Homeಮುಖಪುಟ'ಆಲ್ ಐಸ್ ಆನ್ ರಫಾ': ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

- Advertisement -
- Advertisement -

ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್ ಸಲ್ಮಾನ್, ಸಮಂತಾ ರುತ್ ಪ್ರಭು, ಟೊವಿನೋ ಥಾಮಸ್, ಕೀರ್ತಿ ಸುರೇಶ್, ಮಾಧುರಿ ದೀಕ್ಷಿತ್, ವರುಣ್ ಧವನ್, ವಿಜಯ್ ವರ್ಮಾ ಮತ್ತು ಇತರ ಹಲವು ಸೆಲೆಬ್ರಿಟಿಗಳು ರಫಾ ಮೇಲಿನ ಇಸ್ರೇಲ್‌ ಬಾಂಬ್ ದಾಳಿಯನ್ನು ಖಂಡಿಸಿ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

‘ಆಲ್ ಐಸ್ ಆನ್ ರಫಾ’ ಎಂಬ AI- ರಚಿತವಾದ ಚಿತ್ರದ ಪೋಸ್ಟ್‌ನ್ನು ಇನ್ಸ್ಟಾಗ್ರಾಂವೊಂದರಲ್ಲೇ  33 ದಶಲಕ್ಷಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ. ಚಿತ್ರವು ರಫಾದಲ್ಲಿನ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ, ಅಲ್ಲಿನ ನಿರಾಶ್ರಿತ ಜನರನ್ನು ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಮತ್ತು ಮಿಲಿಟರಿ ಪಡೆಗಳು ಸುತ್ತುವರಿದಿರುವುದನ್ನು ಪ್ರತಿಬಿಂಬಿಸುತ್ತದೆ.

‘ಆಲ್ ಐಸ್ ಆನ್ ರಾಫಾ’ ಎಂಬ ಪದವು ಫೆಬ್ರವರಿ 2024ರಲ್ಲಿ ಆಕ್ರಮಿತ ಪ್ಯಾಲೇಸ್ತೀನ್‌ ಪ್ರಾಂತ್ಯಗಳ WHOನ ಕಚೇರಿಯ ನಿರ್ದೇಶಕ ಡಾ ರಿಕ್ ಪೀಪರ್‌ಕಾರ್ನ್ ಮೊದಲು ಬಳಕೆ ಮಾಡಿದ್ದಾರೆ. ‘ರಫಾದ ಮೇಲೆ ಎಲ್ಲರ ಕಣ್ಣುಗಳು’ ಎಂಬುವುದು ಗಾಝಾದ ರಫಾದಲ್ಲಿ ನಡೆಯುತ್ತಿರುವ ನರಮೇಧವನ್ನು ಉಲ್ಲೇಖಿಸುವ ಪದಗುಚ್ಛವಾಗಿದೆ. ಇಸ್ರೇಲ್‌ ರಫಾ ಮೇಲೆ ದಾಳಿ ನಡೆಸಿದರೆ ಅದು ಮಹಾ ದುರಂತ ಎಂದು ಡಾ. ಪೀಪರ್‌ಕಾರ್ನ್‌ ಹೇಳಿದ್ದಾರೆ. ರಾಫಾದಿಂದ WHOನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಪರ್‌ಕಾರ್ನ್ ‘ಎಲ್ಲಾ ಕಣ್ಣುಗಳು ರಫಾ ಮೇಲೆ ಇವೆ” ಎಂದು ಹೇಳಿದ್ದಾರೆ.

