Homeಮುಖಪುಟಭಾರತೀಯ ಸಂವಿಧಾನವು 'ಸಂಪ್ರದಾಯ' ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

ಭಾರತೀಯ ಸಂವಿಧಾನವು ‘ಸಂಪ್ರದಾಯ’ ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ”ಭಾರತೀಯ ಸಂವಿಧಾನವು ‘ಸಂಪ್ರದಾಯ ಮುರಿಯುವಿಕೆ’ ಆಗಿದೆ ಎಂದು ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಸಂವಿಧಾನ ಪೀಠವು ಇದರ ವಿಚಾರಣೆ ನಡೆಸಿದೆ. ಈ ವೇಳೆ ಪ್ರತಿವಾದಿಗಳ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರ ವಿಚಾರಣೆ ನಡೆಸುತ್ತಿದ್ದಾಗ, ನ್ಯಾಯಮೂರ್ತಿ ಭಟ್ ಸಂಪ್ರದಾಯ ಮುರಿಯುವಿಕೆ’ ಬಗ್ಗೆ ಪ್ರಸ್ತಾಪಿಸಿದರು.

‘ನೀವು ಸಂಪ್ರದಾಯವನ್ನು ತಂದ ಕ್ಷಣ, ಸಂವಿಧಾನವೇ ಸಂಪ್ರದಾಯವನ್ನು ಮುರಿಯುತ್ತದೆ. ಏಕೆಂದರೆ ನೀವು ಮೊದಲ ಬಾರಿಗೆ 14 ಅನ್ನು ತಂದಿದ್ದೀರಿ, ನೀವು 15 ಮತ್ತು 17 ಅನ್ನು ತಂದಿದ್ದೀರಿ, ಆ ಸಂಪ್ರದಾಯಗಳು ಮುರಿದುಹೋಗಿವೆ. ಆ ಸಂಪ್ರದಾಯಗಳನ್ನು ಮುರಿದರೆ, ನಮ್ಮ ಸಮಾಜದಲ್ಲಿ ಜಾತಿಯ ವಿಷಯದಲ್ಲಿ ಯಾವುದನ್ನು ಪವಿತ್ರವೆಂದು ಪರಿಗಣಿಸಲಾಗಿದೆ? ನಾವು ಪ್ರಜ್ಞಾಪೂರ್ವಕವಾಗಿ ಬ್ರೇಕ್ ಮಾಡಿದ್ದೇವೆ ಮತ್ತು ಅದು ನಮಗೆ ಬೇಡ ಎಂದು ಹೇಳಿದೆ. ಅಸ್ಪೃಶ್ಯತೆ ಅಸಾಂವಿಧಾನಿಕ ಎಂದು ಹೇಳಲು ನಾವು ಇಲ್ಲಿಯವರೆಗೆ ಹೋಗಿದ್ದೇವೆ. ಬೇರೆ ಯಾವುದೇ ಸಂವಿಧಾನವು ಹಾಗೆ ಹೇಳುತ್ತದೆ ಎಂದು ನಾನು ಭಾವಿಸುವುದಿಲ್ಲ. ಸಂಪ್ರದಾಯಗಳು ಇರುವ ಮಟ್ಟಿಗೆ ಇವೆ. ಆದರೆ ಅದೇ ಸಮಯದಲ್ಲಿ ಮದುವೆಯ ಪರಿಕಲ್ಪನೆಯು ವಿಕಸನಗೊಂಡಿದೆ ಎಂಬ ಅಂಶವನ್ನು ನಾವು ಜೀವಂತವಾಗಿರಿಸಬೇಕು” ಎಂದು ಪೀಠವು ಹೇಳಿದೆ.

ಈ ಸಂದರ್ಭದಲ್ಲಿ ಪ್ರತಿವಾದಿಗಳ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ಮಾತನಾಡಿ, ”ವರದಕ್ಷಿಣೆ ನಿಷೇಧದಂತಹ ಸುಧಾರಣೆಗಳನ್ನು ಶಾಸಕಾಂಗವು ತೀರ್ಮಾನಿಸಬೇಕೆಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿತ್ತು. ಈಗ ಸಲಿಂಗ ವಿವಾಹದ ವಿಷಯವನ್ನು ಸಂಸತ್ತಿಗೆ ಬಿಡುವುದು ಉತ್ತಮ ಎಂದು ವಾದಿಸಿದರು.

ಇದನ್ನೂ ಓದಿ: ಸಲಿಂಗ ದಂಪತಿ ಸಾಮಾಜಿಕ ಸೌಲಭ್ಯ ಹೇಗೆ ಪಡೆಯಬಹುದು: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಸಲಿಂಗ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಮದುವೆಯಾಗಲು ಸಂವಿಧಾನದ ಅಡಿಯಲ್ಲಿ ಮೂಲಭೂತ ಹಕ್ಕು ಇದೆಯೇ ಎಂಬುದು ಪರಿಗಣಿಸಬೇಕಾದ ಮೊದಲ ಪ್ರಶ್ನೆಯಾಗಿದೆ ಎಂದು ಅವರು ಹೇಳಿದರು. ಭಿನ್ನಲಿಂಗೀಯ ದಂಪತಿಗಳು ತಮ್ಮ ವೈಯಕ್ತಿಕ ಕಾನೂನು, ಸಂಪ್ರದಾಯ, ಧರ್ಮದ ಪ್ರಕಾರ ಮದುವೆಯಾಗುವ ಹಕ್ಕನ್ನು ಹೊಂದಿದ್ದಾರೆ ಎಂದು ದ್ವಿವೇದಿ ಹೇಳಿದರು.

