Homeಮುಖಪುಟಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

- Advertisement -
- Advertisement -

ಸೋಮವಾರದಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹತ್ತು ಕೋಟಿ ಫಾಲೋವರ್‌ಗಳನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು. ಇದನ್ನು ಸರ್ಕಾರದ ಪರವಾಗಿರುವ ಭಾತರದ ಹಲವಾರು ಸೆಲಬ್ರಿಟಿಗಳು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಇದರಲ್ಲಿ, “ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ.

ಈ ಟ್ವೀಟ್‌ಗಳನ್ನು ಭಾರತದ ಹಲವು ಸೆಲೆಬ್ರಿಟಿಗಳು ಕಾಪಿ -ಪೇಸ್ಟ್‌ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿ ಬಿದ್ದವರದಲ್ಲಿ ನಟ ಅಕ್ಷಯ್ ಕುಮಾರ್, ಬ್ಯಾಟ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಮುಖರಾಗಿದ್ದಾರೆ. ಆದರೆ ನೆಟ್ಟಿಗರು ಅವರನ್ನು ಸಾಮಾಜಿಕ ಜಾಲತಾಣದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಈ ಸೆಲೆಬ್ರಿಟಿಗಳು ಕಾಪಿ ಪೇಸ್ಟ್ ಮಾಡುವ ಭರದಲ್ಲಿ ಅದರಲ್ಲಿರುವ ”ಜೋಡಿಸಿದ ಕೈ” ಸ್ಟಿಕ್ಕರನ್ನು ಕೂಡಾ ತೆಗೆಲು ಮರೆತಿದ್ದಾರೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಅಂತಹದ್ದೇ ಹಲವು ಕಾಪಿ-ಪೇಸ್ಟ್‌ ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ರೈತರು ಕಳೆದ 71 ದಿನಗಳಿಂದ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ರೈತರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿತ್ತಾದರೂ, ರೈತರ ಯಾವುದೆ ಬೇಡಿಕೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕದ ಕಾರಣ ಮಾತುಕತೆಗಳು ವಿಫಲಗೊಂಡಿದೆ. ಅದಾಗಿಯು ಹೋರಾಟವನ್ನು ಮುರಿಯಲು ಬೇಕಾಗಿ ರೈತ ಹೋರಾಟಗಾರರಿಗೆ ನಿರಂತರವಾಗಿ ಕಿರುಕುಳ ನೀಡುತ್ತಲೆ ಬಂದಿದೆ. ರೈತ ಹೋರಾಟದ ಬಗ್ಗೆ ಬರೆಯುವ ಪತ್ರಿಕೆಗಳ ಮೇಲೂ ಕೇಂದ್ರ ಸರ್ಕಾರ ತೊಂದರೆ ನೀಡುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...