Homeಮುಖಪುಟಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

ಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

- Advertisement -
- Advertisement -

ಭಾರತೀಯ ನ್ಯಾಯಾಲಯಗಳು ತನ್ನ ವೇದಿಕೆಯಲ್ಲಿನ ಮಾಹಿತಿಗೆ ಜಾಗತಿಕ ನಿರ್ಬಂಧ ಹೇರುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಲಿದ್ದು, ಇದು ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯುಂಟು ಮಾಡಲಿದೆ ಎಂದು ದೆಹಲಿ ಹೈಕೋರ್ಟ್‌ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್‌ ತಿಳಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಭಾರತದ ವ್ಯಾಪ್ತಿಯಲ್ಲಿ ತನ್ನ ಕಾನೂನು ಅನ್ವಯಿಸುವ ಭಾರತದ ಹಕ್ಕನ್ನು ಗೌರವಿಸುವುದಾಗಿ ಎಕ್ಸ್‌ ಕಾರ್ಪ್‌ ಅಫಿಡವಿಟ್‌ನಲ್ಲಿ ತಿಳಿಸಿದೆ ಎಂದು ವರದಿ ಹೇಳಿದೆ.

ಬೇರೆ ದೇಶಗಳ ಜನರು ಯಾವ ಮಾಹಿತಿ ನೋಡಬಹುದು ಎಂಬುವುದನ್ನು ಭಾರತದ ನ್ಯಾಯಾಲಯಗಳು ನಿರ್ಧರಿಸಬಹುದು ಎಂಬ ವಾದ ಒಪ್ಪುವುದಾದರೆ, ಪಾಕಿಸ್ತಾನ ಮತ್ತು ಚೀನಾದ ನ್ಯಾಯಾಲಯಗಳು ಇಂಟರ್‌ನೆಟ್‌ನಲ್ಲಿ ಭಾರತೀಯರು ಏನು ನೋಡಬಹುದು, ಏನು ನೋಡಬಾರದು ಎಂದು ಆದೇಶಿಸಬಹುದಾಗಿದೆ ಎಂದು ಎಕ್ಸ್ ವಾದಿಸಿದೆ.

“ಭಾರತದಲ್ಲಿ ಪೋಸ್ಟ್‌ ಕಾಣದಂತೆ ಮಾಡಬೇಕು ಎಂದು ಆದೇಶಿಸುವ ಬದಲು, ಎಲ್ಲಾ ದೇಶಗಳಲ್ಲಿ ಪೋಸ್ಟ್‌ ಕಾಣದಂತೆ ನಿರ್ಬಂಧಿಸಬೇಕು ಎಂಬುವುದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧ. ಇದು ಎಲ್ಲಾ ದೇಶಗಳ ಸಹಭಾಗಿತ್ವ ತತ್ವಕ್ಕೆ ವಿರುದ್ಧವಾಗಿದೆ. ಈ ಆದೇಶವು ನ್ಯಾಯಾಲಯದ ವ್ಯಾಪ್ತಿ ಮೀರಿದ್ದು, ಅಮೆರಿಕ ಸೇರಿದಂತೆ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯಾಗಬಹುದು. ಅಲ್ಲಿ ಭಿನ್ನವಾದ ಕಾನೂನು ಮತ್ತು ರಕ್ಷಣೆ ಅನ್ವಯಿಸುತ್ತದೆ” ಎಂದು ಎಕ್ಸ್‌ ಹೇಳಿದೆ.

ಭಾರತದ ಹೊರಗೆ ಇಲ್ಲಿನ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲಾಗದು ಎಂದಿರುವ ಎಕ್ಸ್‌ ಕಾರ್ಪ್‌, ಬಾಬಾ ರಾಮ್‌ದೇವ್‌ ಪ್ರಕರಣದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಗತಿಕ ನಿರ್ಬಂಧ ಆದೇಶವು ದೋಷಪೂರಿತ ಎಂದಿದೆ.

ಐಟಿ ಕಾಯ್ದೆಯ ಸೆಕ್ಷನ್‌ 79ರ ಅಡಿ ಜಾಗತಿಕವಾಗಿ ಮಾಹಿತಿ ತೆಗೆಯಲು ಆದೇಶಿಸಬಹುದು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಆದರೆ, ಈ ಸೆಕ್ಷನ್‌ ವಿನಾಯಿತಿ ನಿಬಂಧನೆ ಮಾತ್ರ ಆಗಿದೆ ಎಂದು ಎಕ್ಸ್ ವಾದಿಸಿದೆ.

ಹೈಕೋರ್ಟ್‌ ಆದೇಶದ ಹೊರತಾಗಿಯೂ ಪತ್ರಕರ್ತ ರಜತ್‌ ಶರ್ಮಾ ವಿರುದ್ಧದ ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ ಅನ್ನು ಭಾರತದಲ್ಲಿ ಮಾತ್ರ ತೆಗೆಯಲಾಗಿದೆ. ಜಾಗತಿಕ ಮಟ್ಟದಲ್ಲಿ ತೆಗೆದಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಎಕ್ಸ್‌ ಕಾರ್ಪ್‌ ಆಕ್ಷೇಪಣೆ ಸಲ್ಲಿಸಿದೆ.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ದೇಹದ ತೂಕದಲ್ಲಿ 100 ಗ್ರಾಂ ಹೆಚ್ಚಳ; ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ವಿನೇಶಾ ಫೋಗಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...