Homeಮುಖಪುಟಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಝೀ ನ್ಯೂಸ್‌ಗೆ ಅವರ ಚಾನೆಲ್‌ನಲ್ಲೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ

- Advertisement -
- Advertisement -

ಲೈವ್‌‌‌ ಇದೆ ಎಂದು ಖಚಿತಪಡಿಸಿ ಭಾರತೀಯ ಕ್ರಿಕೆಟ್ ಅಭಿಮಾನಿಯೊಬ್ಬರು ಝೀ ನ್ಯೂಸ್‌ ಅನ್ನು “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್” ಎಂದು ತರಾಟೆಗೆ ಪಡೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾರತ-ಇಂಗ್ಲೇಂಡ್‌ ಟಿ20 ವಿಶ್ವಕಪ್‌ ಸಮಿಫೈನಲ್‌‌‌ ಪಂದ್ಯದ ನಡೆದಿದೆ. ಕನಿಷ್ಠ ಪಕ್ಷ ಇಲ್ಲಾದರೂ ಕೋಮುವಾದ ಮಾಡಬೇಡಿ ಎಂದು ಅವರು ಕ್ಯಾಮರಾ ಮುಂದೆ ಹೇಳಿದ್ದು, ಅದು ಝೀ ನ್ಯೂಸ್‌ನಲ್ಲೆ ಲೈ‌ವ್‌ ಪ್ರಸಾರವಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಝೀ ನ್ಯೂಸ್‌ಗೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ. ಝೀ ನ್ಯೂಸ್‌ ದೇಶದ ಪ್ರಮುಖ ಸುದ್ದಿ ವಾಹಿನಿಯಾಗಿದ್ದು, ಅದು ತನ್ನ ಕೋಮುವಾದಿ ಕಾರ್ಯಕ್ರಮಗಳಿಗೆ ಪ್ರಸಿದ್ದವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್‌ ವಿರುದ್ಧ ಸೋತ ನಂತರ ಅಡಿಲೇಡ್‌ನಿಂದ ಈ ಲೈವ್‌ ಅನ್ನು ಝೀ ನ್ಯೂಸ್ ‌ಪ್ರಸಾರ ಮಾಡಿತ್ತು. ಪಂದ್ಯದ ಬಗ್ಗೆ ಝೀ ಟಿವಿಯು ಅಲ್ಲಿ ಅಭಿಮಾನಿಗಳ ಜೊತೆಗೆ ಅಭಿಪ್ರಾಯವನ್ನು ಕೇಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

“ನೋಡಿ, ಮೊದಲನೆಯದಾಗಿ ಇದು ಒಂದು ಆಟವಾಗಿದೆ. ನಮ್ಮ ಕೈಯಲ್ಲೋ, ಇನ್ನೊಬ್ಬ ಕೈಯ್ಯಲ್ಲೊ…ಎಲ್ಲವೂ ಸರಿ, ಬಿಡಿ” ಭಾರತೀಯ ಅಭಿಮಾನಿ ಝೀ ನ್ಯೂಸ್‌ ಕ್ಯಾಮೆರಾದ ಮುಂದೆ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, “ಇದು ಲೈವ್ ಆಗುತ್ತಿದೆಯೇ?” ಎಂದು ಅವರು ಕೇಳಿದ್ದು, ವರದಿಗಾರ ಹೌದು ಲೈವ್‌ ಆಗುತ್ತಿದೆ ಎಂದು ಹೇಳಿದ್ದಾರೆ. “ಸರಿ, ಇದು ಝೀ ಟಿವಿ, ಮೊದಲನೆಯದಾಗಿ ನಿಮಗೆ ಹೇಳಲು ಇಚ್ಛಿಸುವುದೇನೆಂದರೆ, ನಿಮಗೆ ಅಭ್ಯಂತರವಿಲ್ಲದಿದ್ದರೆ, ಕನಿಷ್ಠ ಇಲ್ಲಾದರೂ ಹಿಂದೂ-ಮುಸ್ಲಿಂ ಮಾಡಬೇಡಿ” ಎನ್ನುತ್ತಿದ್ದಂತೆ ವರದಿಗಾರ ಕ್ಯಾಮರಾವನ್ನು ತಿರುಗಿಸುತ್ತಾರೆ.

ಈ ವೇಳೆ ಯುವಕ, “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್‌‌” ಎಂದು ಕಿರುಚಿ ಹೇಳಿದ್ದಾರೆ. ಅವರು ಮಾತು ಝೀ ಟಿವಿಯಲ್ಲಿ ಲೈವ್‌ ಪ್ರಸಾರವಾಗಿದೆ.

