Homeಮುಖಪುಟಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

ಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

- Advertisement -
- Advertisement -

ಭಾರತೀಯ ನ್ಯಾಯಾಲಯಗಳು ತನ್ನ ವೇದಿಕೆಯಲ್ಲಿನ ಮಾಹಿತಿಗೆ ಜಾಗತಿಕ ನಿರ್ಬಂಧ ಹೇರುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಲಿದ್ದು, ಇದು ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯುಂಟು ಮಾಡಲಿದೆ ಎಂದು ದೆಹಲಿ ಹೈಕೋರ್ಟ್‌ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್‌ ತಿಳಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಭಾರತದ ವ್ಯಾಪ್ತಿಯಲ್ಲಿ ತನ್ನ ಕಾನೂನು ಅನ್ವಯಿಸುವ ಭಾರತದ ಹಕ್ಕನ್ನು ಗೌರವಿಸುವುದಾಗಿ ಎಕ್ಸ್‌ ಕಾರ್ಪ್‌ ಅಫಿಡವಿಟ್‌ನಲ್ಲಿ ತಿಳಿಸಿದೆ ಎಂದು ವರದಿ ಹೇಳಿದೆ.

ಬೇರೆ ದೇಶಗಳ ಜನರು ಯಾವ ಮಾಹಿತಿ ನೋಡಬಹುದು ಎಂಬುವುದನ್ನು ಭಾರತದ ನ್ಯಾಯಾಲಯಗಳು ನಿರ್ಧರಿಸಬಹುದು ಎಂಬ ವಾದ ಒಪ್ಪುವುದಾದರೆ, ಪಾಕಿಸ್ತಾನ ಮತ್ತು ಚೀನಾದ ನ್ಯಾಯಾಲಯಗಳು ಇಂಟರ್‌ನೆಟ್‌ನಲ್ಲಿ ಭಾರತೀಯರು ಏನು ನೋಡಬಹುದು, ಏನು ನೋಡಬಾರದು ಎಂದು ಆದೇಶಿಸಬಹುದಾಗಿದೆ ಎಂದು ಎಕ್ಸ್ ವಾದಿಸಿದೆ.

“ಭಾರತದಲ್ಲಿ ಪೋಸ್ಟ್‌ ಕಾಣದಂತೆ ಮಾಡಬೇಕು ಎಂದು ಆದೇಶಿಸುವ ಬದಲು, ಎಲ್ಲಾ ದೇಶಗಳಲ್ಲಿ ಪೋಸ್ಟ್‌ ಕಾಣದಂತೆ ನಿರ್ಬಂಧಿಸಬೇಕು ಎಂಬುವುದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧ. ಇದು ಎಲ್ಲಾ ದೇಶಗಳ ಸಹಭಾಗಿತ್ವ ತತ್ವಕ್ಕೆ ವಿರುದ್ಧವಾಗಿದೆ. ಈ ಆದೇಶವು ನ್ಯಾಯಾಲಯದ ವ್ಯಾಪ್ತಿ ಮೀರಿದ್ದು, ಅಮೆರಿಕ ಸೇರಿದಂತೆ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯಾಗಬಹುದು. ಅಲ್ಲಿ ಭಿನ್ನವಾದ ಕಾನೂನು ಮತ್ತು ರಕ್ಷಣೆ ಅನ್ವಯಿಸುತ್ತದೆ” ಎಂದು ಎಕ್ಸ್‌ ಹೇಳಿದೆ.

ಭಾರತದ ಹೊರಗೆ ಇಲ್ಲಿನ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲಾಗದು ಎಂದಿರುವ ಎಕ್ಸ್‌ ಕಾರ್ಪ್‌, ಬಾಬಾ ರಾಮ್‌ದೇವ್‌ ಪ್ರಕರಣದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಗತಿಕ ನಿರ್ಬಂಧ ಆದೇಶವು ದೋಷಪೂರಿತ ಎಂದಿದೆ.

ಐಟಿ ಕಾಯ್ದೆಯ ಸೆಕ್ಷನ್‌ 79ರ ಅಡಿ ಜಾಗತಿಕವಾಗಿ ಮಾಹಿತಿ ತೆಗೆಯಲು ಆದೇಶಿಸಬಹುದು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಆದರೆ, ಈ ಸೆಕ್ಷನ್‌ ವಿನಾಯಿತಿ ನಿಬಂಧನೆ ಮಾತ್ರ ಆಗಿದೆ ಎಂದು ಎಕ್ಸ್ ವಾದಿಸಿದೆ.

ಹೈಕೋರ್ಟ್‌ ಆದೇಶದ ಹೊರತಾಗಿಯೂ ಪತ್ರಕರ್ತ ರಜತ್‌ ಶರ್ಮಾ ವಿರುದ್ಧದ ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ ಅನ್ನು ಭಾರತದಲ್ಲಿ ಮಾತ್ರ ತೆಗೆಯಲಾಗಿದೆ. ಜಾಗತಿಕ ಮಟ್ಟದಲ್ಲಿ ತೆಗೆದಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಎಕ್ಸ್‌ ಕಾರ್ಪ್‌ ಆಕ್ಷೇಪಣೆ ಸಲ್ಲಿಸಿದೆ.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ದೇಹದ ತೂಕದಲ್ಲಿ 100 ಗ್ರಾಂ ಹೆಚ್ಚಳ; ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ವಿನೇಶಾ ಫೋಗಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...