Homeಮುಖಪುಟಭಾರತೀಯ ಸಂವಿಧಾನವು 'ಸಂಪ್ರದಾಯ' ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

ಭಾರತೀಯ ಸಂವಿಧಾನವು ‘ಸಂಪ್ರದಾಯ’ ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ”ಭಾರತೀಯ ಸಂವಿಧಾನವು ‘ಸಂಪ್ರದಾಯ ಮುರಿಯುವಿಕೆ’ ಆಗಿದೆ ಎಂದು ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಸಂವಿಧಾನ ಪೀಠವು ಇದರ ವಿಚಾರಣೆ ನಡೆಸಿದೆ. ಈ ವೇಳೆ ಪ್ರತಿವಾದಿಗಳ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರ ವಿಚಾರಣೆ ನಡೆಸುತ್ತಿದ್ದಾಗ, ನ್ಯಾಯಮೂರ್ತಿ ಭಟ್ ಸಂಪ್ರದಾಯ ಮುರಿಯುವಿಕೆ’ ಬಗ್ಗೆ ಪ್ರಸ್ತಾಪಿಸಿದರು.

‘ನೀವು ಸಂಪ್ರದಾಯವನ್ನು ತಂದ ಕ್ಷಣ, ಸಂವಿಧಾನವೇ ಸಂಪ್ರದಾಯವನ್ನು ಮುರಿಯುತ್ತದೆ. ಏಕೆಂದರೆ ನೀವು ಮೊದಲ ಬಾರಿಗೆ 14 ಅನ್ನು ತಂದಿದ್ದೀರಿ, ನೀವು 15 ಮತ್ತು 17 ಅನ್ನು ತಂದಿದ್ದೀರಿ, ಆ ಸಂಪ್ರದಾಯಗಳು ಮುರಿದುಹೋಗಿವೆ. ಆ ಸಂಪ್ರದಾಯಗಳನ್ನು ಮುರಿದರೆ, ನಮ್ಮ ಸಮಾಜದಲ್ಲಿ ಜಾತಿಯ ವಿಷಯದಲ್ಲಿ ಯಾವುದನ್ನು ಪವಿತ್ರವೆಂದು ಪರಿಗಣಿಸಲಾಗಿದೆ? ನಾವು ಪ್ರಜ್ಞಾಪೂರ್ವಕವಾಗಿ ಬ್ರೇಕ್ ಮಾಡಿದ್ದೇವೆ ಮತ್ತು ಅದು ನಮಗೆ ಬೇಡ ಎಂದು ಹೇಳಿದೆ. ಅಸ್ಪೃಶ್ಯತೆ ಅಸಾಂವಿಧಾನಿಕ ಎಂದು ಹೇಳಲು ನಾವು ಇಲ್ಲಿಯವರೆಗೆ ಹೋಗಿದ್ದೇವೆ. ಬೇರೆ ಯಾವುದೇ ಸಂವಿಧಾನವು ಹಾಗೆ ಹೇಳುತ್ತದೆ ಎಂದು ನಾನು ಭಾವಿಸುವುದಿಲ್ಲ. ಸಂಪ್ರದಾಯಗಳು ಇರುವ ಮಟ್ಟಿಗೆ ಇವೆ. ಆದರೆ ಅದೇ ಸಮಯದಲ್ಲಿ ಮದುವೆಯ ಪರಿಕಲ್ಪನೆಯು ವಿಕಸನಗೊಂಡಿದೆ ಎಂಬ ಅಂಶವನ್ನು ನಾವು ಜೀವಂತವಾಗಿರಿಸಬೇಕು” ಎಂದು ಪೀಠವು ಹೇಳಿದೆ.

ಈ ಸಂದರ್ಭದಲ್ಲಿ ಪ್ರತಿವಾದಿಗಳ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ಮಾತನಾಡಿ, ”ವರದಕ್ಷಿಣೆ ನಿಷೇಧದಂತಹ ಸುಧಾರಣೆಗಳನ್ನು ಶಾಸಕಾಂಗವು ತೀರ್ಮಾನಿಸಬೇಕೆಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿತ್ತು. ಈಗ ಸಲಿಂಗ ವಿವಾಹದ ವಿಷಯವನ್ನು ಸಂಸತ್ತಿಗೆ ಬಿಡುವುದು ಉತ್ತಮ ಎಂದು ವಾದಿಸಿದರು.

ಇದನ್ನೂ ಓದಿ: ಸಲಿಂಗ ದಂಪತಿ ಸಾಮಾಜಿಕ ಸೌಲಭ್ಯ ಹೇಗೆ ಪಡೆಯಬಹುದು: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಸಲಿಂಗ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಮದುವೆಯಾಗಲು ಸಂವಿಧಾನದ ಅಡಿಯಲ್ಲಿ ಮೂಲಭೂತ ಹಕ್ಕು ಇದೆಯೇ ಎಂಬುದು ಪರಿಗಣಿಸಬೇಕಾದ ಮೊದಲ ಪ್ರಶ್ನೆಯಾಗಿದೆ ಎಂದು ಅವರು ಹೇಳಿದರು. ಭಿನ್ನಲಿಂಗೀಯ ದಂಪತಿಗಳು ತಮ್ಮ ವೈಯಕ್ತಿಕ ಕಾನೂನು, ಸಂಪ್ರದಾಯ, ಧರ್ಮದ ಪ್ರಕಾರ ಮದುವೆಯಾಗುವ ಹಕ್ಕನ್ನು ಹೊಂದಿದ್ದಾರೆ ಎಂದು ದ್ವಿವೇದಿ ಹೇಳಿದರು.