ಝೀ ನ್ಯೂಸ್ ಆಗಾಗ್ಗೆ ದ್ವೇಷದ ಭಾಷಣವನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವರ್ಷದ ಆರಂಭದಲ್ಲಿ, ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ವು ಝೀ ಟಿವಿಗೆ ಮುಸ್ಲಿಂ ಜನಸಂಖ್ಯೆಯ ಮೇಲಿನ ಕಾರ್ಯಕ್ರಮವನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು. ಜೊತಗೆ ಚಾನೆಲ್‌ ಅಜೆಂಡಾಕ್ಕಾಗಿ ಇದನ್ನು ಮಾಡುತ್ತಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ಘಟನೆ ನಂತರ ನ್ಯೂಸ್ ಲಾಂಡ್ರಿ ಯುವಕನನ್ನು ಮಾತನಾಡಿಸಿದೆ. ವೂಲ್‌ವರ್ತ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಮತ್ತು ಕಳೆದ ಏಳು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿರುವ ಸಾಹಿಲ್ ಸರೋಯಾ, “ನನ್ನ ದೇಶದ ಮಾಧ್ಯಮಗಳ ಸ್ಥಿತಿ ನನ್ನನ್ನು ಅಸಮಾಧಾನಗೊಳಿಸಿದೆ” ಎಂದು ಹೇಳಿದ್ದಾರೆ.

“ನಾನು ಪ್ರತಿ ತಿಂಗಳು ಭಾರತಕ್ಕೆ ಹೋಗಲು ಸಾಧ್ಯವಿಲ್ಲ… ನಾನು ಮಾಡಬಹುದಾದ ಎಲ್ಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚು ತಲುಪುವುದಿಲ್ಲ. ಹಾಗಾಗಿ ನಿನ್ನೆ ನಾನು ಅಲ್ಲಿ ಝೀ ನ್ಯೂಸ್ ಮೈಕ್ ಅನ್ನು ನೋಡಿದೆ, ಆ ವೇಳೆ ಅವರು ಲೈವ್ ಆಗಿದ್ದರು. ಝೀಟಿವಿ ಏನು ಮಾಡುತ್ತಿದೆ ಮತ್ತು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ವೀಕ್ಷಕರಿಗೆ ಬಹಿರಂಗಪಡಿಸುವುದು ಅಥವಾ ಹೇಳುವುದು ನನ್ನ ಏಕೈಕ ಉದ್ದೇಶವಾಗಿತ್ತು.” ಎಂದು ಸಾಹಿಲ್ ಹೇಳಿದ್ದಾರೆ.

“ನಾನು ಅನೇಕ ವಿಷಯಗಳನ್ನು ಸಭ್ಯ ರೀತಿಯಲ್ಲಿ ಹೇಳಲು ಬಯಸಿದ್ದೆ. ಆದರೆ ವರದಿಗಾರ ನನ್ನನ್ನು ತಳ್ಳಿದ್ದರಿಂದ ನನಗೆ ಕೆಟ್ಟದು ಅನಿಸಿತು, ಹಾಗಾಗಿ ನಾನು ಅಲ್ಲಿಂದ ಹೊರಟೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಮತಗಣನೆಯಲ್ಲಿ ಚಿಲಿಯ ಹೊಸ ಸಂವಿಧಾನ ಸೋತದ್ದೇಕೆ? ಮಾಧ್ಯಮಗಳ ಪಾತ್ರವೇನು?

ಭಾರತದ ಮಾಧ್ಯಮದ ಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಆಸ್ಟ್ರೇಲಿಯಾದ ಮಾಧ್ಯಮಕ್ಕೆ ಭಾರತದ ಮಾಧ್ಯಮಗಳನ್ನು ಹೋಲಿಸುವುದಿಲ್ಲ. ಆದರೆ ನಮ್ಮ ಮಾಧ್ಯಮಗಳು ಅತ್ಯಂತ ಕೆಳಮಟ್ಟಕ್ಕೆ ಹೋಗಿವೆ ಮತ್ತು ಇಲ್ಲಿನ ಜನರು ಟಿವಿಯಲ್ಲಿ ಸರ್ಕಸ್ ಆಡುವ ಆಂಕರ್‌ಗಳನ್ನು ಗೇಲಿ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಭಾರತದ ಮಾಧ್ಯಮಗಳು ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ. ನನ್ನ ಬಾಲ್ಯದಲ್ಲಿ ಜನರು ಈ ವಿಷಯಗಳ ಬಗ್ಗೆ ಎಂದಿಗೂ ಜಗಳವಾಡಿಲ್ಲ. ಆದರೆ ಈಗ ಎಲ್ಲೆಡೆ, ಹಿಂದೂ-ಮುಸ್ಲಿಂ, ಹಿಂದೂ-ಮುಸ್ಲಿಂ ಎಂದು ಜಗಳಗಳಾಗುತ್ತಿವೆ. ಇದಕ್ಕೆಲ್ಲಾ ಕಾರಣ ಈ ಪ್ರೊಪಗಾಂಡ ವಾಹಿನಿಗಳು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯರು ಈಗಲೂ ಧರ್ಮದ ಆಧಾರದಲ್ಲಿ ಸ್ನೇಹಿತರನ್ನು ಹೊಂದುವುದಿಲ್ಲ ಮತ್ತು ವ್ಯವಹಾರ ಗಳನ್ನೂ ಮಾಡುವುದಿಲ್ಲ
    ಜಾತಿ ಧರ್ಮಗಳ ಆಧಾರದಲ್ಲಿ ವಿಭಜನೆ ಆಗುತ್ತಿರುವುದು ರಾಜಕಾರಣಿ ಮತ್ತು ಮಾಧ್ಯಮಗಳಿಂದ ಮಾತ್ರ.
    ನಿರ್ಲಕ್ಷವೇ ಪರಿಹಾರ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...