Homeಮುಖಪುಟ'ಆಲ್ ಐಸ್ ಆನ್ ರಫಾ': ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

- Advertisement -
- Advertisement -

ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್ ಸಲ್ಮಾನ್, ಸಮಂತಾ ರುತ್ ಪ್ರಭು, ಟೊವಿನೋ ಥಾಮಸ್, ಕೀರ್ತಿ ಸುರೇಶ್, ಮಾಧುರಿ ದೀಕ್ಷಿತ್, ವರುಣ್ ಧವನ್, ವಿಜಯ್ ವರ್ಮಾ ಮತ್ತು ಇತರ ಹಲವು ಸೆಲೆಬ್ರಿಟಿಗಳು ರಫಾ ಮೇಲಿನ ಇಸ್ರೇಲ್‌ ಬಾಂಬ್ ದಾಳಿಯನ್ನು ಖಂಡಿಸಿ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

‘ಆಲ್ ಐಸ್ ಆನ್ ರಫಾ’ ಎಂಬ AI- ರಚಿತವಾದ ಚಿತ್ರದ ಪೋಸ್ಟ್‌ನ್ನು ಇನ್ಸ್ಟಾಗ್ರಾಂವೊಂದರಲ್ಲೇ  33 ದಶಲಕ್ಷಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ. ಚಿತ್ರವು ರಫಾದಲ್ಲಿನ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ, ಅಲ್ಲಿನ ನಿರಾಶ್ರಿತ ಜನರನ್ನು ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಮತ್ತು ಮಿಲಿಟರಿ ಪಡೆಗಳು ಸುತ್ತುವರಿದಿರುವುದನ್ನು ಪ್ರತಿಬಿಂಬಿಸುತ್ತದೆ.

‘ಆಲ್ ಐಸ್ ಆನ್ ರಾಫಾ’ ಎಂಬ ಪದವು ಫೆಬ್ರವರಿ 2024ರಲ್ಲಿ ಆಕ್ರಮಿತ ಪ್ಯಾಲೇಸ್ತೀನ್‌ ಪ್ರಾಂತ್ಯಗಳ WHOನ ಕಚೇರಿಯ ನಿರ್ದೇಶಕ ಡಾ ರಿಕ್ ಪೀಪರ್‌ಕಾರ್ನ್ ಮೊದಲು ಬಳಕೆ ಮಾಡಿದ್ದಾರೆ. ‘ರಫಾದ ಮೇಲೆ ಎಲ್ಲರ ಕಣ್ಣುಗಳು’ ಎಂಬುವುದು ಗಾಝಾದ ರಫಾದಲ್ಲಿ ನಡೆಯುತ್ತಿರುವ ನರಮೇಧವನ್ನು ಉಲ್ಲೇಖಿಸುವ ಪದಗುಚ್ಛವಾಗಿದೆ. ಇಸ್ರೇಲ್‌ ರಫಾ ಮೇಲೆ ದಾಳಿ ನಡೆಸಿದರೆ ಅದು ಮಹಾ ದುರಂತ ಎಂದು ಡಾ. ಪೀಪರ್‌ಕಾರ್ನ್‌ ಹೇಳಿದ್ದಾರೆ. ರಾಫಾದಿಂದ WHOನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಪರ್‌ಕಾರ್ನ್ ‘ಎಲ್ಲಾ ಕಣ್ಣುಗಳು ರಫಾ ಮೇಲೆ ಇವೆ” ಎಂದು ಹೇಳಿದ್ದಾರೆ.

