Homeಮುಖಪುಟಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

- Advertisement -
- Advertisement -

ಸೋಮವಾರದಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹತ್ತು ಕೋಟಿ ಫಾಲೋವರ್‌ಗಳನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು. ಇದನ್ನು ಸರ್ಕಾರದ ಪರವಾಗಿರುವ ಭಾತರದ ಹಲವಾರು ಸೆಲಬ್ರಿಟಿಗಳು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಇದರಲ್ಲಿ, “ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ.

ಈ ಟ್ವೀಟ್‌ಗಳನ್ನು ಭಾರತದ ಹಲವು ಸೆಲೆಬ್ರಿಟಿಗಳು ಕಾಪಿ -ಪೇಸ್ಟ್‌ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿ ಬಿದ್ದವರದಲ್ಲಿ ನಟ ಅಕ್ಷಯ್ ಕುಮಾರ್, ಬ್ಯಾಟ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಮುಖರಾಗಿದ್ದಾರೆ. ಆದರೆ ನೆಟ್ಟಿಗರು ಅವರನ್ನು ಸಾಮಾಜಿಕ ಜಾಲತಾಣದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಈ ಸೆಲೆಬ್ರಿಟಿಗಳು ಕಾಪಿ ಪೇಸ್ಟ್ ಮಾಡುವ ಭರದಲ್ಲಿ ಅದರಲ್ಲಿರುವ ”ಜೋಡಿಸಿದ ಕೈ” ಸ್ಟಿಕ್ಕರನ್ನು ಕೂಡಾ ತೆಗೆಲು ಮರೆತಿದ್ದಾರೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಅಂತಹದ್ದೇ ಹಲವು ಕಾಪಿ-ಪೇಸ್ಟ್‌ ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ರೈತರು ಕಳೆದ 71 ದಿನಗಳಿಂದ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ರೈತರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿತ್ತಾದರೂ, ರೈತರ ಯಾವುದೆ ಬೇಡಿಕೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕದ ಕಾರಣ ಮಾತುಕತೆಗಳು ವಿಫಲಗೊಂಡಿದೆ. ಅದಾಗಿಯು ಹೋರಾಟವನ್ನು ಮುರಿಯಲು ಬೇಕಾಗಿ ರೈತ ಹೋರಾಟಗಾರರಿಗೆ ನಿರಂತರವಾಗಿ ಕಿರುಕುಳ ನೀಡುತ್ತಲೆ ಬಂದಿದೆ. ರೈತ ಹೋರಾಟದ ಬಗ್ಗೆ ಬರೆಯುವ ಪತ್ರಿಕೆಗಳ ಮೇಲೂ ಕೇಂದ್ರ ಸರ್ಕಾರ ತೊಂದರೆ ನೀಡುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...