Homeಮುಖಪುಟಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

- Advertisement -
- Advertisement -

ಸೋಮವಾರದಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹತ್ತು ಕೋಟಿ ಫಾಲೋವರ್‌ಗಳನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು. ಇದನ್ನು ಸರ್ಕಾರದ ಪರವಾಗಿರುವ ಭಾತರದ ಹಲವಾರು ಸೆಲಬ್ರಿಟಿಗಳು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಇದರಲ್ಲಿ, “ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ.

ಈ ಟ್ವೀಟ್‌ಗಳನ್ನು ಭಾರತದ ಹಲವು ಸೆಲೆಬ್ರಿಟಿಗಳು ಕಾಪಿ -ಪೇಸ್ಟ್‌ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿ ಬಿದ್ದವರದಲ್ಲಿ ನಟ ಅಕ್ಷಯ್ ಕುಮಾರ್, ಬ್ಯಾಟ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಮುಖರಾಗಿದ್ದಾರೆ. ಆದರೆ ನೆಟ್ಟಿಗರು ಅವರನ್ನು ಸಾಮಾಜಿಕ ಜಾಲತಾಣದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಈ ಸೆಲೆಬ್ರಿಟಿಗಳು ಕಾಪಿ ಪೇಸ್ಟ್ ಮಾಡುವ ಭರದಲ್ಲಿ ಅದರಲ್ಲಿರುವ ”ಜೋಡಿಸಿದ ಕೈ” ಸ್ಟಿಕ್ಕರನ್ನು ಕೂಡಾ ತೆಗೆಲು ಮರೆತಿದ್ದಾರೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಅಂತಹದ್ದೇ ಹಲವು ಕಾಪಿ-ಪೇಸ್ಟ್‌ ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ರೈತರು ಕಳೆದ 71 ದಿನಗಳಿಂದ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ರೈತರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿತ್ತಾದರೂ, ರೈತರ ಯಾವುದೆ ಬೇಡಿಕೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕದ ಕಾರಣ ಮಾತುಕತೆಗಳು ವಿಫಲಗೊಂಡಿದೆ. ಅದಾಗಿಯು ಹೋರಾಟವನ್ನು ಮುರಿಯಲು ಬೇಕಾಗಿ ರೈತ ಹೋರಾಟಗಾರರಿಗೆ ನಿರಂತರವಾಗಿ ಕಿರುಕುಳ ನೀಡುತ್ತಲೆ ಬಂದಿದೆ. ರೈತ ಹೋರಾಟದ ಬಗ್ಗೆ ಬರೆಯುವ ಪತ್ರಿಕೆಗಳ ಮೇಲೂ ಕೇಂದ್ರ ಸರ್ಕಾರ ತೊಂದರೆ ನೀಡುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...