Homeಮುಖಪುಟಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

- Advertisement -
- Advertisement -

ಸೋಮವಾರದಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹತ್ತು ಕೋಟಿ ಫಾಲೋವರ್‌ಗಳನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು. ಇದನ್ನು ಸರ್ಕಾರದ ಪರವಾಗಿರುವ ಭಾತರದ ಹಲವಾರು ಸೆಲಬ್ರಿಟಿಗಳು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಇದರಲ್ಲಿ, “ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ.

ಈ ಟ್ವೀಟ್‌ಗಳನ್ನು ಭಾರತದ ಹಲವು ಸೆಲೆಬ್ರಿಟಿಗಳು ಕಾಪಿ -ಪೇಸ್ಟ್‌ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿ ಬಿದ್ದವರದಲ್ಲಿ ನಟ ಅಕ್ಷಯ್ ಕುಮಾರ್, ಬ್ಯಾಟ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಮುಖರಾಗಿದ್ದಾರೆ. ಆದರೆ ನೆಟ್ಟಿಗರು ಅವರನ್ನು ಸಾಮಾಜಿಕ ಜಾಲತಾಣದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಈ ಸೆಲೆಬ್ರಿಟಿಗಳು ಕಾಪಿ ಪೇಸ್ಟ್ ಮಾಡುವ ಭರದಲ್ಲಿ ಅದರಲ್ಲಿರುವ ”ಜೋಡಿಸಿದ ಕೈ” ಸ್ಟಿಕ್ಕರನ್ನು ಕೂಡಾ ತೆಗೆಲು ಮರೆತಿದ್ದಾರೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಅಂತಹದ್ದೇ ಹಲವು ಕಾಪಿ-ಪೇಸ್ಟ್‌ ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ರೈತರು ಕಳೆದ 71 ದಿನಗಳಿಂದ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ರೈತರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿತ್ತಾದರೂ, ರೈತರ ಯಾವುದೆ ಬೇಡಿಕೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕದ ಕಾರಣ ಮಾತುಕತೆಗಳು ವಿಫಲಗೊಂಡಿದೆ. ಅದಾಗಿಯು ಹೋರಾಟವನ್ನು ಮುರಿಯಲು ಬೇಕಾಗಿ ರೈತ ಹೋರಾಟಗಾರರಿಗೆ ನಿರಂತರವಾಗಿ ಕಿರುಕುಳ ನೀಡುತ್ತಲೆ ಬಂದಿದೆ. ರೈತ ಹೋರಾಟದ ಬಗ್ಗೆ ಬರೆಯುವ ಪತ್ರಿಕೆಗಳ ಮೇಲೂ ಕೇಂದ್ರ ಸರ್ಕಾರ ತೊಂದರೆ ನೀಡುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...