ಅಂತರ್ಜಾತಿ ವಿವಾಹಕ್ಕೂ ಸಾಂಪ್ರದಾಯಿಕವಾಗಿ ಅನುಮತಿ ಇಲ್ಲ ಎಂದು ನ್ಯಾಯಮೂರ್ತಿ ರವೀಂದ್ರ ಭಟ್ ಇಲ್ಲಿ ಸೂಚಿಸಿದರು. ಆದಾಗ್ಯೂ, ಕಾಲಾನಂತರದಲ್ಲಿ, ಮದುವೆಯ ಸನ್ನಿವೇಶವು ಬದಲಾಗಿದೆ. ನ್ಯಾಯಾಧೀಶರು ಮೌಖಿಕವಾಗಿ ಹೇಳಿದರು.

”ನಾವು ಸ್ವತಂತ್ರ ನಾಗರಿಕರು ಹಾಗಾಗಿ ಯಾವುದನ್ನೂ ಮಂಜೂರು ಮಾಡಿಲ್ಲ ಇದನ್ನು ನಾವೇ ತೆಗೆದುಕೊಂಡಿದ್ದೇವೆ. ಮಾತನಾಡುವ ಹಕ್ಕು ನಮ್ಮ ಅಂತರ್ಗತ ಹಕ್ಕುಗಳ ಭಾಗವಾಗಿದೆ ಅದನ್ನು ಸಂವಿಧಾನ ನೀಡುವುದಿಲ್ಲ. ಇದನ್ನು ಶಾಸನಗಳು ಕೂಡ ಮಾನ್ಯತೆ ಪಡೆದಿವೆ. ಆದ್ದರಿಂದ ಮದುವೆಯಾಗುವ ಹಕ್ಕು ಸಹ ಅಂತರ್ಗತವಾಗಿರುತ್ತದೆ” ಎಂದು ಪೀಠ ಹೇಳಿದೆ.

ಜಸ್ಟಿಸ್ ಭಟ್ ಅವರು ಮುಂದುವರೆದು, ”ಈ ಮದುವೆಯೊಳಗೆ, ಅವರು ಯಾವ ರೀತಿ ಮದುವೆ ಆಗಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ”ಮದುವೆ ಎಂದರೇನು? ಇಬ್ಬರು ಸಂಗಾತಿಗಳು ಒಪ್ಪಿಕೊಂಡು ಸ್ವಯಂಪ್ರೇರಣೆಯಿಂದ ನಿರ್ಧರಿಸುತ್ತಾರೆ. ಮಕ್ಕಳನ್ನು ಹೊಂದುವ ಬಗ್ಗೆ ಆ ಸಂಗಾತಿಗಳು ನಿರ್ಧರಿಸುತ್ತಾರೆ. ಇದು ಸಂಪೂರ್ಣವಾಗಿ ಅವರ ಆಯ್ಕೆಯಾಗಿದೆ. ಇಬ್ಬರು ಒಟ್ಟಿಗೆ ವಾಸಿಸದಿರುವ ಮದುವೆಗಳು ಇರಬಹುದು. ಮದುವೆಯು ಮುಖ್ಯ ವಿಚಾರವಾಗಿರುವುದರಿಂದ ಸಂಗಾತಿಗಳ ನಿರ್ಧಾರದ ಮೇಲೆ ಎಲ್ಲವು ಅವಲಂಬನೆಯಾಗಿದೆ” ಎಂದು ಹೇಳಿದರು.

ಈ ವೇಳೆ ದ್ವಿವೇದಿ ಅವರು, ಮದುವೆಯನ್ನು ವೈಯಕ್ತಿಕ ಪರಿಕಲ್ಪನೆಯಾಗಿ ಪರಿಗಣಿಸಿದರೆ, ಅಲ್ಲಿ ಯಾವುದೇ ಕಾನೂನು ಇರುವುದಿಲ್ಲ ಎಂದರು.

”ಮದುವೆಯನ್ನು ನಿಯಂತ್ರಿಸುವಲ್ಲಿ ರಾಜ್ಯವು ಕಾನೂನುಬದ್ಧ ಆಸಕ್ತಿಯನ್ನು ಹೊಂದಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಹಾಗಾದರೆ ಮುಂದಿನ ವಿಷಯವೆಂದರೆ, ಭಿನ್ನಲಿಂಗೀಯತೆಯು ಮದುವೆಯ ಪ್ರಮುಖ ಅಂಶವಾಗಿದೆಯೇ?” ಎಂದು ಸಿಜೆಐ ಪ್ರಶ್ನೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...