Homeಮುಖಪುಟ'ಆಲ್ ಐಸ್ ಆನ್ ರಫಾ': ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

- Advertisement -
- Advertisement -

ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್ ಸಲ್ಮಾನ್, ಸಮಂತಾ ರುತ್ ಪ್ರಭು, ಟೊವಿನೋ ಥಾಮಸ್, ಕೀರ್ತಿ ಸುರೇಶ್, ಮಾಧುರಿ ದೀಕ್ಷಿತ್, ವರುಣ್ ಧವನ್, ವಿಜಯ್ ವರ್ಮಾ ಮತ್ತು ಇತರ ಹಲವು ಸೆಲೆಬ್ರಿಟಿಗಳು ರಫಾ ಮೇಲಿನ ಇಸ್ರೇಲ್‌ ಬಾಂಬ್ ದಾಳಿಯನ್ನು ಖಂಡಿಸಿ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

‘ಆಲ್ ಐಸ್ ಆನ್ ರಫಾ’ ಎಂಬ AI- ರಚಿತವಾದ ಚಿತ್ರದ ಪೋಸ್ಟ್‌ನ್ನು ಇನ್ಸ್ಟಾಗ್ರಾಂವೊಂದರಲ್ಲೇ  33 ದಶಲಕ್ಷಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ. ಚಿತ್ರವು ರಫಾದಲ್ಲಿನ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ, ಅಲ್ಲಿನ ನಿರಾಶ್ರಿತ ಜನರನ್ನು ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಮತ್ತು ಮಿಲಿಟರಿ ಪಡೆಗಳು ಸುತ್ತುವರಿದಿರುವುದನ್ನು ಪ್ರತಿಬಿಂಬಿಸುತ್ತದೆ.

‘ಆಲ್ ಐಸ್ ಆನ್ ರಾಫಾ’ ಎಂಬ ಪದವು ಫೆಬ್ರವರಿ 2024ರಲ್ಲಿ ಆಕ್ರಮಿತ ಪ್ಯಾಲೇಸ್ತೀನ್‌ ಪ್ರಾಂತ್ಯಗಳ WHOನ ಕಚೇರಿಯ ನಿರ್ದೇಶಕ ಡಾ ರಿಕ್ ಪೀಪರ್‌ಕಾರ್ನ್ ಮೊದಲು ಬಳಕೆ ಮಾಡಿದ್ದಾರೆ. ‘ರಫಾದ ಮೇಲೆ ಎಲ್ಲರ ಕಣ್ಣುಗಳು’ ಎಂಬುವುದು ಗಾಝಾದ ರಫಾದಲ್ಲಿ ನಡೆಯುತ್ತಿರುವ ನರಮೇಧವನ್ನು ಉಲ್ಲೇಖಿಸುವ ಪದಗುಚ್ಛವಾಗಿದೆ. ಇಸ್ರೇಲ್‌ ರಫಾ ಮೇಲೆ ದಾಳಿ ನಡೆಸಿದರೆ ಅದು ಮಹಾ ದುರಂತ ಎಂದು ಡಾ. ಪೀಪರ್‌ಕಾರ್ನ್‌ ಹೇಳಿದ್ದಾರೆ. ರಾಫಾದಿಂದ WHOನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಪರ್‌ಕಾರ್ನ್ ‘ಎಲ್ಲಾ ಕಣ್ಣುಗಳು ರಫಾ ಮೇಲೆ ಇವೆ” ಎಂದು ಹೇಳಿದ್ದಾರೆ.