ಅಂತರ್ಜಾತಿ ವಿವಾಹಕ್ಕೂ ಸಾಂಪ್ರದಾಯಿಕವಾಗಿ ಅನುಮತಿ ಇಲ್ಲ ಎಂದು ನ್ಯಾಯಮೂರ್ತಿ ರವೀಂದ್ರ ಭಟ್ ಇಲ್ಲಿ ಸೂಚಿಸಿದರು. ಆದಾಗ್ಯೂ, ಕಾಲಾನಂತರದಲ್ಲಿ, ಮದುವೆಯ ಸನ್ನಿವೇಶವು ಬದಲಾಗಿದೆ. ನ್ಯಾಯಾಧೀಶರು ಮೌಖಿಕವಾಗಿ ಹೇಳಿದರು.

”ನಾವು ಸ್ವತಂತ್ರ ನಾಗರಿಕರು ಹಾಗಾಗಿ ಯಾವುದನ್ನೂ ಮಂಜೂರು ಮಾಡಿಲ್ಲ ಇದನ್ನು ನಾವೇ ತೆಗೆದುಕೊಂಡಿದ್ದೇವೆ. ಮಾತನಾಡುವ ಹಕ್ಕು ನಮ್ಮ ಅಂತರ್ಗತ ಹಕ್ಕುಗಳ ಭಾಗವಾಗಿದೆ ಅದನ್ನು ಸಂವಿಧಾನ ನೀಡುವುದಿಲ್ಲ. ಇದನ್ನು ಶಾಸನಗಳು ಕೂಡ ಮಾನ್ಯತೆ ಪಡೆದಿವೆ. ಆದ್ದರಿಂದ ಮದುವೆಯಾಗುವ ಹಕ್ಕು ಸಹ ಅಂತರ್ಗತವಾಗಿರುತ್ತದೆ” ಎಂದು ಪೀಠ ಹೇಳಿದೆ.

ಜಸ್ಟಿಸ್ ಭಟ್ ಅವರು ಮುಂದುವರೆದು, ”ಈ ಮದುವೆಯೊಳಗೆ, ಅವರು ಯಾವ ರೀತಿ ಮದುವೆ ಆಗಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ”ಮದುವೆ ಎಂದರೇನು? ಇಬ್ಬರು ಸಂಗಾತಿಗಳು ಒಪ್ಪಿಕೊಂಡು ಸ್ವಯಂಪ್ರೇರಣೆಯಿಂದ ನಿರ್ಧರಿಸುತ್ತಾರೆ. ಮಕ್ಕಳನ್ನು ಹೊಂದುವ ಬಗ್ಗೆ ಆ ಸಂಗಾತಿಗಳು ನಿರ್ಧರಿಸುತ್ತಾರೆ. ಇದು ಸಂಪೂರ್ಣವಾಗಿ ಅವರ ಆಯ್ಕೆಯಾಗಿದೆ. ಇಬ್ಬರು ಒಟ್ಟಿಗೆ ವಾಸಿಸದಿರುವ ಮದುವೆಗಳು ಇರಬಹುದು. ಮದುವೆಯು ಮುಖ್ಯ ವಿಚಾರವಾಗಿರುವುದರಿಂದ ಸಂಗಾತಿಗಳ ನಿರ್ಧಾರದ ಮೇಲೆ ಎಲ್ಲವು ಅವಲಂಬನೆಯಾಗಿದೆ” ಎಂದು ಹೇಳಿದರು.

ಈ ವೇಳೆ ದ್ವಿವೇದಿ ಅವರು, ಮದುವೆಯನ್ನು ವೈಯಕ್ತಿಕ ಪರಿಕಲ್ಪನೆಯಾಗಿ ಪರಿಗಣಿಸಿದರೆ, ಅಲ್ಲಿ ಯಾವುದೇ ಕಾನೂನು ಇರುವುದಿಲ್ಲ ಎಂದರು.

”ಮದುವೆಯನ್ನು ನಿಯಂತ್ರಿಸುವಲ್ಲಿ ರಾಜ್ಯವು ಕಾನೂನುಬದ್ಧ ಆಸಕ್ತಿಯನ್ನು ಹೊಂದಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಹಾಗಾದರೆ ಮುಂದಿನ ವಿಷಯವೆಂದರೆ, ಭಿನ್ನಲಿಂಗೀಯತೆಯು ಮದುವೆಯ ಪ್ರಮುಖ ಅಂಶವಾಗಿದೆಯೇ?” ಎಂದು ಸಿಜೆಐ ಪ್ರಶ್ನೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...