Homeಮುಖಪುಟಭಾರತೀಯ ಸಂವಿಧಾನವು 'ಸಂಪ್ರದಾಯ' ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

ಭಾರತೀಯ ಸಂವಿಧಾನವು ‘ಸಂಪ್ರದಾಯ’ ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ”ಭಾರತೀಯ ಸಂವಿಧಾನವು ‘ಸಂಪ್ರದಾಯ ಮುರಿಯುವಿಕೆ’ ಆಗಿದೆ ಎಂದು ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಸಂವಿಧಾನ ಪೀಠವು ಇದರ ವಿಚಾರಣೆ ನಡೆಸಿದೆ. ಈ ವೇಳೆ ಪ್ರತಿವಾದಿಗಳ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರ ವಿಚಾರಣೆ ನಡೆಸುತ್ತಿದ್ದಾಗ, ನ್ಯಾಯಮೂರ್ತಿ ಭಟ್ ಸಂಪ್ರದಾಯ ಮುರಿಯುವಿಕೆ’ ಬಗ್ಗೆ ಪ್ರಸ್ತಾಪಿಸಿದರು.

‘ನೀವು ಸಂಪ್ರದಾಯವನ್ನು ತಂದ ಕ್ಷಣ, ಸಂವಿಧಾನವೇ ಸಂಪ್ರದಾಯವನ್ನು ಮುರಿಯುತ್ತದೆ. ಏಕೆಂದರೆ ನೀವು ಮೊದಲ ಬಾರಿಗೆ 14 ಅನ್ನು ತಂದಿದ್ದೀರಿ, ನೀವು 15 ಮತ್ತು 17 ಅನ್ನು ತಂದಿದ್ದೀರಿ, ಆ ಸಂಪ್ರದಾಯಗಳು ಮುರಿದುಹೋಗಿವೆ. ಆ ಸಂಪ್ರದಾಯಗಳನ್ನು ಮುರಿದರೆ, ನಮ್ಮ ಸಮಾಜದಲ್ಲಿ ಜಾತಿಯ ವಿಷಯದಲ್ಲಿ ಯಾವುದನ್ನು ಪವಿತ್ರವೆಂದು ಪರಿಗಣಿಸಲಾಗಿದೆ? ನಾವು ಪ್ರಜ್ಞಾಪೂರ್ವಕವಾಗಿ ಬ್ರೇಕ್ ಮಾಡಿದ್ದೇವೆ ಮತ್ತು ಅದು ನಮಗೆ ಬೇಡ ಎಂದು ಹೇಳಿದೆ. ಅಸ್ಪೃಶ್ಯತೆ ಅಸಾಂವಿಧಾನಿಕ ಎಂದು ಹೇಳಲು ನಾವು ಇಲ್ಲಿಯವರೆಗೆ ಹೋಗಿದ್ದೇವೆ. ಬೇರೆ ಯಾವುದೇ ಸಂವಿಧಾನವು ಹಾಗೆ ಹೇಳುತ್ತದೆ ಎಂದು ನಾನು ಭಾವಿಸುವುದಿಲ್ಲ. ಸಂಪ್ರದಾಯಗಳು ಇರುವ ಮಟ್ಟಿಗೆ ಇವೆ. ಆದರೆ ಅದೇ ಸಮಯದಲ್ಲಿ ಮದುವೆಯ ಪರಿಕಲ್ಪನೆಯು ವಿಕಸನಗೊಂಡಿದೆ ಎಂಬ ಅಂಶವನ್ನು ನಾವು ಜೀವಂತವಾಗಿರಿಸಬೇಕು” ಎಂದು ಪೀಠವು ಹೇಳಿದೆ.

ಈ ಸಂದರ್ಭದಲ್ಲಿ ಪ್ರತಿವಾದಿಗಳ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ಮಾತನಾಡಿ, ”ವರದಕ್ಷಿಣೆ ನಿಷೇಧದಂತಹ ಸುಧಾರಣೆಗಳನ್ನು ಶಾಸಕಾಂಗವು ತೀರ್ಮಾನಿಸಬೇಕೆಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿತ್ತು. ಈಗ ಸಲಿಂಗ ವಿವಾಹದ ವಿಷಯವನ್ನು ಸಂಸತ್ತಿಗೆ ಬಿಡುವುದು ಉತ್ತಮ ಎಂದು ವಾದಿಸಿದರು.

ಇದನ್ನೂ ಓದಿ: ಸಲಿಂಗ ದಂಪತಿ ಸಾಮಾಜಿಕ ಸೌಲಭ್ಯ ಹೇಗೆ ಪಡೆಯಬಹುದು: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಸಲಿಂಗ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಮದುವೆಯಾಗಲು ಸಂವಿಧಾನದ ಅಡಿಯಲ್ಲಿ ಮೂಲಭೂತ ಹಕ್ಕು ಇದೆಯೇ ಎಂಬುದು ಪರಿಗಣಿಸಬೇಕಾದ ಮೊದಲ ಪ್ರಶ್ನೆಯಾಗಿದೆ ಎಂದು ಅವರು ಹೇಳಿದರು. ಭಿನ್ನಲಿಂಗೀಯ ದಂಪತಿಗಳು ತಮ್ಮ ವೈಯಕ್ತಿಕ ಕಾನೂನು, ಸಂಪ್ರದಾಯ, ಧರ್ಮದ ಪ್ರಕಾರ ಮದುವೆಯಾಗುವ ಹಕ್ಕನ್ನು ಹೊಂದಿದ್ದಾರೆ ಎಂದು ದ್ವಿವೇದಿ ಹೇಳಿದರು.