ಮೇ 26ರಂದು, ಇಸ್ರೇಲ್‌ ವಾಯುಪಡೆಗಳು ಇಸ್ರೇಲ್‌ನ ನಿರಾಶ್ರಿತರಿರುವ ಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 45 ಜನರ ಹತ್ಯೆ ನಡೆದಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA) ಪ್ರಕಾರ, ಜನರು ರಫಾಗೆ ಓಡಿಹೋಗುವಂತೆ ಇಸ್ರೇಲ್‌ ಮಾಡಿದೆ. ಬಾಂಬ್ ಸ್ಫೋಟಗಳು, ಆಹಾರ ಮತ್ತು ನೀರಿನ ಕೊರತೆ, ತ್ಯಾಜ್ಯದ ರಾಶಿಗಳು ಮತ್ತು ಸೂಕ್ತವಲ್ಲದ ಜೀವನ ಪರಿಸ್ಥಿತಿಗಳ ನಡುವೆ ಇದು ಸಂಭವಿಸಿದೆ. ಗಾಝಾವು “ಭೂಮಿಯ ಮೇಲಿನ ನರಕ”ವಾಗಿದೆ ಮತ್ತು “ಗಾಝಾ ಪಟ್ಟಿಯಲ್ಲಿ ಯಾವುದೇ ಸುರಕ್ಷಿತ ಸ್ಥಳವಿಲ್ಲ” ಎಂದು UNRWA ಹೇಳಿದೆ. ಯಾರೂ ಸುರಕ್ಷಿತವಾಗಿಲ್ಲ, ನಾಗರಿಕರು ಸುರಕ್ಷಿತವಾಗಿಲ್ಲ, ನೆರವು ಕಾರ್ಯಕರ್ತರು ಸುರಕ್ಷಿತವಾಗಿಲ್ಲ, ನಮಗೆ ಕದನ ವಿರಾಮ ಬೇಕು ಎಂದು ಹೇಳಿದೆ.

ಈ ಮಧ್ಯೆ ರಫಾ ಮೇಲಿನ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ದುರಂತ’ ಎಂದು ಕರೆದಿದ್ದಾರೆ. ಮುಗ್ಧ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವ ನಮ್ಮ ಪ್ರಯತ್ನಗಳ ಹೊರತಾಗಿಯೂ, ನಿನ್ನೆ ರಾತ್ರಿ ಒಂದು ತಪ್ಪುಗಿ ದುರಂತ ಸಂಭವಿಸಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಇಸ್ರೇಲ್ ರಾಫಾ ಮೇಲೆ ದಾಳಿ ನಡೆಸುತ್ತಿದೆ. ರಾಫಾ ಮೇಲಿನ ದಾಳಿಯನ್ನು ಹಮಾಸ್‌ನ್ನು ಸೋಲಿಸುವ ತನ್ನ ಕಾರ್ಯತಂತ್ರದ ಭಾಗ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಮೇ 24 ರಂದು, ರಫಾದಲ್ಲಿ ಇಸ್ರೇಲ್ ತನ್ನ ಆಕ್ರಮಣಕಾರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ICJ ಆದೇಶಿಸಿದೆ. ನ್ಯಾಯಾಲಯದ ಸೂಚನೆಯ ಹೊರತಾಗಿಯೂ, ಇಸ್ರೇಲ್ ರಫಾದಲ್ಲಿ ತನ್ನ ದಾಳಿಯನ್ನು ಮುಂದುವರೆಸಿದ್ದು, ಮೇ 25ರಿಂದ 60ಕ್ಕೂ ಹೆಚ್ಚು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ.

ರಫಾದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ 900 ಕೆಜಿ ತೂಕದ 7 ಬಾಂಬ್‌ಗಳನ್ನು ಹಾಕಿದೆ. ಇಸ್ರೇಲ್‌ ಸೈನ್ಯವು “ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ” ರಫಾವನ್ನು ಗುರಿಯಾಗಿಸಿಕೊಂಡಿದೆ. ದಾಳಿಯ ಮೊದಲು ಆ ಪ್ರದೇಶದಿಂದ ಸ್ಥಳಾಂತರವಾಗುವಂತೆ ಇಸ್ರೇಲ್‌ ಮಿಲಿಟರಿ ಪಡೆ ನಾಗರಿಕರಿಗೆ ಎಚ್ಚರಿಕೆ ನೀಡಿಲ್ಲ ಎಂದು ಗಾಝಾದ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...