ್ನು ಗುರಿಯಾಗಿಸಿಕೊಂಡಿದೆ. ದಾಳಿಯ ಮೊದಲು ಆ ಪ್ರದೇಶದಿಂದ ಸ್ಥಳಾಂತರವಾಗುವಂತೆ ಇಸ್ರೇಲ್‌ ಮಿಲಿಟರಿ ಪಡೆ ನಾಗರಿಕರಿಗೆ ಎಚ್ಚರಿಕೆ ನೀಡಿಲ್ಲ ಎಂದು ಗಾಝಾದ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...