ಅಂತರ್ಜಾತಿ ವಿವಾಹಕ್ಕೂ ಸಾಂಪ್ರದಾಯಿಕವಾಗಿ ಅನುಮತಿ ಇಲ್ಲ ಎಂದು ನ್ಯಾಯಮೂರ್ತಿ ರವೀಂದ್ರ ಭಟ್ ಇಲ್ಲಿ ಸೂಚಿಸಿದರು. ಆದಾಗ್ಯೂ, ಕಾಲಾನಂತರದಲ್ಲಿ, ಮದುವೆಯ ಸನ್ನಿವೇಶವು ಬದಲಾಗಿದೆ. ನ್ಯಾಯಾಧೀಶರು ಮೌಖಿಕವಾಗಿ ಹೇಳಿದರು.

”ನಾವು ಸ್ವತಂತ್ರ ನಾಗರಿಕರು ಹಾಗಾಗಿ ಯಾವುದನ್ನೂ ಮಂಜೂರು ಮಾಡಿಲ್ಲ ಇದನ್ನು ನಾವೇ ತೆಗೆದುಕೊಂಡಿದ್ದೇವೆ. ಮಾತನಾಡುವ ಹಕ್ಕು ನಮ್ಮ ಅಂತರ್ಗತ ಹಕ್ಕುಗಳ ಭಾಗವಾಗಿದೆ ಅದನ್ನು ಸಂವಿಧಾನ ನೀಡುವುದಿಲ್ಲ. ಇದನ್ನು ಶಾಸನಗಳು ಕೂಡ ಮಾನ್ಯತೆ ಪಡೆದಿವೆ. ಆದ್ದರಿಂದ ಮದುವೆಯಾಗುವ ಹಕ್ಕು ಸಹ ಅಂತರ್ಗತವಾಗಿರುತ್ತದೆ” ಎಂದು ಪೀಠ ಹೇಳಿದೆ.

ಜಸ್ಟಿಸ್ ಭಟ್ ಅವರು ಮುಂದುವರೆದು, ”ಈ ಮದುವೆಯೊಳಗೆ, ಅವರು ಯಾವ ರೀತಿ ಮದುವೆ ಆಗಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ”ಮದುವೆ ಎಂದರೇನು? ಇಬ್ಬರು ಸಂಗಾತಿಗಳು ಒಪ್ಪಿಕೊಂಡು ಸ್ವಯಂಪ್ರೇರಣೆಯಿಂದ ನಿರ್ಧರಿಸುತ್ತಾರೆ. ಮಕ್ಕಳನ್ನು ಹೊಂದುವ ಬಗ್ಗೆ ಆ ಸಂಗಾತಿಗಳು ನಿರ್ಧರಿಸುತ್ತಾರೆ. ಇದು ಸಂಪೂರ್ಣವಾಗಿ ಅವರ ಆಯ್ಕೆಯಾಗಿದೆ. ಇಬ್ಬರು ಒಟ್ಟಿಗೆ ವಾಸಿಸದಿರುವ ಮದುವೆಗಳು ಇರಬಹುದು. ಮದುವೆಯು ಮುಖ್ಯ ವಿಚಾರವಾಗಿರುವುದರಿಂದ ಸಂಗಾತಿಗಳ ನಿರ್ಧಾರದ ಮೇಲೆ ಎಲ್ಲವು ಅವಲಂಬನೆಯಾಗಿದೆ” ಎಂದು ಹೇಳಿದರು.

ಈ ವೇಳೆ ದ್ವಿವೇದಿ ಅವರು, ಮದುವೆಯನ್ನು ವೈಯಕ್ತಿಕ ಪರಿಕಲ್ಪನೆಯಾಗಿ ಪರಿಗಣಿಸಿದರೆ, ಅಲ್ಲಿ ಯಾವುದೇ ಕಾನೂನು ಇರುವುದಿಲ್ಲ ಎಂದರು.

”ಮದುವೆಯನ್ನು ನಿಯಂತ್ರಿಸುವಲ್ಲಿ ರಾಜ್ಯವು ಕಾನೂನುಬದ್ಧ ಆಸಕ್ತಿಯನ್ನು ಹೊಂದಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಹಾಗಾದರೆ ಮುಂದಿನ ವಿಷಯವೆಂದರೆ, ಭಿನ್ನಲಿಂಗೀಯತೆಯು ಮದುವೆಯ ಪ್ರಮುಖ ಅಂಶವಾಗಿದೆಯೇ?” ಎಂದು ಸಿಜೆಐ ಪ್ರಶ್ನೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...