ಮೇ 26ರಂದು, ಇಸ್ರೇಲ್‌ ವಾಯುಪಡೆಗಳು ಇಸ್ರೇಲ್‌ನ ನಿರಾಶ್ರಿತರಿರುವ ಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 45 ಜನರ ಹತ್ಯೆ ನಡೆದಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA) ಪ್ರಕಾರ, ಜನರು ರಫಾಗೆ ಓಡಿಹೋಗುವಂತೆ ಇಸ್ರೇಲ್‌ ಮಾಡಿದೆ. ಬಾಂಬ್ ಸ್ಫೋಟಗಳು, ಆಹಾರ ಮತ್ತು ನೀರಿನ ಕೊರತೆ, ತ್ಯಾಜ್ಯದ ರಾಶಿಗಳು ಮತ್ತು ಸೂಕ್ತವಲ್ಲದ ಜೀವನ ಪರಿಸ್ಥಿತಿಗಳ ನಡುವೆ ಇದು ಸಂಭವಿಸಿದೆ. ಗಾಝಾವು “ಭೂಮಿಯ ಮೇಲಿನ ನರಕ”ವಾಗಿದೆ ಮತ್ತು “ಗಾಝಾ ಪಟ್ಟಿಯಲ್ಲಿ ಯಾವುದೇ ಸುರಕ್ಷಿತ ಸ್ಥಳವಿಲ್ಲ” ಎಂದು UNRWA ಹೇಳಿದೆ. ಯಾರೂ ಸುರಕ್ಷಿತವಾಗಿಲ್ಲ, ನಾಗರಿಕರು ಸುರಕ್ಷಿತವಾಗಿಲ್ಲ, ನೆರವು ಕಾರ್ಯಕರ್ತರು ಸುರಕ್ಷಿತವಾಗಿಲ್ಲ, ನಮಗೆ ಕದನ ವಿರಾಮ ಬೇಕು ಎಂದು ಹೇಳಿದೆ.

ಈ ಮಧ್ಯೆ ರಫಾ ಮೇಲಿನ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ದುರಂತ’ ಎಂದು ಕರೆದಿದ್ದಾರೆ. ಮುಗ್ಧ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವ ನಮ್ಮ ಪ್ರಯತ್ನಗಳ ಹೊರತಾಗಿಯೂ, ನಿನ್ನೆ ರಾತ್ರಿ ಒಂದು ತಪ್ಪುಗಿ ದುರಂತ ಸಂಭವಿಸಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಇಸ್ರೇಲ್ ರಾಫಾ ಮೇಲೆ ದಾಳಿ ನಡೆಸುತ್ತಿದೆ. ರಾಫಾ ಮೇಲಿನ ದಾಳಿಯನ್ನು ಹಮಾಸ್‌ನ್ನು ಸೋಲಿಸುವ ತನ್ನ ಕಾರ್ಯತಂತ್ರದ ಭಾಗ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಮೇ 24 ರಂದು, ರಫಾದಲ್ಲಿ ಇಸ್ರೇಲ್ ತನ್ನ ಆಕ್ರಮಣಕಾರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ICJ ಆದೇಶಿಸಿದೆ. ನ್ಯಾಯಾಲಯದ ಸೂಚನೆಯ ಹೊರತಾಗಿಯೂ, ಇಸ್ರೇಲ್ ರಫಾದಲ್ಲಿ ತನ್ನ ದಾಳಿಯನ್ನು ಮುಂದುವರೆಸಿದ್ದು, ಮೇ 25ರಿಂದ 60ಕ್ಕೂ ಹೆಚ್ಚು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ.

ರಫಾದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ 900 ಕೆಜಿ ತೂಕದ 7 ಬಾಂಬ್‌ಗಳನ್ನು ಹಾಕಿದೆ. ಇಸ್ರೇಲ್‌ ಸೈನ್ಯವು “ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ” ರಫಾವನ್ನು ಗುರಿಯಾಗಿಸಿಕೊಂಡಿದೆ. ದಾಳಿಯ ಮೊದಲು ಆ ಪ್ರದೇಶದಿಂದ ಸ್ಥಳಾಂತರವಾಗುವಂತೆ ಇಸ್ರೇಲ್‌ ಮಿಲಿಟರಿ ಪಡೆ ನಾಗರಿಕರಿಗೆ ಎಚ್ಚರಿಕೆ ನೀಡಿಲ್ಲ ಎಂದು ಗಾಝಾದ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...