Homeಮುಖಪುಟಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

- Advertisement -
- Advertisement -

ಸೋಮವಾರದಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹತ್ತು ಕೋಟಿ ಫಾಲೋವರ್‌ಗಳನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು. ಇದನ್ನು ಸರ್ಕಾರದ ಪರವಾಗಿರುವ ಭಾತರದ ಹಲವಾರು ಸೆಲಬ್ರಿಟಿಗಳು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಇದರಲ್ಲಿ, “ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ.

ಈ ಟ್ವೀಟ್‌ಗಳನ್ನು ಭಾರತದ ಹಲವು ಸೆಲೆಬ್ರಿಟಿಗಳು ಕಾಪಿ -ಪೇಸ್ಟ್‌ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿ ಬಿದ್ದವರದಲ್ಲಿ ನಟ ಅಕ್ಷಯ್ ಕುಮಾರ್, ಬ್ಯಾಟ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಮುಖರಾಗಿದ್ದಾರೆ. ಆದರೆ ನೆಟ್ಟಿಗರು ಅವರನ್ನು ಸಾಮಾಜಿಕ ಜಾಲತಾಣದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಈ ಸೆಲೆಬ್ರಿಟಿಗಳು ಕಾಪಿ ಪೇಸ್ಟ್ ಮಾಡುವ ಭರದಲ್ಲಿ ಅದರಲ್ಲಿರುವ ”ಜೋಡಿಸಿದ ಕೈ” ಸ್ಟಿಕ್ಕರನ್ನು ಕೂಡಾ ತೆಗೆಲು ಮರೆತಿದ್ದಾರೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಅಂತಹದ್ದೇ ಹಲವು ಕಾಪಿ-ಪೇಸ್ಟ್‌ ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ರೈತರು ಕಳೆದ 71 ದಿನಗಳಿಂದ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ರೈತರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿತ್ತಾದರೂ, ರೈತರ ಯಾವುದೆ ಬೇಡಿಕೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕದ ಕಾರಣ ಮಾತುಕತೆಗಳು ವಿಫಲಗೊಂಡಿದೆ. ಅದಾಗಿಯು ಹೋರಾಟವನ್ನು ಮುರಿಯಲು ಬೇಕಾಗಿ ರೈತ ಹೋರಾಟಗಾರರಿಗೆ ನಿರಂತರವಾಗಿ ಕಿರುಕುಳ ನೀಡುತ್ತಲೆ ಬಂದಿದೆ. ರೈತ ಹೋರಾಟದ ಬಗ್ಗೆ ಬರೆಯುವ ಪತ್ರಿಕೆಗಳ ಮೇಲೂ ಕೇಂದ್ರ ಸರ್ಕಾರ ತೊಂದರೆ ನೀಡುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...