Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ...

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿರುವುದು ಭಾರತೀಯರು ಸೇರಿದಂತೆ ಲಕ್ಷಾಂತರ ವಲಸಿಗರ ಆತಂಕಕ್ಕೆ ಕಾರಣವಾಗಿದೆ.

ವಿಶೇಷವಾಗಿ ಹೆಚ್‌-1ಬಿ ಅಧಿಕೃತ ವಲಸಿಗರ ವೀಸಾ ಹೊಂದಿರುವ ಭಾರತದ ಲಕ್ಷಾಂತರ ದಂಪತಿಗಳು ಚಿಂತೆಗೆ ಈಡಾಗಿದ್ದಾರೆ. ವಲಸಿಗ ಗರ್ಭಿಣಿಯರು ತಮಗೆ ಹುಟ್ಟುವ ಮಕ್ಕಳಿಗೆ ಜನ್ಮದತ್ತ ಅಮೆರಿಕದ ಪೌರತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಟ್ರಂಪ್ ಆದೇಶ ಅವರ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದೆ.

ವರದಿಗಳ ಪ್ರಕಾರ, ಟ್ರಂಪ್ ಆದೇಶಕ್ಕೆ ಅಮೆರಿಕದ ಫೆಡರಲ್ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಅದು ಒಂದು ವೇಳೆ ತೆರವಾದರೆ, ಫೆಬ್ರವರಿ 20 ರಿಂದ ಟ್ರಂಪ್ ಕಾರ್ಯಕಾರಿ ಆದೇಶಗಳು ಜಾರಿಗೆ ಬರಲಿವೆ. ಅದಕ್ಕೂ ಮುನ್ನ ಸಿಸೇರಿಯನ್ (ಸಿ-ಸೆಕ್ಷನ್ಸ್) ಮೂಲಕ ಹೆರಿಗೆ ಮಾಡಿಸಿಕೊಂಡು ಮಕ್ಕಳಿಗೆ ಪೌರತ್ವ ಪಡೆಯಲು ಮಹಿಳೆಯರು ಮುಂದಾಗಿದ್ದಾರೆ.

ವಿಶೇಷವಾಗಿ ಭಾರತೀಯ ವಲಸಿಗ ಗರ್ಭಿಣಿಯರು ಸಿಸೇರಿಯನ್ ಹೆರಿಗೆ ಸಂಬಂಧ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಕ್ಲೀನಿಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಒಬ್ಬರು ಭಾರತೀಯ ಮೂಲದ ಸ್ತ್ರೀರೋಗತಜ್ಞ ಸಿಸೇರಿಯನ್ ಹೆರಿಗೆ ಸಂಬಂಧ 20 ಕರೆಗಳನ್ನು ಸ್ವೀಕರಿಸಿರುವುದಾಗಿ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮದತ್ತ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಅಮೆರಿಕದಲ್ಲಿ ತಾತ್ಕಾಲಿಕ ಹೆಚ್‌-1ಬಿ ಮತ್ತು ಎಲ್‌1 ವೀಸಾಗಳ ಮೇಲೆ ಕೆಲಸ ಮಾಡುತ್ತಿರುವ ಲಕ್ಷಾಂತರ ಭಾರತೀಯರಿದ್ದಾರೆ. ಈ ಪೈಕಿ ಹೆಚ್ಚಿನವರು ಅಮೆರಿಕದಲ್ಲಿ ಶಾಶ್ವತ ವಾಸಕ್ಕೆ ಅವಕಾಶ ಕಲ್ಪಿಸುವ ಗ್ರೀನ್ ಕಾರ್ಡ್‌ ಪಡೆಯಲು ಕ್ಯೂನಲ್ಲಿದ್ದಾರೆ. ಟ್ರಂಪ್ ಆದೇಶದಿಂದ ಇನ್ನು ಮುಂದೆ ಪೋಷಕರಲ್ಲಿ ಯಾರದರು ಒಬ್ಬರು ಅಮೆರಿಕದ ನಾಗರಿಕ ಅಥವಾ ಗ್ರೀನ್ ಕಾರ್ಡ್ ಹೊಂದಿರುವವರು ಅಲ್ಲದೇ ಇದ್ದರೆ, ಅಂತಹ ಮಕ್ಕಳಿಗೆ ಜನ್ಮದತ್ತ ಪೌರತ್ವ ಸಿಗುವುದಿಲ್ಲ.

ನ್ಯೂಜೆರ್ಸಿಯಲ್ಲಿ ಹೆರಿಗೆ ಆಸ್ಪತ್ರೆ ಹೊಂದಿರುವ ಭಾರತದ ವೈದ್ಯ ಡಾ. ಎಸ್. ಡಿ. ರಾಮಾ ಅವರಿಗೆ ಎಂಟು ಮತ್ತು ಒಂಭತ್ತು ತಿಂಗಳು ತುಂಬಿರುವ ಹಲವು ಗರ್ಭಿಣಿಯರಿಂದ ಸಿಸೇರಿಯನ್ ಹೆರಿಗೆ ಮಾಡಿಸಲು ಕೋರಿಕೆ ಬಂದಿದೆ. ಕೆಲ ಗರ್ಭಿಣಿಯರು ತಿಂಗಳು ಭರ್ತಿಯಾಗದಿದ್ದರೂ ಹೆರಿಗೆ ಮಾಡಿಸಲು ಕೋರುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಏಳು ತಿಂಗಳ ಗರ್ಭಿಣಿಯೊಬ್ಬರು ತನ್ನ ಪತಿಯೊಂದಿಗೆ ಅವಧಿಪೂರ್ವ ಹೆರಿಗೆಗೆ ನೋಂದಣಿ ಮಾಡಿಕೊಳ್ಳಲು ಬಂದಿದ್ದರು. ಮಾರ್ಚ್‌ವರೆಗೆ ಅವಳಿಗೆ ಹೆರಿಗೆ ಆಗುವುದಿಲ್ಲ” ಎಂದು ಡಾ. ರಮಾ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಟೆಕ್ಸಾಸ್‌ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಎಸ್.ಜಿ ಮುಕ್ಕಳ ಅವರು ಅವಧಿಪೂರ್ವ ಹೆರಿಗೆಯ ಅಪಾಯಗಳ ಕುರಿತು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಸುಮಾರು 20 ಜೋಡಿಗಳೊಂದಿಗೆ ಮಾತನಾಡಿದ್ದೇನೆ ಎಂದು ಅವರು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ.

ಸಿಸೇರಿಯನ್ ಹೆರಿಗೆ ಸಾಧ್ಯವಾದರೂ, ಅವಧಿಪೂರ್ಣ ಅದನ್ನು ಮಾಡಿಸದಂತೆ ನಾನು ದಂಪತಿಗಳಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಪೌರತ್ವ ಕಳೆದುಕೊಳ್ಳುವ ದಾವಂತದಲ್ಲಿ ಅವಧಿಪೂರ್ಣ ಹೆರಿಗೆ ಮಾಡಿಸುವುದರಿಂದ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ. ಒಂದು ಮಗುವನ್ನು ಹೊರ ತೆಗೆದರೂ, ಅದು ಶ್ವಾಸಕೋಶ, ಕಡಿಮೆ ತೂಕ, ನರದ ಸಮಸ್ಯೆಗಳನ್ನು ಎದುರಿಸಬಹುದು ಎಂದು ಡಾ. ಮುಕ್ಕಳ ಆತಂಕ ವ್ಯಕ್ತಪಡಿಸಿದ್ದಾರೆ.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...