Homeಮುಖಪುಟಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

- Advertisement -
- Advertisement -

ಸೋಮವಾರದಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹತ್ತು ಕೋಟಿ ಫಾಲೋವರ್‌ಗಳನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು. ಇದನ್ನು ಸರ್ಕಾರದ ಪರವಾಗಿರುವ ಭಾತರದ ಹಲವಾರು ಸೆಲಬ್ರಿಟಿಗಳು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಇದರಲ್ಲಿ, “ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ.

ಈ ಟ್ವೀಟ್‌ಗಳನ್ನು ಭಾರತದ ಹಲವು ಸೆಲೆಬ್ರಿಟಿಗಳು ಕಾಪಿ -ಪೇಸ್ಟ್‌ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿ ಬಿದ್ದವರದಲ್ಲಿ ನಟ ಅಕ್ಷಯ್ ಕುಮಾರ್, ಬ್ಯಾಟ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಮುಖರಾಗಿದ್ದಾರೆ. ಆದರೆ ನೆಟ್ಟಿಗರು ಅವರನ್ನು ಸಾಮಾಜಿಕ ಜಾಲತಾಣದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಈ ಸೆಲೆಬ್ರಿಟಿಗಳು ಕಾಪಿ ಪೇಸ್ಟ್ ಮಾಡುವ ಭರದಲ್ಲಿ ಅದರಲ್ಲಿರುವ ”ಜೋಡಿಸಿದ ಕೈ” ಸ್ಟಿಕ್ಕರನ್ನು ಕೂಡಾ ತೆಗೆಲು ಮರೆತಿದ್ದಾರೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಅಂತಹದ್ದೇ ಹಲವು ಕಾಪಿ-ಪೇಸ್ಟ್‌ ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ರೈತರು ಕಳೆದ 71 ದಿನಗಳಿಂದ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ರೈತರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿತ್ತಾದರೂ, ರೈತರ ಯಾವುದೆ ಬೇಡಿಕೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕದ ಕಾರಣ ಮಾತುಕತೆಗಳು ವಿಫಲಗೊಂಡಿದೆ. ಅದಾಗಿಯು ಹೋರಾಟವನ್ನು ಮುರಿಯಲು ಬೇಕಾಗಿ ರೈತ ಹೋರಾಟಗಾರರಿಗೆ ನಿರಂತರವಾಗಿ ಕಿರುಕುಳ ನೀಡುತ್ತಲೆ ಬಂದಿದೆ. ರೈತ ಹೋರಾಟದ ಬಗ್ಗೆ ಬರೆಯುವ ಪತ್ರಿಕೆಗಳ ಮೇಲೂ ಕೇಂದ್ರ ಸರ್ಕಾರ ತೊಂದರೆ ನೀಡುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...