Homeಮುಖಪುಟಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

ಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

- Advertisement -
- Advertisement -

ಭಾರತೀಯ ನ್ಯಾಯಾಲಯಗಳು ತನ್ನ ವೇದಿಕೆಯಲ್ಲಿನ ಮಾಹಿತಿಗೆ ಜಾಗತಿಕ ನಿರ್ಬಂಧ ಹೇರುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಲಿದ್ದು, ಇದು ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯುಂಟು ಮಾಡಲಿದೆ ಎಂದು ದೆಹಲಿ ಹೈಕೋರ್ಟ್‌ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್‌ ತಿಳಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಭಾರತದ ವ್ಯಾಪ್ತಿಯಲ್ಲಿ ತನ್ನ ಕಾನೂನು ಅನ್ವಯಿಸುವ ಭಾರತದ ಹಕ್ಕನ್ನು ಗೌರವಿಸುವುದಾಗಿ ಎಕ್ಸ್‌ ಕಾರ್ಪ್‌ ಅಫಿಡವಿಟ್‌ನಲ್ಲಿ ತಿಳಿಸಿದೆ ಎಂದು ವರದಿ ಹೇಳಿದೆ.

ಬೇರೆ ದೇಶಗಳ ಜನರು ಯಾವ ಮಾಹಿತಿ ನೋಡಬಹುದು ಎಂಬುವುದನ್ನು ಭಾರತದ ನ್ಯಾಯಾಲಯಗಳು ನಿರ್ಧರಿಸಬಹುದು ಎಂಬ ವಾದ ಒಪ್ಪುವುದಾದರೆ, ಪಾಕಿಸ್ತಾನ ಮತ್ತು ಚೀನಾದ ನ್ಯಾಯಾಲಯಗಳು ಇಂಟರ್‌ನೆಟ್‌ನಲ್ಲಿ ಭಾರತೀಯರು ಏನು ನೋಡಬಹುದು, ಏನು ನೋಡಬಾರದು ಎಂದು ಆದೇಶಿಸಬಹುದಾಗಿದೆ ಎಂದು ಎಕ್ಸ್ ವಾದಿಸಿದೆ.

“ಭಾರತದಲ್ಲಿ ಪೋಸ್ಟ್‌ ಕಾಣದಂತೆ ಮಾಡಬೇಕು ಎಂದು ಆದೇಶಿಸುವ ಬದಲು, ಎಲ್ಲಾ ದೇಶಗಳಲ್ಲಿ ಪೋಸ್ಟ್‌ ಕಾಣದಂತೆ ನಿರ್ಬಂಧಿಸಬೇಕು ಎಂಬುವುದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧ. ಇದು ಎಲ್ಲಾ ದೇಶಗಳ ಸಹಭಾಗಿತ್ವ ತತ್ವಕ್ಕೆ ವಿರುದ್ಧವಾಗಿದೆ. ಈ ಆದೇಶವು ನ್ಯಾಯಾಲಯದ ವ್ಯಾಪ್ತಿ ಮೀರಿದ್ದು, ಅಮೆರಿಕ ಸೇರಿದಂತೆ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯಾಗಬಹುದು. ಅಲ್ಲಿ ಭಿನ್ನವಾದ ಕಾನೂನು ಮತ್ತು ರಕ್ಷಣೆ ಅನ್ವಯಿಸುತ್ತದೆ” ಎಂದು ಎಕ್ಸ್‌ ಹೇಳಿದೆ.

ಭಾರತದ ಹೊರಗೆ ಇಲ್ಲಿನ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲಾಗದು ಎಂದಿರುವ ಎಕ್ಸ್‌ ಕಾರ್ಪ್‌, ಬಾಬಾ ರಾಮ್‌ದೇವ್‌ ಪ್ರಕರಣದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಗತಿಕ ನಿರ್ಬಂಧ ಆದೇಶವು ದೋಷಪೂರಿತ ಎಂದಿದೆ.

ಐಟಿ ಕಾಯ್ದೆಯ ಸೆಕ್ಷನ್‌ 79ರ ಅಡಿ ಜಾಗತಿಕವಾಗಿ ಮಾಹಿತಿ ತೆಗೆಯಲು ಆದೇಶಿಸಬಹುದು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಆದರೆ, ಈ ಸೆಕ್ಷನ್‌ ವಿನಾಯಿತಿ ನಿಬಂಧನೆ ಮಾತ್ರ ಆಗಿದೆ ಎಂದು ಎಕ್ಸ್ ವಾದಿಸಿದೆ.

ಹೈಕೋರ್ಟ್‌ ಆದೇಶದ ಹೊರತಾಗಿಯೂ ಪತ್ರಕರ್ತ ರಜತ್‌ ಶರ್ಮಾ ವಿರುದ್ಧದ ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ ಅನ್ನು ಭಾರತದಲ್ಲಿ ಮಾತ್ರ ತೆಗೆಯಲಾಗಿದೆ. ಜಾಗತಿಕ ಮಟ್ಟದಲ್ಲಿ ತೆಗೆದಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಎಕ್ಸ್‌ ಕಾರ್ಪ್‌ ಆಕ್ಷೇಪಣೆ ಸಲ್ಲಿಸಿದೆ.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ದೇಹದ ತೂಕದಲ್ಲಿ 100 ಗ್ರಾಂ ಹೆಚ್ಚಳ; ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ವಿನೇಶಾ ಫೋಗಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...