ಮೇ 26ರಂದು, ಇಸ್ರೇಲ್‌ ವಾಯುಪಡೆಗಳು ಇಸ್ರೇಲ್‌ನ ನಿರಾಶ್ರಿತರಿರುವ ಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 45 ಜನರ ಹತ್ಯೆ ನಡೆದಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA) ಪ್ರಕಾರ, ಜನರು ರಫಾಗೆ ಓಡಿಹೋಗುವಂತೆ ಇಸ್ರೇಲ್‌ ಮಾಡಿದೆ. ಬಾಂಬ್ ಸ್ಫೋಟಗಳು, ಆಹಾರ ಮತ್ತು ನೀರಿನ ಕೊರತೆ, ತ್ಯಾಜ್ಯದ ರಾಶಿಗಳು ಮತ್ತು ಸೂಕ್ತವಲ್ಲದ ಜೀವನ ಪರಿಸ್ಥಿತಿಗಳ ನಡುವೆ ಇದು ಸಂಭವಿಸಿದೆ. ಗಾಝಾವು “ಭೂಮಿಯ ಮೇಲಿನ ನರಕ”ವಾಗಿದೆ ಮತ್ತು “ಗಾಝಾ ಪಟ್ಟಿಯಲ್ಲಿ ಯಾವುದೇ ಸುರಕ್ಷಿತ ಸ್ಥಳವಿಲ್ಲ” ಎಂದು UNRWA ಹೇಳಿದೆ. ಯಾರೂ ಸುರಕ್ಷಿತವಾಗಿಲ್ಲ, ನಾಗರಿಕರು ಸುರಕ್ಷಿತವಾಗಿಲ್ಲ, ನೆರವು ಕಾರ್ಯಕರ್ತರು ಸುರಕ್ಷಿತವಾಗಿಲ್ಲ, ನಮಗೆ ಕದನ ವಿರಾಮ ಬೇಕು ಎಂದು ಹೇಳಿದೆ.

ಈ ಮಧ್ಯೆ ರಫಾ ಮೇಲಿನ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ದುರಂತ’ ಎಂದು ಕರೆದಿದ್ದಾರೆ. ಮುಗ್ಧ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವ ನಮ್ಮ ಪ್ರಯತ್ನಗಳ ಹೊರತಾಗಿಯೂ, ನಿನ್ನೆ ರಾತ್ರಿ ಒಂದು ತಪ್ಪುಗಿ ದುರಂತ ಸಂಭವಿಸಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಇಸ್ರೇಲ್ ರಾಫಾ ಮೇಲೆ ದಾಳಿ ನಡೆಸುತ್ತಿದೆ. ರಾಫಾ ಮೇಲಿನ ದಾಳಿಯನ್ನು ಹಮಾಸ್‌ನ್ನು ಸೋಲಿಸುವ ತನ್ನ ಕಾರ್ಯತಂತ್ರದ ಭಾಗ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಮೇ 24 ರಂದು, ರಫಾದಲ್ಲಿ ಇಸ್ರೇಲ್ ತನ್ನ ಆಕ್ರಮಣಕಾರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ICJ ಆದೇಶಿಸಿದೆ. ನ್ಯಾಯಾಲಯದ ಸೂಚನೆಯ ಹೊರತಾಗಿಯೂ, ಇಸ್ರೇಲ್ ರಫಾದಲ್ಲಿ ತನ್ನ ದಾಳಿಯನ್ನು ಮುಂದುವರೆಸಿದ್ದು, ಮೇ 25ರಿಂದ 60ಕ್ಕೂ ಹೆಚ್ಚು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ.

ರಫಾದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ 900 ಕೆಜಿ ತೂಕದ 7 ಬಾಂಬ್‌ಗಳನ್ನು ಹಾಕಿದೆ. ಇಸ್ರೇಲ್‌ ಸೈನ್ಯವು “ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ” ರಫಾವನ್ನು ಗುರಿಯಾಗಿಸಿಕೊಂಡಿದೆ. ದಾಳಿಯ ಮೊದಲು ಆ ಪ್ರದೇಶದಿಂದ ಸ್ಥಳಾಂತರವಾಗುವಂತೆ ಇಸ್ರೇಲ್‌ ಮಿಲಿಟರಿ ಪಡೆ ನಾಗರಿಕರಿಗೆ ಎಚ್ಚರಿಕೆ ನೀಡಿಲ್ಲ ಎಂದು ಗಾಝಾದ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...