Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ...

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿರುವುದು ಭಾರತೀಯರು ಸೇರಿದಂತೆ ಲಕ್ಷಾಂತರ ವಲಸಿಗರ ಆತಂಕಕ್ಕೆ ಕಾರಣವಾಗಿದೆ.

ವಿಶೇಷವಾಗಿ ಹೆಚ್‌-1ಬಿ ಅಧಿಕೃತ ವಲಸಿಗರ ವೀಸಾ ಹೊಂದಿರುವ ಭಾರತದ ಲಕ್ಷಾಂತರ ದಂಪತಿಗಳು ಚಿಂತೆಗೆ ಈಡಾಗಿದ್ದಾರೆ. ವಲಸಿಗ ಗರ್ಭಿಣಿಯರು ತಮಗೆ ಹುಟ್ಟುವ ಮಕ್ಕಳಿಗೆ ಜನ್ಮದತ್ತ ಅಮೆರಿಕದ ಪೌರತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಟ್ರಂಪ್ ಆದೇಶ ಅವರ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದೆ.

ವರದಿಗಳ ಪ್ರಕಾರ, ಟ್ರಂಪ್ ಆದೇಶಕ್ಕೆ ಅಮೆರಿಕದ ಫೆಡರಲ್ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಅದು ಒಂದು ವೇಳೆ ತೆರವಾದರೆ, ಫೆಬ್ರವರಿ 20 ರಿಂದ ಟ್ರಂಪ್ ಕಾರ್ಯಕಾರಿ ಆದೇಶಗಳು ಜಾರಿಗೆ ಬರಲಿವೆ. ಅದಕ್ಕೂ ಮುನ್ನ ಸಿಸೇರಿಯನ್ (ಸಿ-ಸೆಕ್ಷನ್ಸ್) ಮೂಲಕ ಹೆರಿಗೆ ಮಾಡಿಸಿಕೊಂಡು ಮಕ್ಕಳಿಗೆ ಪೌರತ್ವ ಪಡೆಯಲು ಮಹಿಳೆಯರು ಮುಂದಾಗಿದ್ದಾರೆ.

ವಿಶೇಷವಾಗಿ ಭಾರತೀಯ ವಲಸಿಗ ಗರ್ಭಿಣಿಯರು ಸಿಸೇರಿಯನ್ ಹೆರಿಗೆ ಸಂಬಂಧ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಕ್ಲೀನಿಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಒಬ್ಬರು ಭಾರತೀಯ ಮೂಲದ ಸ್ತ್ರೀರೋಗತಜ್ಞ ಸಿಸೇರಿಯನ್ ಹೆರಿಗೆ ಸಂಬಂಧ 20 ಕರೆಗಳನ್ನು ಸ್ವೀಕರಿಸಿರುವುದಾಗಿ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮದತ್ತ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಅಮೆರಿಕದಲ್ಲಿ ತಾತ್ಕಾಲಿಕ ಹೆಚ್‌-1ಬಿ ಮತ್ತು ಎಲ್‌1 ವೀಸಾಗಳ ಮೇಲೆ ಕೆಲಸ ಮಾಡುತ್ತಿರುವ ಲಕ್ಷಾಂತರ ಭಾರತೀಯರಿದ್ದಾರೆ. ಈ ಪೈಕಿ ಹೆಚ್ಚಿನವರು ಅಮೆರಿಕದಲ್ಲಿ ಶಾಶ್ವತ ವಾಸಕ್ಕೆ ಅವಕಾಶ ಕಲ್ಪಿಸುವ ಗ್ರೀನ್ ಕಾರ್ಡ್‌ ಪಡೆಯಲು ಕ್ಯೂನಲ್ಲಿದ್ದಾರೆ. ಟ್ರಂಪ್ ಆದೇಶದಿಂದ ಇನ್ನು ಮುಂದೆ ಪೋಷಕರಲ್ಲಿ ಯಾರದರು ಒಬ್ಬರು ಅಮೆರಿಕದ ನಾಗರಿಕ ಅಥವಾ ಗ್ರೀನ್ ಕಾರ್ಡ್ ಹೊಂದಿರುವವರು ಅಲ್ಲದೇ ಇದ್ದರೆ, ಅಂತಹ ಮಕ್ಕಳಿಗೆ ಜನ್ಮದತ್ತ ಪೌರತ್ವ ಸಿಗುವುದಿಲ್ಲ.

ನ್ಯೂಜೆರ್ಸಿಯಲ್ಲಿ ಹೆರಿಗೆ ಆಸ್ಪತ್ರೆ ಹೊಂದಿರುವ ಭಾರತದ ವೈದ್ಯ ಡಾ. ಎಸ್. ಡಿ. ರಾಮಾ ಅವರಿಗೆ ಎಂಟು ಮತ್ತು ಒಂಭತ್ತು ತಿಂಗಳು ತುಂಬಿರುವ ಹಲವು ಗರ್ಭಿಣಿಯರಿಂದ ಸಿಸೇರಿಯನ್ ಹೆರಿಗೆ ಮಾಡಿಸಲು ಕೋರಿಕೆ ಬಂದಿದೆ. ಕೆಲ ಗರ್ಭಿಣಿಯರು ತಿಂಗಳು ಭರ್ತಿಯಾಗದಿದ್ದರೂ ಹೆರಿಗೆ ಮಾಡಿಸಲು ಕೋರುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಏಳು ತಿಂಗಳ ಗರ್ಭಿಣಿಯೊಬ್ಬರು ತನ್ನ ಪತಿಯೊಂದಿಗೆ ಅವಧಿಪೂರ್ವ ಹೆರಿಗೆಗೆ ನೋಂದಣಿ ಮಾಡಿಕೊಳ್ಳಲು ಬಂದಿದ್ದರು. ಮಾರ್ಚ್‌ವರೆಗೆ ಅವಳಿಗೆ ಹೆರಿಗೆ ಆಗುವುದಿಲ್ಲ” ಎಂದು ಡಾ. ರಮಾ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಟೆಕ್ಸಾಸ್‌ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಎಸ್.ಜಿ ಮುಕ್ಕಳ ಅವರು ಅವಧಿಪೂರ್ವ ಹೆರಿಗೆಯ ಅಪಾಯಗಳ ಕುರಿತು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಸುಮಾರು 20 ಜೋಡಿಗಳೊಂದಿಗೆ ಮಾತನಾಡಿದ್ದೇನೆ ಎಂದು ಅವರು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ.

ಸಿಸೇರಿಯನ್ ಹೆರಿಗೆ ಸಾಧ್ಯವಾದರೂ, ಅವಧಿಪೂರ್ಣ ಅದನ್ನು ಮಾಡಿಸದಂತೆ ನಾನು ದಂಪತಿಗಳಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಪೌರತ್ವ ಕಳೆದುಕೊಳ್ಳುವ ದಾವಂತದಲ್ಲಿ ಅವಧಿಪೂರ್ಣ ಹೆರಿಗೆ ಮಾಡಿಸುವುದರಿಂದ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ. ಒಂದು ಮಗುವನ್ನು ಹೊರ ತೆಗೆದರೂ, ಅದು ಶ್ವಾಸಕೋಶ, ಕಡಿಮೆ ತೂಕ, ನರದ ಸಮಸ್ಯೆಗಳನ್ನು ಎದುರಿಸಬಹುದು ಎಂದು ಡಾ. ಮುಕ್ಕಳ ಆತಂಕ ವ್ಯಕ್ತಪಡಿಸಿದ್ದಾರೆ.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...